AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕನ ಮರ್ಮಾಂಗ ಕತ್ತರಿಸಿ, ಚಿತ್ರಹಿಂಸೆ ನೀಡಿ ಕೊಲೆ: ಭೀಮಾ ನದಿಯ ದಡದಲ್ಲಿ ವಿದ್ಯಾರ್ಥಿ ಶವ ಪತ್ತೆ

ಶುಕ್ರವಾರ ರಾತ್ರಿ ಭೀಮಾ ನದಿಯಲ್ಲಿ ಬಾಲಕನ ಶವ ಪತ್ತೆಯಾದ ನಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಮೃತ ವ್ಯಕ್ತಿಯನ್ನು 7 ನೇ ತರಗತಿಯ ವಿದ್ಯಾರ್ಥಿ ಮಹೇಶ್ ಕೊಳ್ಳಿ(14) ಎಂದು ಗುರುತಿಸಲಾಗಿದೆ.

ಬಾಲಕನ ಮರ್ಮಾಂಗ ಕತ್ತರಿಸಿ, ಚಿತ್ರಹಿಂಸೆ ನೀಡಿ ಕೊಲೆ: ಭೀಮಾ ನದಿಯ ದಡದಲ್ಲಿ ವಿದ್ಯಾರ್ಥಿ ಶವ ಪತ್ತೆ
ಪ್ರಾತಿನಿಧಿಕ ಚಿತ್ರ
preethi shettigar
|

Updated on:Mar 01, 2021 | 2:55 PM

Share

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದಲ್ಲಿ 14 ವರ್ಷದ ಬಾಲಕನ್ನು ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದು, ಬಾಲಕನ ಮೂಗು ಮತ್ತು ಮರ್ಮಾಂಗ ಕತ್ತರಿಸಿ ಹತ್ಯೆಗೈಯಲಾಗಿದೆ. ಶುಕ್ರವಾರ ರಾತ್ರಿ ಭೀಮಾ ನದಿಯಲ್ಲಿ ಬಾಲಕನ ಶವ ಪತ್ತೆಯಾದ ನಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಮೃತ ವ್ಯಕ್ತಿಯನ್ನು 7 ನೇ ತರಗತಿಯ ವಿದ್ಯಾರ್ಥಿ ಮಹೇಶ್ ಕೊಳ್ಳಿ (14) ಎಂದು ಗುರುತಿಸಲಾಗಿದೆ.

ಕಳೆದ ಒಂದು ವರ್ಷದಿಂದ ಕೋವಿಡ್ -19 ಕಾರಣ ಶಾಲೆಯನ್ನು ಮುಚ್ಚಿದ್ದರಿಂದ ಬಾಲಕ ಮನೆಯಲ್ಲೇ ಕಾಲ ಕಳೆಯುತ್ತಿದ್ದು, ಸೋಮವಾರ ಸಂಜೆ ಮನೆಯಿಂದ ಹೊರ ಹೋಗಿದ್ದ ಬಾಲಕ ನಾಲ್ಕು ದಿನಗಳ ನಂತರ ಅಂದರೆ ಶುಕ್ರವಾರ ನದಿಯ ದಂಡೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಹತ್ಯೆಯ ಹಿಂದಿನ ಉದ್ದೇಶದ ಬಗ್ಗೆ ಇನ್ನೂ ಕೂಡ ಯಾವುದೇ ಸುಳಿವು ಸಿಕ್ಕಿಲ್ಲ.

ಪೊಲೀಸರ ಪ್ರಕಾರ, ಬಾಲಕನನ್ನು ಕೊಲೆ ಮಾಡುವ ಮೊದಲು ಬಲವಂತವಾಗಿ ಮದ್ಯಪಾನ ಮಾಡಿಸಿದ್ದಾರೆ. ನಂತರ ಮತ್ತು ಬರಿಸುವ ಔಷಧ ನೀಡಿ, ಬಾಲಕನ ಮೂಗು ಮತ್ತು ಮರ್ಮಾಂಗವನ್ನು ಕತ್ತರಿಸಿದ್ದಾರೆ. ಇಷ್ಟೇ ಅಲ್ಲದೇ ಮುಖಕ್ಕೆ ಗುದ್ದಿ, ಹಲ್ಲಗಳನ್ನು ಕಿತ್ತುಹಾಕಿದ್ದು, ಚಿತ್ರಹಿಂಸೆ ನೀಡಿದ್ದಾರೆ. ದುಷ್ಕರ್ಮಿಗಳು ಬಾಲಕನಿಗೆ ಹಿಂಸೆ ನೀಡಿ ಕೊಲೆ ಮಾಡಿದ ನಂತರ, ಆತನ ದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ ಭೀಮಾ ನದಿಗೆ ಎಸೆದಿದ್ದಾರೆ ಎಂದು ತಿಳಿಸಿದ್ದಾರೆ.

ಸ್ವಲ್ಪ ದಿನಗಳ ಹಿಂದೆ ಮಹೇಶ್ ಅನ್ಯ ಕೋಮಿನ ಬಾಲಕಿಯೊಬ್ಬಳಿಗೆ ಮೊಬೈಲ್ ಫೋನ್ ಕೊಡಿಸಿದ್ದ, ಇಬ್ಬರೂ ಆಗಾಗ ಕರೆ ಮಾಡಿ ಮಾತನಾಡುತ್ತಿದ್ದರು. ಈ ವಿಷಯ ಆತನ ಕುಟುಂಬದವರಿಗೆ ಗೊತ್ತಾಗಿ ಈ ರೀತಿಯ ಕೃತ್ಯ ಎಸಗಿದ್ದಾರೆ. ಬಾಲಕಿಯ ಮನೆಯವರ ಮೇಲೆಯೇ ಅನುಮಾನವಿದೆ ಎಂದು ಕೊಲೆಯಾದ ಬಾಲಕನ ತಾಯಿ ಭೀಮಾಬಾಯಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಯೋಗೀಶ್‌ಗೌಡ ಕೊಲೆ ಕೇಸ್‌ನಲ್ಲಿ ವಿನಯ್‌ಗೆ ಜೈಲು: ವಿನಯ್ ಕುಲಕರ್ಣಿ ನಿವಾಸಕ್ಕೆ ನಟ ದರ್ಶನ್ ಭೇಟಿ

Published On - 2:41 pm, Mon, 1 March 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ