AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿನ ಎಲ್ಲಾ ದಾಖಲೆ ಉಡೀಸ್: ಹೊಸ ದಾಖಲೆ ನಿರ್ಮಿಸಿದ ಕಂಬಳ ವೀರ!

ಮಂಗಳೂರು: ಉಕ್ಕಿನಂತಹ ದೇಹ.. ಶರವೇಗದಲ್ಲಿ ಗುರಿ ಮುಟ್ಟೋ ವೇಗ. ಒಂದ್ಸಲ ಕೆಸರುಗದ್ದೆಗೆ ಕಾಲಿಟ್ರೆ ಗೆಲುವಿನ ಕೇಕೆ ಹಾಕ್ತಿರೋದೆ.. ಹೆಜ್ಜೆ ಇಟ್ರೆ ಸಾಕು ಚಿನ್ನದ ಬೇಟೆ ಫಿಕ್ಸ್.. FLOW.. ಇದೇ ಮಿಂಚಿನ ಓಟ.. ಇದೇ ರಣೋತ್ಸಾಹ.. ಇದೇ ಛಲ.. ಕರಾವಳಿಯ ಉಸೇನ್​ ಬೋಲ್ಟ್.. ಕಂಬಳದ ವೀರ ಶ್ರೀನಿವಾಸ ಗೌಡನತ್ತ ಎಲ್ಲರೂ ತಿರುಗಿ ನೋಡ್ತಿದ್ದಾರೆ. ಯೆಸ್​.. ದೇಶಾದ್ಯಂತ ಸದ್ದು ಮಾಡ್ತಿರೋ.. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಹಲ್​ಚಲ್ ಸೃಷ್ಟಿಸಿರೋ ಕಂಬಳದ ಕುವರ ಶ್ರೀನಿವಾಸ್​​​ ಗೌಡ ಅಂದ್ರೆ ಮನೆ ಮಾತಾಗಿದ್ದಾರೆ. ದಕ್ಷಿಣಕನ್ನಡ ಜಿಲ್ಲೆ […]

ಹಿಂದಿನ ಎಲ್ಲಾ ದಾಖಲೆ ಉಡೀಸ್: ಹೊಸ ದಾಖಲೆ ನಿರ್ಮಿಸಿದ ಕಂಬಳ ವೀರ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 24, 2020 | 12:21 PM

Share

ಮಂಗಳೂರು: ಉಕ್ಕಿನಂತಹ ದೇಹ.. ಶರವೇಗದಲ್ಲಿ ಗುರಿ ಮುಟ್ಟೋ ವೇಗ. ಒಂದ್ಸಲ ಕೆಸರುಗದ್ದೆಗೆ ಕಾಲಿಟ್ರೆ ಗೆಲುವಿನ ಕೇಕೆ ಹಾಕ್ತಿರೋದೆ.. ಹೆಜ್ಜೆ ಇಟ್ರೆ ಸಾಕು ಚಿನ್ನದ ಬೇಟೆ ಫಿಕ್ಸ್.. FLOW.. ಇದೇ ಮಿಂಚಿನ ಓಟ.. ಇದೇ ರಣೋತ್ಸಾಹ.. ಇದೇ ಛಲ.. ಕರಾವಳಿಯ ಉಸೇನ್​ ಬೋಲ್ಟ್.. ಕಂಬಳದ ವೀರ ಶ್ರೀನಿವಾಸ ಗೌಡನತ್ತ ಎಲ್ಲರೂ ತಿರುಗಿ ನೋಡ್ತಿದ್ದಾರೆ.

ಯೆಸ್​.. ದೇಶಾದ್ಯಂತ ಸದ್ದು ಮಾಡ್ತಿರೋ.. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಹಲ್​ಚಲ್ ಸೃಷ್ಟಿಸಿರೋ ಕಂಬಳದ ಕುವರ ಶ್ರೀನಿವಾಸ್​​​ ಗೌಡ ಅಂದ್ರೆ ಮನೆ ಮಾತಾಗಿದ್ದಾರೆ. ದಕ್ಷಿಣಕನ್ನಡ ಜಿಲ್ಲೆ ಮೂಡಬಿದ್ರೆ ತಾಲೂಕಿನ ಮಿಜಾರು ನಿವಾಸಿ ಶ್ರೀನಿವಾಸ್ ಗೌಡ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.

ಹಿಂದಿನ ಎಲ್ಲಾ ದಾಖಲೆ ಉಡೀಸ್: ಕೆಸರು ಗದ್ದೆಯಲ್ಲಿ ಕೋಣಗಳ ಜೊತೆ ಮಿಂಚಿನಂತೆ ಹೆಜ್ಜೆ ಇಡೋ ಶ್ರೀನಿವಾಸ ಗೌಡ ಹಿಂದಿನ ಎಲ್ಲಾ ದಾಖಲೆಗಳನ್ನು ಉಡೀಸ್ ಮಾಡಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆ ಪೈವಳಿಕೆ ಬೋಳಂಗಳದಲ್ಲಿ ನಡೆದ ಕಂಬಳದಲ್ಲಿ ಎರಡು ಚಿನ್ನ ಮತ್ತು ಎರಡು ಬೆಳ್ಳಿ ಪದಕ ಪಡೆದಿದ್ದಾರೆ. ಈ ಮೂಲಕ ಕಂಬಳ ಇತಿಹಾಸದಲ್ಲೇ ಒಂದೇ ವರ್ಷದಲ್ಲಿ 39 ಚಿನ್ನದ ಪದಕ ಪಡೆಯೋ ಮೂಲಕ ನಂಬರ್ ಒನ್ ಪಟ್ಟ ಗಟ್ಟಿ ಮಾಡ್ಕೊಂಡಿದ್ದಾರೆ.

ಇನ್ನು, ಫೆಬ್ರವರಿ 2 ರಂದು ಐಕಳದಲ್ಲಿ ನಡೆದಿದ್ದ ಕಂಬಳದಲ್ಲಿ 143 ಮೀಟರ್ ದೂರವನ್ನು 12.46 ಸೆಕೆಂಡ್ ಕ್ರಮಿಸಿ ರೆಕಾರ್ಡ್ ಮಾಡಿದ್ರು. ಇದೀಗ ಕಾಸರಗೋಡು ಜಿಲ್ಲೆಯಲ್ಲಿ ನಡೆದ ಹಗ್ಗ ಮತ್ತು ನೇಗಿಲು ವಿಭಾಗದಲ್ಲಿ ಮಿಂಚಿನಂತೆ ಓಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ರು.

ಒಟ್ನಲ್ಲಿ ಕರಾವಳಿಯಲ್ಲಿ ನಡೆಯೋ ಸ್ಪೆಷಲ್ ಕ್ರೀಡೆ ಕಂಬಳದಲ್ಲಿ ಶ್ರೀನಿವಾಸಗೌಡ ಸಾಧನೆಯ ಶಿಖರವನ್ನೇರಿದ್ದಾರೆ. ಕಂಬಳ ಸೀಜನ್​ನಲ್ಲಿ ಇನ್ನೂ ಎರಡ್ಮೂರು ಕಂಬಳ ನಡೆಯಲಿದ್ದು ಅಲ್ಲೂ ಚಿನ್ನದ ಬೇಟೆಯಾಡೋಕೆ ಕರಾವಳಿ ಉಸೇನ್ ಬೋಲ್ಟ್ ಕಣ್ಣಿಟ್ಟಿದ್ದಾರೆ.

Published On - 12:21 pm, Mon, 24 February 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ