AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಪಿಯು ಪರೀಕ್ಷೆಯಲ್ಲಿ ತಂಗಿಗೆ ನಕಲು ಮಾಡಲು ಬಿಡದ ಪೊಲೀಸ್ ಮೇಲೆ ಅಣ್ಣನಿಂದ ಹಲ್ಲೆ

ತನ್ನ ತಂಗಿಗೆ ಪಿಯುಸಿ ಪರೀಕ್ಷೆಯಲ್ಲಿ ನಕಲು ಮಾಡಲು ಬಿಡದಕ್ಕೆ ಆಕ್ರೋಶಗೊಂಡ ಯುವಕನೊಬ್ಬ ಪೊಲೀಸ್ ಕಾನ್​ಸ್ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕರಜಗಿ ಪರೀಕ್ಷಾ ಕೇಂದ್ರದಲ್ಲಿ ಪೊಲೀಸ್ ಕಾನ್ಸ್​ಟೇಬಲ್​ ಮೇಲೆ ಹಲ್ಲೆ ನಡೆಸಲಾಗಿದ್ದು, ಇದರ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ.

ಕಲಬುರಗಿ: ಪಿಯು ಪರೀಕ್ಷೆಯಲ್ಲಿ ತಂಗಿಗೆ ನಕಲು ಮಾಡಲು ಬಿಡದ ಪೊಲೀಸ್ ಮೇಲೆ ಅಣ್ಣನಿಂದ ಹಲ್ಲೆ
ಕಲಬುರಗಿ: ಪಿಯು ಪರೀಕ್ಷೆಯಲ್ಲಿ ತಂಗಿಗೆ ನಕಲು ಮಾಡಲು ಬಿಡದ ಪೊಲೀಸ್ ಮೇಲೆ ಅಣ್ಣನಿಂದ ಹಲ್ಲೆ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Rakesh Nayak Manchi

Updated on: Mar 22, 2024 | 10:32 AM

ಕಲಬುರಗಿ, ಮಾ.22: ತನ್ನ ತಂಗಿಗೆ ಪಿಯುಸಿ ಪರೀಕ್ಷೆಯಲ್ಲಿ (PUC Exams) ನಕಲು ಮಾಡಲು ಬಿಡದಕ್ಕೆ ಆಕ್ರೋಶಗೊಂಡ ಯುವಕನೊಬ್ಬ ಪೊಲೀಸ್ ಕಾನ್​ಸ್ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯಲ್ಲಿ ನಡೆದಿದೆ. ಅಫಜಲಪುರ (Afzalpur) ತಾಲೂಕಿನ ಕರಜಗಿ (Karjgi) ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಘಟನೆ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದ್ದಾರೆ.

ರಾಜ್ಯಾದ್ಯಂತ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಇಂದು ಪರೀಕ್ಷೆಯ ಕೊನೆಯ ದಿನವಾಗಿದೆ. ಆದರೆ, ಕರಜಗಿ ಪರೀಕ್ಷಾ ಕೇಂದ್ರದಲ್ಲಿ ನಡೆದ ಪಿಯು ಪರೀಕ್ಷೆಯಲ್ಲಿ ತನ್ನ ತಂಗಿಗೆ ನಕಲು ಮಾಡಲು ಬಿಡಲಿಲ್ಲವೆಂಬ ಕಾರಣಕ್ಕೆ ಕೇಂದ್ರದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಕಾನ್ಸ್​ಟೇಬಲ್​ ಪಂಡಿತ್ ಪಾಂಡ್ರೆ ಮೇಲೆ ವಿದ್ಯಾರ್ಥಿನಿಯ ಅಣ್ಣ ಕೈಲಾಸ್ ಕೋಪಗೊಂಡಿದ್ದಾನೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಉರ್ದು, ಸಂಸ್ಕೃತ ಪರೀಕ್ಷೆಗೆ ಮೂವರೇ ವಿದ್ಯಾರ್ಥಿಗಳು ಹಾಜರು- 20 ಮಂದಿ ಸಿಬ್ಬಂದಿ ಕರ್ತವ್ಯ!

ಅಷ್ಟಕ್ಕೂ ಸುಮ್ಮನಾಗದ ಕೈಲಾಸ್, ನನ್ನ ತಂಗಿಗೆ ನಕಲು ಮಾಡಲು ಬಿಡಲ್ವಾ ಎಂದು ಬೈದು ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಈತನಿಗೆ ಸ್ನೇಹಿತ ಸಮೀರ್ ಕೂಡ ಸಾಥ್ ನೀಡಿದ್ದಾನೆ. ಸ್ಥಳೀಯರು ಘಟನೆಯ ದೃಶ್ಯವನ್ನು ಮೊಬೈಲ್ ಮೂಲಕ ಸೆರೆ ಹಿಡಿದಿದ್ದಾರೆ. ಪ್ರಕರಣ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೈಲಾಸ್ ಮತ್ತು ಸಮೀರ್​ನನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!