AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತ್ನಾಳ್​ಗೆ ಮಾಡಲು ಕೆಲಸ ಇಲ್ಲ, ಬಸ್ ನಿಲ್ದಾಣದಲ್ಲಿ ಕುಳಿತು ಜ್ಯೋತಿಷ್ಯ ಹೇಳಲಿ -ಮಧು ಬಂಗಾರಪ್ಪ

ಕಲಬುರಗಿಯಲ್ಲಿ ಸಚಿವ ಮಧು ಬಂಗಾರಪ್ಪ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ಸಂಸದ ಅನಂತಕುಮಾರ್ ಹೆಗಡೆ ಹಾಗೂ ಆರ್. ಅಶೋಕ್ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ನಾಯಕರ ಮನೆಯಲ್ಲಿ ಕೆಲಸ ಮಾಡೋರು ಕೂಡಾ ನಮ್ಮ ಗ್ಯಾರೆಂಟಿ ತೆಗೆದು ಕೊಳ್ತಿದ್ದಾರೆ. ಮೋದಿಯವರು ಇದನ್ನೂ ಕಾಪಿ ಮಾಡಿದ್ದಾರೆ‌ ಎಂದು ಮಧು ಬಂಗಾರಪ್ಪ ಕಿಡಿಕಾರಿದ್ದಾರೆ.

ಯತ್ನಾಳ್​ಗೆ ಮಾಡಲು ಕೆಲಸ ಇಲ್ಲ, ಬಸ್ ನಿಲ್ದಾಣದಲ್ಲಿ ಕುಳಿತು ಜ್ಯೋತಿಷ್ಯ ಹೇಳಲಿ -ಮಧು ಬಂಗಾರಪ್ಪ
ಮಧು ಬಂಗಾರಪ್ಪ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಆಯೇಷಾ ಬಾನು

Updated on:Mar 08, 2024 | 3:01 PM

ಕಲಬುರಗಿ, ಮಾರ್ಚ್​.08: ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ (Madhu Bangarappa) ವಾಗ್ದಾಳಿ ನಡೆಸಿದ್ದಾರೆ. ಯತ್ನಾಳ್​ಗೆ (Basanagouda Patil Yatnal) ಮಾಡಲು ಕೆಲಸ ಇಲ್ಲ, ಬಸ್ ನಿಲ್ದಾಣದಲ್ಲಿ ಕುಳಿತು ಜ್ಯೋತಿಷ್ಯ ಹೇಳೋಕೆ ಹೇಳಿ ಎಂದು ವಾಗ್ದಾಳಿ ನಡೆಸಿದ್ದಾರೆ. ಹಾಗೂ ಇದೇ ವೇಳೆ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ವಿರುದ್ಧವೂ ಕಿಡಿಕಾರಿದ್ದು ಹೆಗಡೆ ದೊಡ್ಡ ಹುಚ್ಚ, ಏಲೆಕ್ಷನ್ ಬರೋವರೆಗೂ ಮಲ್ಕೊಂಡಿರುತ್ತಾನೆ, ಏಲೆಕ್ಷನ್ ಬಂದ ತಕ್ಷಣ ಎದ್ದು ಬರ್ತಾನೆ ಎಂದಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ ಬಿಜೆಪಿ ನಾಯಕರ ವಿರುದ್ಧ ಕೆಂಡಕಾರಿದ್ದಾರೆ. ಕಾಂಗ್ರೆಸ್ ಜನರನ್ನ ಹುಚ್ಚರನ್ನಾಗಿ ಮಾಡ್ತಿದೆ ಎಂಬ ಸಂಸದ ಹೆಗೆಡೆ ಹೇಳಿಕೆಗೆ ತಿರುಗೇಟು ನೀಡಿದ ಮಧು ಬಂಗಾರಪ್ಪ, ಹೆಗಡೆ ದೊಡ್ಡ ಹುಚ್ಚ, ಏಲೆಕ್ಷನ್ ಬರೋವರೆಗೂ ಮಲ್ಕೊಂಡಿರುತ್ತಾನೆ, ಏಲೆಕ್ಷನ್ ಬಂದ ತಕ್ಷಣ ಎದ್ದು ಬರ್ತಾನೆ. ಈ ಭಾರಿ ಆತನನ್ನ ರಾಜಕೀಯವಾಗಿ ಪರ್ಮನೆಂಟ್ ಆಗಿ ಮಲಗಿಸುತ್ತೇವೆ. ಏಕವಚನದಲ್ಲಿ ಮಾತನಾಡೋದೆ ಅವರ ಮನೆ ಸಂಸ್ಕೃತಿ ಎಂದು ಹೆಗಡೆ ವಿರುದ್ದ ಮಧುಬಂಗಾರಪ್ಪ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಹೆಡ್ ಲೆಸ್ ಬಿಜೆಪಿಯಿತ್ತು. ಇವಾಗ ಆರ್​. ಅಶೋಕ್ ಅವರನ್ನು ಹೆಡ್ ಮಾಡಿದ್ದಾರೆ. ಆ ಮನುಷ್ಯನಿಗೆ ತಲೆ ಎಲ್ಲಿದೆ ಎನ್ನೋದೆ ಗೊತ್ತಿಲ್ಲ. ಏನೇನೋ ಹೇಳಿಕೆ ಕೊಡ್ತಾರೆ. ಎನ್​ಡಿಆರ್​ಎಫ್ ಪರಿಹಾರಕ್ಕೋಸ್ಕರ ಕಾಯಬಾರದು. ಹಾಗಿದ್ರೆ NDRF ತೆಗೆದುಬಿಡೋಕೆ ಹೇಳಿ‌‌. ರಾಜ್ಯದ ಬಡಜನರಿಗೆ ನಮ್ಮ ಗ್ಯಾರೆಂಟಿ ಅನೂಕುಲ ಆಗಿವೆ‌. ಬಿಜೆಪಿ ನಾಯಕರ ಮನೆಯಲ್ಲಿ ಕೆಲಸ ಮಾಡೋರು ಕೂಡಾ ನಮ್ಮ ಗ್ಯಾರೆಂಟಿ ತೆಗೆದು ಕೊಳ್ತಿದ್ದಾರೆ. ಮೋದಿಯವರು ಇದನ್ನೂ ಕಾಪಿ ಮಾಡಿದ್ದಾರೆ‌. ಮೊದಲು ಗ್ಯಾರೆಂಟಿಗೆ ವಾರೆಂಟಿ ಇಲ್ಲ ಅಂದ್ರೂ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಇದನ್ನೂ ಓದಿ: ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್​ ನಾಯಕರು ಕರಿಮಣಿ ಮಾಲೀಕ ನಾನಲ್ಲ ಅಂತಿದ್ದಾರೆ: ಅನಂತ್ ಕುಮಾರ್ ಹೆಗಡೆ ವ್ಯಂಗ್ಯ

ಇನ್ನು ಬಿಜೆಪಿ ಆಪರೇಷನ್ ಕಮಲ ವಿಚಾರ ಸಂಬಂಧ ಮಾತನಾಡಿದ ಸಚಿವರು, ಅವರ ಆಪರೇಷನ್ ನಾವು ಫೇಲ್ ಮಾಡ್ತೇವೆ. ಅವರು ಯಾವತ್ತೋ ಸಂವಿಧಾನಾತ್ಮಕವಾಗಿ ಅಧಿಕಾರಕ್ಕೆ ಬಂದಿಲ್ಲ. ಕಳೆದ ಭಾರಿ ಹೀಗ್ ಮಾಡೇ 67ಕ್ಕೆ ಬಂದಿದ್ದಾರೆ. ಮುಂದೆ ಹೀಗೆ ಮಾಡಿದ್ರೆ 37 ಕ್ಕೆ ಬರ್ತಾರೆ‌ ಎಂದರು.

ಪಾಕಿಸ್ತಾನ ಪರ ಘೋಷಣೆ ವಿಚಾರ ಸಂಬಂಧ ಮಾತನಾಡಿದ ಮಧು ಬಂಗಾರಪ್ಪ ಎಲ್ಲಾ ಕೂಗಲಿ, ಯಾರೇ ಕೂಗಲಿ ಅದು ತಪ್ಪು ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಬಾಂಬ್ ಬ್ಲಾಸ್ಟ್ ಆಯ್ತು, ಮುಂದೆ ಏನ್ ಮಾಡಬೇಕು ಎನ್ನೋದು ನೋಡಬೇಕು. ಅದು ಬಿಟ್ಟು ನಮ್ಮ ಮೇಲೆ ಆರೋಪ ಮಾಡಿದ್ರೆ. ಕರ್ನಾಟಕ ಏನು ಪಾಕಿಸ್ತಾನದಲ್ಲಿದಿಯಾ? ನಮ್ಮ ದೇಶದಲ್ಲೆ ಇರೋದು ತಾನೇ. ಹಾಗಿದ್ರೆ ಕೇಂದ್ರದ ಏಜೆನ್ಸಿಯವರು ಏನ್ ಮಾಡ್ತಿದ್ರು. ಅವನು ಎಲ್ಲಿಂದ ಬಂದ ಎನ್ನೋದು ಗೊತ್ತಿಲ್ವಾ? ಹಾಗಿದ್ರೆ ಅವರು ಏನ್ ಮಾಡ್ತಿದ್ರು?ಸುಮ್ನೆ ಆರೋಪ ಮಾಡೋದು ಬಿಡಬೇಕು. ಮಣಿಪುರದಲ್ಲಿ ಏನ್ ಆಗಿತ್ತು, ಬಿಜೆಪಿಯವರು ಒಬ್ಬರಾದ್ರು ಅಲ್ಲಿಗೆ ಹೋಗಿದ್ರಾ? ಎಂದು ಕಲಬುರಗಿಯಲ್ಲಿ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:36 pm, Fri, 8 March 24

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ