AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕನ ಮರ್ಮಾಂಗ ಕತ್ತರಿಸಿ, ಚಿತ್ರಹಿಂಸೆ ನೀಡಿ ಕೊಲೆ: ಭೀಮಾ ನದಿಯ ದಡದಲ್ಲಿ ವಿದ್ಯಾರ್ಥಿ ಶವ ಪತ್ತೆ

ಶುಕ್ರವಾರ ರಾತ್ರಿ ಭೀಮಾ ನದಿಯಲ್ಲಿ ಬಾಲಕನ ಶವ ಪತ್ತೆಯಾದ ನಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಮೃತ ವ್ಯಕ್ತಿಯನ್ನು 7 ನೇ ತರಗತಿಯ ವಿದ್ಯಾರ್ಥಿ ಮಹೇಶ್ ಕೊಳ್ಳಿ(14) ಎಂದು ಗುರುತಿಸಲಾಗಿದೆ.

ಬಾಲಕನ ಮರ್ಮಾಂಗ ಕತ್ತರಿಸಿ, ಚಿತ್ರಹಿಂಸೆ ನೀಡಿ ಕೊಲೆ: ಭೀಮಾ ನದಿಯ ದಡದಲ್ಲಿ ವಿದ್ಯಾರ್ಥಿ ಶವ ಪತ್ತೆ
ಪ್ರಾತಿನಿಧಿಕ ಚಿತ್ರ
preethi shettigar
|

Updated on:Mar 01, 2021 | 2:55 PM

Share

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದಲ್ಲಿ 14 ವರ್ಷದ ಬಾಲಕನ್ನು ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದು, ಬಾಲಕನ ಮೂಗು ಮತ್ತು ಮರ್ಮಾಂಗ ಕತ್ತರಿಸಿ ಹತ್ಯೆಗೈಯಲಾಗಿದೆ. ಶುಕ್ರವಾರ ರಾತ್ರಿ ಭೀಮಾ ನದಿಯಲ್ಲಿ ಬಾಲಕನ ಶವ ಪತ್ತೆಯಾದ ನಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಮೃತ ವ್ಯಕ್ತಿಯನ್ನು 7 ನೇ ತರಗತಿಯ ವಿದ್ಯಾರ್ಥಿ ಮಹೇಶ್ ಕೊಳ್ಳಿ (14) ಎಂದು ಗುರುತಿಸಲಾಗಿದೆ.

ಕಳೆದ ಒಂದು ವರ್ಷದಿಂದ ಕೋವಿಡ್ -19 ಕಾರಣ ಶಾಲೆಯನ್ನು ಮುಚ್ಚಿದ್ದರಿಂದ ಬಾಲಕ ಮನೆಯಲ್ಲೇ ಕಾಲ ಕಳೆಯುತ್ತಿದ್ದು, ಸೋಮವಾರ ಸಂಜೆ ಮನೆಯಿಂದ ಹೊರ ಹೋಗಿದ್ದ ಬಾಲಕ ನಾಲ್ಕು ದಿನಗಳ ನಂತರ ಅಂದರೆ ಶುಕ್ರವಾರ ನದಿಯ ದಂಡೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಹತ್ಯೆಯ ಹಿಂದಿನ ಉದ್ದೇಶದ ಬಗ್ಗೆ ಇನ್ನೂ ಕೂಡ ಯಾವುದೇ ಸುಳಿವು ಸಿಕ್ಕಿಲ್ಲ.

ಪೊಲೀಸರ ಪ್ರಕಾರ, ಬಾಲಕನನ್ನು ಕೊಲೆ ಮಾಡುವ ಮೊದಲು ಬಲವಂತವಾಗಿ ಮದ್ಯಪಾನ ಮಾಡಿಸಿದ್ದಾರೆ. ನಂತರ ಮತ್ತು ಬರಿಸುವ ಔಷಧ ನೀಡಿ, ಬಾಲಕನ ಮೂಗು ಮತ್ತು ಮರ್ಮಾಂಗವನ್ನು ಕತ್ತರಿಸಿದ್ದಾರೆ. ಇಷ್ಟೇ ಅಲ್ಲದೇ ಮುಖಕ್ಕೆ ಗುದ್ದಿ, ಹಲ್ಲಗಳನ್ನು ಕಿತ್ತುಹಾಕಿದ್ದು, ಚಿತ್ರಹಿಂಸೆ ನೀಡಿದ್ದಾರೆ. ದುಷ್ಕರ್ಮಿಗಳು ಬಾಲಕನಿಗೆ ಹಿಂಸೆ ನೀಡಿ ಕೊಲೆ ಮಾಡಿದ ನಂತರ, ಆತನ ದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ ಭೀಮಾ ನದಿಗೆ ಎಸೆದಿದ್ದಾರೆ ಎಂದು ತಿಳಿಸಿದ್ದಾರೆ.

ಸ್ವಲ್ಪ ದಿನಗಳ ಹಿಂದೆ ಮಹೇಶ್ ಅನ್ಯ ಕೋಮಿನ ಬಾಲಕಿಯೊಬ್ಬಳಿಗೆ ಮೊಬೈಲ್ ಫೋನ್ ಕೊಡಿಸಿದ್ದ, ಇಬ್ಬರೂ ಆಗಾಗ ಕರೆ ಮಾಡಿ ಮಾತನಾಡುತ್ತಿದ್ದರು. ಈ ವಿಷಯ ಆತನ ಕುಟುಂಬದವರಿಗೆ ಗೊತ್ತಾಗಿ ಈ ರೀತಿಯ ಕೃತ್ಯ ಎಸಗಿದ್ದಾರೆ. ಬಾಲಕಿಯ ಮನೆಯವರ ಮೇಲೆಯೇ ಅನುಮಾನವಿದೆ ಎಂದು ಕೊಲೆಯಾದ ಬಾಲಕನ ತಾಯಿ ಭೀಮಾಬಾಯಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಯೋಗೀಶ್‌ಗೌಡ ಕೊಲೆ ಕೇಸ್‌ನಲ್ಲಿ ವಿನಯ್‌ಗೆ ಜೈಲು: ವಿನಯ್ ಕುಲಕರ್ಣಿ ನಿವಾಸಕ್ಕೆ ನಟ ದರ್ಶನ್ ಭೇಟಿ

Published On - 2:41 pm, Mon, 1 March 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?