Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರ್ಗಿ ವಿವಿಯಲ್ಲೂ ಸಿಡಿ ಪ್ರಕರಣ; ಕೆಲಸದ ಆಮಿಷ ಒಡ್ಡಿ, ಮಹಿಳೆಯ ಬೆತ್ತಲೆ ವಿಡಿಯೋ ಹರಿಬಿಟ್ಟ ಆರೋಪ

ಕಲಬುರ್ಗಿಯ ವಿಶ್ವವಿದ್ಯಾನಿಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ, ವಿವಿಯ ಸಿಬ್ಬಂದಿಯೊಬ್ಬ ಖಾಯಂ ಕೆಲಸ ಕೊಡಿಸುವ ಆಮಿಷವೊಡ್ಡಿ ಬೆತ್ತಲೆ ವಿಡಿಯೋ ಕಳುಹಿಸಲು ಬೇಡಿಕೆ ಇಟ್ಟಿದ್ದರಂತೆ.

ಕಲಬುರ್ಗಿ ವಿವಿಯಲ್ಲೂ ಸಿಡಿ ಪ್ರಕರಣ; ಕೆಲಸದ ಆಮಿಷ ಒಡ್ಡಿ, ಮಹಿಳೆಯ ಬೆತ್ತಲೆ ವಿಡಿಯೋ ಹರಿಬಿಟ್ಟ ಆರೋಪ
ಪ್ರಾತಿನಿಧಿಕ ಚಿತ್ರ
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 06, 2021 | 3:22 PM

ಕಲಬುರ್ಗಿ: ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಅಶ್ಲೀಲ ಸಿಡಿ ಪ್ರಕರಣ ಈಗಾಗಲೇ ಎಸ್​ಐಟಿ ತನಿಖಾಧಿಕಾರಿಗಳ ಅಂಗಳ ಸೇರಿದೆ. ಎಲ್ಲಾ ತೆರನಾದ ಆರೋಪ ಪ್ರತ್ಯಾರೋಪಗಳಿಗೆ ಸಿಲುಕಿ ರಾದ್ಧಾಂತ ಮೂಡಿಸಿರುವ ಈ ಪ್ರಕರಣದ ಬೆನ್ನಲ್ಲೇ ಕಲಬುರ್ಗಿ ವಿಶ್ವವಿದ್ಯಾನಿಲಯದಲ್ಲಿ ನೌಕರಿಗಾಗಿ ಮಹಿಳಾ ಸಿಬ್ಬಂದಿಯನ್ನು ದುರುಪಯೋಗಪಡಿಸಿಕೊಂಡ ಸಂಗತಿಯೊಂದು ಬಯಲಾಗಿದೆ.

ಕಲಬುರ್ಗಿಯ ವಿಶ್ವವಿದ್ಯಾನಿಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ, ವಿವಿ ಗ್ರಂಥಾಲಯ ಅಧೀಕ್ಷಕ ಶರಣಪ್ಪ ಮಾಕುಂಡಿ ಎಂಬಾತ ಖಾಯಂ ಕೆಲಸ ಕೊಡಿಸುವ ಆಮಿಷವೊಡ್ಡಿ ಬೆತ್ತಲೆ ವಿಡಿಯೋ ಕಳುಹಿಸಲು ಬೇಡಿಕೆ ಇಟ್ಟಿದ್ದರಂತೆ. ಆಮಿಷಕ್ಕೆ ಮರುಳಾದ ಮಹಿಳೆ ತನ್ನ ಬೆತ್ತಲೆ ವಿಡಿಯೋಗಳನ್ನು ಆತನಿಗೆ ಕಳುಹಿಸಿಕೊಟ್ಟಿದ್ದಾರೆ. ಹೀಗೆ ಉದ್ಯೋಗ ಕೊಡಿಸುವುದಾಗಿ ಹೇಳಿದ್ದ ವ್ಯಕ್ತಿ ನಂತರದಲ್ಲಿ ವಿಡಿಯೋವನ್ನು ಬೇರೆ ಬೇರೆ ಗ್ರೂಪ್​ಗಳಲ್ಲಿ ಹಂಚಿದ್ದು ಬೆಳಕಿಗೆ ಬಂದಿದೆ.

ಪ್ರಸ್ತುತ ಈ ಬಗ್ಗೆ ಆಕ್ರೋಶಿತಳಾಗಿರುವ ಮಹಿಳೆ ತನಗೆ ಮೋಸ ಆಗಿದೆ ಎಂದು ಆರೋಪಿಸಿದ್ದಾರೆ. ಬೆತ್ತಲೆ ವಿಡಿಯೋ ಮಾಡಿ ಮೊಬೈಲ್​ಗೆ ಕಳುಹಿಸಿದರೆ ಖಾಯಂ ನೌಕರಿ ಕೊಡಿಸುತ್ತೇನೆ ಎಂದು ಆಮಿಷ ಒಡ್ಡಿದ್ದ ಶರಣಪ್ಪ, ಇದೀಗ ವಿಡಿಯೋವನ್ನು ಹಂಚಿಕೊಂಡಿರುವುದಾಗಿ ಆರೋಪ ಹೊರಿಸಿದ್ದಾರೆ. ಈ ಸಂಬಂಧ ವಿಶ್ವವಿದ್ಯಾಲಯ ಠಾಣೆಯಲ್ಲಿ ಶರಣಪ್ಪ ವಿರುದ್ಧ ಸೆಕ್ಷನ್ 292, 407, 420, 354 (ಎ) ಅಡಿ ದೂರು ದಾಖಲಾಗಿದೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೇ ಭೇಟಿ ನೀಡಿ ಆರೋಗ್ಯ ಸಂಬಂಧಿ ದಾಖಲೆ ಪರಿಶೀಲಿಸಿದ ಎಸ್​ಐಟಿ 

ಅಜ್ಞಾತ ಸ್ಥಳದಲ್ಲಿದ್ದು ಬೆತ್ತಲೆ ಪ್ರದರ್ಶನಕ್ಕೆ ಸಿದ್ಧವಾಗಿರುವ ಯುವತಿ ಬಗ್ಗೆ ನಾನೇಕೆ ಹೆದರಬೇಕು? ಎದುರಿಸ್ತೇನೆ- ರಮೇಶ್ ಜಾರಕಿಹೊಳಿ

ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ