AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಉಸೇನ್ ಬೋಲ್ಟ್​ಗಾಗಿ ಪೈಪೋಟಿ: ಮತ್ತೆ ಮೊದಲ ಸ್ಥಾನ ಅಲಂಕರಿಸಿದ ಶ್ರೀನಿವಾಸ್!

ಮಂಗಳೂರು: ಕಟ್ಟು ಮಸ್ತಾದ ದೇಹ.. ಮಿಂಚಿನಂಥಾ ವೇಗ.. ಶರವೇಗದ ಓಟ. ಇಂಥಾ ದಾಖಲೆಯ ರನ್ನಿಂಗ್​ನಿಂದಲೇ ಇಡೀ ದೇಶಾದ್ಯಂತ ಸದ್ದು ಮಾಡಿದ್ದು ಇದೇ ಶ್ರೀನಿವಾಸಗೌಡ. ಕರಾವಳಿಯ ಉಸೇನ್ ಬೋಲ್ಟ್ ಅಂತಲೇ ಫೇಮಸ್ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ತಾಲೂಕಿನ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಕಂಬಳ ಓಟದಲ್ಲಿ ದಾಖಲೆ ಬರೆದಿದ್ದಾರೆ. ಆದ್ರೆ, ಆ ದಾಖಲೆಯನ್ನ ಕರಾವಳಿಯ ಮತ್ತೊಬ್ಬ ಓಟಗಾರ ನಿಶಾಂತ್ ಶೆಟ್ಟಿ ಮೀರಿಸಿದ್ರು ಅಂತಾ ಹೇಳಲಾಗಿತ್ತು. ಆದ್ರೀಗ ಮತ್ತೆ ಶ್ರೀನಿವಾಸಗೌಡ ಆ ದಾಖಲೆಯನ್ನೂ ಮುರಿದಿದ್ದು, ಮತ್ತೆ ಮೊದಲ […]

ಕರ್ನಾಟಕದ ಉಸೇನ್ ಬೋಲ್ಟ್​ಗಾಗಿ ಪೈಪೋಟಿ: ಮತ್ತೆ ಮೊದಲ ಸ್ಥಾನ ಅಲಂಕರಿಸಿದ ಶ್ರೀನಿವಾಸ್!
ಸಾಧು ಶ್ರೀನಾಥ್​
|

Updated on: Feb 19, 2020 | 7:47 AM

Share

ಮಂಗಳೂರು: ಕಟ್ಟು ಮಸ್ತಾದ ದೇಹ.. ಮಿಂಚಿನಂಥಾ ವೇಗ.. ಶರವೇಗದ ಓಟ. ಇಂಥಾ ದಾಖಲೆಯ ರನ್ನಿಂಗ್​ನಿಂದಲೇ ಇಡೀ ದೇಶಾದ್ಯಂತ ಸದ್ದು ಮಾಡಿದ್ದು ಇದೇ ಶ್ರೀನಿವಾಸಗೌಡ. ಕರಾವಳಿಯ ಉಸೇನ್ ಬೋಲ್ಟ್ ಅಂತಲೇ ಫೇಮಸ್ ಆಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ತಾಲೂಕಿನ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಕಂಬಳ ಓಟದಲ್ಲಿ ದಾಖಲೆ ಬರೆದಿದ್ದಾರೆ. ಆದ್ರೆ, ಆ ದಾಖಲೆಯನ್ನ ಕರಾವಳಿಯ ಮತ್ತೊಬ್ಬ ಓಟಗಾರ ನಿಶಾಂತ್ ಶೆಟ್ಟಿ ಮೀರಿಸಿದ್ರು ಅಂತಾ ಹೇಳಲಾಗಿತ್ತು. ಆದ್ರೀಗ ಮತ್ತೆ ಶ್ರೀನಿವಾಸಗೌಡ ಆ ದಾಖಲೆಯನ್ನೂ ಮುರಿದಿದ್ದು, ಮತ್ತೆ ಮೊದಲ ಸ್ಥಾನ ಅಲಂಕರಿಸಿದ್ದಾರೆ.

ಭಲೇ ಶ್ರೀನಿವಾಸ ಗೌಡ! ಫೆಬ್ರವರಿ 2 ರಂದು ಐಕಳದಲ್ಲಿ ನಡೆದ ಕಾಂತಬಾರೆ, ಬೂದಬಾರೆ ಕಂಬಳದಲ್ಲಿ 143 ಮೀಟರ್ ಅಂತರವನ್ನು 12.62 ಸೆಕೆಂಡ್​ಗಳಲ್ಲಿ ಓಡಿದ್ರು. ನಿಶಾಂತ್ ಶೆಟ್ಟಿ 145 ಮೀಟರ್​ ಅನ್ನು 12.61 ಸೆಂಕೆಂಡ್​ಗೆ ಓಡಿ ಇವರ ರೆಕಾರ್ಡ್ ಮುರಿದಿದ್ದರು ಅಂತಾ ಹೇಳಲಾಗಿತ್ತು. ಆದ್ರೀಗ ಶ್ರೀನಿವಾಸ್ ಗೌಡ ಐಕಳದಲ್ಲಿ ಆವತ್ತೇ ನಡೆದ ಕಂಬಳದಲ್ಲಿ 143 ಮೀಟರ್ ದೂರವನ್ನು 12.46 ಸೆಕೆಂಡ್ ಅಂತರದಲ್ಲಿ ಓಡಿರೋದು ಗೊತ್ತಾಗಿದೆ.

ಅದನ್ನು 100 ಮೀಟರ್​ಗೆ ಅಳೆದರೆ 9.46 ಸೆಕೆಂಡ್​ನಲ್ಲಿ ಓಡಿದಂತಾಗಿದೆ. ಇನ್ನು ಉಸೇನ್ ಬೋಲ್ಟ್ 100 ಮೀಟರ್ ಓಟವನ್ನು 9.58 ಸೆಕೆಂಡ್ ನಲ್ಲಿ ಕ್ರಮಿಸಿದ್ದ. ಸದ್ಯ ಶ್ರೀನಿವಾಸಗೌಡ, ಉಸೇನ್ ಬೋಲ್ಟ್ ಗಿಂತ 12 ಮಿಲಿ ಸೆಕೆಂಡ್ ವೇಗದಲ್ಲಿ ಮುಂದಿದ್ದಾರೆ.

ಇದಕ್ಕೂ ಮೊದಲು ಶ್ರೀನಿವಾಸಗೌಡ ದಾಖಲೆಯನ್ನ ನಿಶಾಂತ್ ಶೆಟ್ಟಿ ಮುರಿದಿದ್ರು. ಮನಸು ಮಾಡಿದ್ರೆ ಈಗಲೂ ಶ್ರೀನಿವಾಸ ಗೌಡರ ರೆಕಾರ್ಡ್​ ಮುರಿಯಬಲ್ಲರು ಅಂತಾ ಹೇಳಲಾಗ್ತಿದೆ. ಒಟ್ನಲ್ಲಿ, ಈಗಿನ ದಾಖಲೆ ಪ್ರಕಾರ ಮಿಜಾರು ಶ್ರೀನಿವಾಸಗೌಡ ಅವರೇ ನಂಬರ್ 1 ಸ್ಥಾನದಲ್ಲಿದ್ದಾರೆ. ಈ ದಾಖಲೆಯನ್ನು ಯಾರಾದ್ರೂ ಸರಿಗಟ್ತಾರಾ ಕಾದು ನೋಡ್ಬೇಕು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!