AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರ್ಗಿ ವಿವಿಯಲ್ಲೂ ಸಿಡಿ ಪ್ರಕರಣ; ಕೆಲಸದ ಆಮಿಷ ಒಡ್ಡಿ, ಮಹಿಳೆಯ ಬೆತ್ತಲೆ ವಿಡಿಯೋ ಹರಿಬಿಟ್ಟ ಆರೋಪ

ಕಲಬುರ್ಗಿಯ ವಿಶ್ವವಿದ್ಯಾನಿಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ, ವಿವಿಯ ಸಿಬ್ಬಂದಿಯೊಬ್ಬ ಖಾಯಂ ಕೆಲಸ ಕೊಡಿಸುವ ಆಮಿಷವೊಡ್ಡಿ ಬೆತ್ತಲೆ ವಿಡಿಯೋ ಕಳುಹಿಸಲು ಬೇಡಿಕೆ ಇಟ್ಟಿದ್ದರಂತೆ.

ಕಲಬುರ್ಗಿ ವಿವಿಯಲ್ಲೂ ಸಿಡಿ ಪ್ರಕರಣ; ಕೆಲಸದ ಆಮಿಷ ಒಡ್ಡಿ, ಮಹಿಳೆಯ ಬೆತ್ತಲೆ ವಿಡಿಯೋ ಹರಿಬಿಟ್ಟ ಆರೋಪ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on: Apr 06, 2021 | 3:22 PM

Share

ಕಲಬುರ್ಗಿ: ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಅಶ್ಲೀಲ ಸಿಡಿ ಪ್ರಕರಣ ಈಗಾಗಲೇ ಎಸ್​ಐಟಿ ತನಿಖಾಧಿಕಾರಿಗಳ ಅಂಗಳ ಸೇರಿದೆ. ಎಲ್ಲಾ ತೆರನಾದ ಆರೋಪ ಪ್ರತ್ಯಾರೋಪಗಳಿಗೆ ಸಿಲುಕಿ ರಾದ್ಧಾಂತ ಮೂಡಿಸಿರುವ ಈ ಪ್ರಕರಣದ ಬೆನ್ನಲ್ಲೇ ಕಲಬುರ್ಗಿ ವಿಶ್ವವಿದ್ಯಾನಿಲಯದಲ್ಲಿ ನೌಕರಿಗಾಗಿ ಮಹಿಳಾ ಸಿಬ್ಬಂದಿಯನ್ನು ದುರುಪಯೋಗಪಡಿಸಿಕೊಂಡ ಸಂಗತಿಯೊಂದು ಬಯಲಾಗಿದೆ.

ಕಲಬುರ್ಗಿಯ ವಿಶ್ವವಿದ್ಯಾನಿಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ, ವಿವಿ ಗ್ರಂಥಾಲಯ ಅಧೀಕ್ಷಕ ಶರಣಪ್ಪ ಮಾಕುಂಡಿ ಎಂಬಾತ ಖಾಯಂ ಕೆಲಸ ಕೊಡಿಸುವ ಆಮಿಷವೊಡ್ಡಿ ಬೆತ್ತಲೆ ವಿಡಿಯೋ ಕಳುಹಿಸಲು ಬೇಡಿಕೆ ಇಟ್ಟಿದ್ದರಂತೆ. ಆಮಿಷಕ್ಕೆ ಮರುಳಾದ ಮಹಿಳೆ ತನ್ನ ಬೆತ್ತಲೆ ವಿಡಿಯೋಗಳನ್ನು ಆತನಿಗೆ ಕಳುಹಿಸಿಕೊಟ್ಟಿದ್ದಾರೆ. ಹೀಗೆ ಉದ್ಯೋಗ ಕೊಡಿಸುವುದಾಗಿ ಹೇಳಿದ್ದ ವ್ಯಕ್ತಿ ನಂತರದಲ್ಲಿ ವಿಡಿಯೋವನ್ನು ಬೇರೆ ಬೇರೆ ಗ್ರೂಪ್​ಗಳಲ್ಲಿ ಹಂಚಿದ್ದು ಬೆಳಕಿಗೆ ಬಂದಿದೆ.

ಪ್ರಸ್ತುತ ಈ ಬಗ್ಗೆ ಆಕ್ರೋಶಿತಳಾಗಿರುವ ಮಹಿಳೆ ತನಗೆ ಮೋಸ ಆಗಿದೆ ಎಂದು ಆರೋಪಿಸಿದ್ದಾರೆ. ಬೆತ್ತಲೆ ವಿಡಿಯೋ ಮಾಡಿ ಮೊಬೈಲ್​ಗೆ ಕಳುಹಿಸಿದರೆ ಖಾಯಂ ನೌಕರಿ ಕೊಡಿಸುತ್ತೇನೆ ಎಂದು ಆಮಿಷ ಒಡ್ಡಿದ್ದ ಶರಣಪ್ಪ, ಇದೀಗ ವಿಡಿಯೋವನ್ನು ಹಂಚಿಕೊಂಡಿರುವುದಾಗಿ ಆರೋಪ ಹೊರಿಸಿದ್ದಾರೆ. ಈ ಸಂಬಂಧ ವಿಶ್ವವಿದ್ಯಾಲಯ ಠಾಣೆಯಲ್ಲಿ ಶರಣಪ್ಪ ವಿರುದ್ಧ ಸೆಕ್ಷನ್ 292, 407, 420, 354 (ಎ) ಅಡಿ ದೂರು ದಾಖಲಾಗಿದೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೇ ಭೇಟಿ ನೀಡಿ ಆರೋಗ್ಯ ಸಂಬಂಧಿ ದಾಖಲೆ ಪರಿಶೀಲಿಸಿದ ಎಸ್​ಐಟಿ 

ಅಜ್ಞಾತ ಸ್ಥಳದಲ್ಲಿದ್ದು ಬೆತ್ತಲೆ ಪ್ರದರ್ಶನಕ್ಕೆ ಸಿದ್ಧವಾಗಿರುವ ಯುವತಿ ಬಗ್ಗೆ ನಾನೇಕೆ ಹೆದರಬೇಕು? ಎದುರಿಸ್ತೇನೆ- ರಮೇಶ್ ಜಾರಕಿಹೊಳಿ

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ