AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಸಾ ಬಂಡೂರಿ ನಾಲಾ ಯೋಜನೆ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಕಳಸಾ ಬಂಡೂರಿ ನಾಲಾ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಮುಖ್ಯ ವನ್ಯಜೀವಿ ವಾರ್ಡನ್ ಅಕ್ರಮ ಆದೇಶದ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸಿಎಂ ಪತ್ರದಲ್ಲೇನಿದೆ ಎಂಬುದು ಇಲ್ಲಿದೆ.

ಕಳಸಾ ಬಂಡೂರಿ ನಾಲಾ ಯೋಜನೆ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
Anil Kalkere
| Edited By: |

Updated on: Sep 19, 2024 | 8:06 AM

Share

ಬೆಂಗಳೂರು, ಸೆಪ್ಟೆಂಬರ್ 19: ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಸೆಪ್ಟೆಂಬರ್ 18ರಂದು ಪತ್ರ ಬರೆದಿರುವ ಸಿದ್ದರಾಮಯ್ಯ, ಪ್ರಧಾನಿಗೆ ಜನ್ಮದಿನದ (ಮೋದಿ ಜನ್ಮದಿನ ಸೆಪ್ಟೆಂಬರ್ 17ರಂದು) ಶುಭಾಶಯವನ್ನೂ ಕೋರಿದ್ದಾರೆ.

‘ಪ್ರಾರಂಭದಲ್ಲಿ ನಿಮ್ಮ ಜನ್ಮದಿನದಂದು ಶುಭಾಶಯಗಳನ್ನು ತಿಳಿಸುತ್ತೇನೆ. ನಾನು ನಿಮಗೆ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ಬಯಸುತ್ತೇನೆ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಮಹತ್ವದ ವಿಷಯವನ್ನು ನಿಮ್ಮ ತುರ್ತು ಗಮನಕ್ಕೆ ತರಲು ನಾನು ಈ ಪತ್ರ ಬರೆಯುತ್ತಿದ್ದೇನೆ’ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ಸಿದ್ದರಾಮಯ್ಯ ಬರೆದ ಪತ್ರದಲ್ಲೇನಿದೆ?

ಉತ್ತರ ಕರ್ನಾಟಕದ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ನಿರ್ಣಾಯಕವಾಗಿರುವ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಯು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ (MoEF&CC) ವನ್ಯಜೀವಿ ಅನುಮೋದನೆಗಾಗಿ ದೀರ್ಘಕಾಲದಿಂದ ಬಾಕಿ ಉಳಿದಿದೆ. ಮಹದಾಯಿ ವಾಟರ್ ಡಿಸ್​ಪ್ಯೂಟ್ ಟ್ರಿಬ್ಯೂನಲ್ ಅವಾರ್ಡ್ ಅನ್ನು 14-08-2018 ರಂದು ಘೋಷಿಸಲಾಯಿತು ಮತ್ತು 27-02-2020 ರಂದು ಭಾರತದ ಗೆಜೆಟ್‌ನಲ್ಲಿ ಪ್ರಕಟಿಸಲಾಯಿತು. ಕರ್ನಾಟಕ ರಾಜ್ಯಕ್ಕೆ ಒಟ್ಟು 13.42 ಟಿಎಂಸಿ ಹಂಚಿಕೆಯಾಗಿದೆ. ಅದರಲ್ಲಿ 3.9 ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ತಿರುಗಿಸಲು (ಕಳಸಾ ನಾಲಾದಿಂದ 1.72 ಟಿಎಂಸಿ ಮತ್ತು ಬಂಡೂರ ನಾಲಾದಿಂದ 2.18 ಟಿಎಂಸಿ) ರಾಜ್ಯ ಸರ್ಕಾರವು 16-06-2022 ರಂದು CWC ಗೆ ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆ (ಲಿಫ್ಟ್ ಯೋಜನೆಗಳು) ಮಾರ್ಪಡಿಸಿದ ಪೂರ್ವ-ಕಾರ್ಯಸಾಧ್ಯತಾ ವರದಿಯನ್ನು ಅನುಮೋದನೆಗಾಗಿ ಸಲ್ಲಿಸಿದೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. ವರದಿ ಸಲ್ಲಿಕೆ ಕುರಿತ ಪೋರ್ಟಲ್ ಸಂಖ್ಯೆಯನ್ನೂ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ತಡೆಗೆ ಸಿದ್ದರಾಮಯ್ಯ ಸರ್ಕಾರ ದಿಟ್ಟ ಹೆಜ್ಜೆ, ಡ್ರಗ್ಸ್ ಕಡಿವಾಣಕ್ಕೆ ಟಾಸ್ಕ್ ಫೋರ್ಸ್ ರಚನೆ

ಈ ಪ್ರಸ್ತಾವನೆಯು ಎಲ್ಲಾ ಅಗತ್ಯ ಪೂರ್ವಾಪೇಕ್ಷಿತಗಳನ್ನು ಪೂರೈಸಿದೆ ಮತ್ತು ವಿವರವಾದ ಸಮರ್ಥನೆಗಳನ್ನು ಒದಗಿಸಿದೆ. ಆದಾಗ್ಯೂ, ಇಲ್ಲಿಯವರೆಗೆ ನೀವು ಅಧ್ಯಕ್ಷರಾಗಿರುವ ವನ್ಯಜೀವಿ ರಾಷ್ಟ್ರೀಯ ಮಂಡಳಿಯು ಅಗತ್ಯ ಅನುಮತಿಯನ್ನು ನೀಡಿಲ್ಲ. ಗೋವಾದ ಮುಖ್ಯ ವನ್ಯಜೀವಿ ವಾರ್ಡನ್ ಕಳಸಾ ಬಂಡೂರಿಯಲ್ಲಿ ಕರ್ನಾಟಕ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳದಂತೆ ಕಾನೂನುಬಾಹಿರ ಆದೇಶವನ್ನು ಹೊರಡಿಸಿದ್ದಾರೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?