AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ.ಪಿ.ರಾಜರತ್ನಂ ಪ್ರಶಸ್ತಿಗೆ ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಆಯ್ಕೆ

ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷ ಡಾ.ನಂದೀಶ್ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದು ಕನ್ನಡ ಪುಸ್ತಕ ಪ್ರಾಧಿಕಾರದ ಕಡೆಯಿಂದ ನೀಡಲಾಗುವ ವಾರ್ಷಿಕ ಜಿ.ಪಿ.ರಾಜರತ್ನಂ ಪರಿಚಾರಕ ಪ್ರಶಸ್ತಿಗೆ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಆಯ್ಕೆಯಾಗಿದ್ದಾರೆ.

ಜಿ.ಪಿ.ರಾಜರತ್ನಂ ಪ್ರಶಸ್ತಿಗೆ ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಆಯ್ಕೆ
ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್
TV9 Web
| Edited By: ಆಯೇಷಾ ಬಾನು|

Updated on:Jun 30, 2021 | 12:48 PM

Share

ಮೈಸೂರು: ಮೈಸೂರಿನ ರಾಜೀವ್‌ ನಗರದಲ್ಲಿರುವ ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ರನ್ನು ಜಿ.ಪಿ.ರಾಜರತ್ನಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷ ಡಾ.ನಂದೀಶ್ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದು ಕನ್ನಡ ಪುಸ್ತಕ ಪ್ರಾಧಿಕಾರದ ಕಡೆಯಿಂದ ನೀಡಲಾಗುವ ವಾರ್ಷಿಕ ಜಿ.ಪಿ.ರಾಜರತ್ನಂ ಪರಿಚಾರಕ ಪ್ರಶಸ್ತಿಗೆ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಆಯ್ಕೆಯಾಗಿದ್ದಾರೆ. ಇನ್ನು ಈ ಪ್ರಶಸ್ತಿಯು 1 ಲಕ್ಷ ರೂ. ನಗದು ಒಳಗೊಂಡಿದ್ದು ಮೊದಲ ಬಾರಿಗೆ ಅಲ್ಪಸಂಖ್ಯಾತರೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ವಿಶೇಷ.

ಮೈಸೂರಿನ ರಾಜೀವ್‌ ನಗರದಲ್ಲಿರುವ ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಅವರ ಗ್ರಂಥಾಲಯದ 11 ಸಾವಿರ ಪುಸ್ತಕಗಳು ಇತ್ತೀಚೆಗೆ ಸುಟ್ಟು ಕರಕಲಾಗಿದ್ದವು. ಇಸಾಕ್ರ ಗ್ರಂಥಾಲಯಕ್ಕೆ ಬೆಂಕಿ ತಗುಲಿ ಪುಸ್ತಕಗಳು ಸುಟ್ಟು ಹೋಗಿದ್ದವು. ಈ ಜ್ಞಾನ ದೇಗುಲವನ್ನು 2011ರಲ್ಲಿ ಸ್ಥಾಪನೆ ಮಾಡಲಾಗಿದೆ. ಸಯ್ಯದ್ ಇಸಾಕ್ ತಮ್ಮ ಉಳಿತಾಯದ ಹಣದಲ್ಲಿ ಗುಡಿಸಿಲಿನಲ್ಲೇ ಗ್ರಂಥಾಲಯ ನಿರ್ಮಿಸಿದ್ದರು. ತನಗೆ ಅಕ್ಷರ ಜ್ಞಾನ ಇಲ್ಲದಿದ್ದರೇನಂತೆ ಇತರರಿಗೆ ಅಕ್ಷರ ಜ್ಞಾನ ನೀಡಲು ಮುಂದಾಗಿದ್ದ ಸಯ್ಯದ್ರ ಗ್ರಂಥಾಲಯ ಹಾಗೂ ಅವರ ಈ ಪ್ರೀತಿ ಮೈಸೂರಿನಲ್ಲಿ ಅಪಾರ ಜನ ಮೆಚ್ಚುಗೆಗೆ ಪಾತ್ರವಾಗಿತ್ತು. ಆದರೆ ದುಷ್ಕರ್ಮಿಗಳು ಗ್ರಂಥಾಲಯಕ್ಕೆ ಬೆಂಕಿ ಇಟ್ಟು ಪರಾರಿಯಾಗಿದ್ದರು.

ಇನ್ನು ಸಯ್ಯದ್ ತಮ್ಮ ಗ್ರಂಥಾಲಯದಲ್ಲಿ ಭಗವದ್ಗೀತೆ, ಕುರಾನ್, ಬೈಬಲ್‌ನ ಕನ್ನಡ ಪುಸ್ತಕಗಳನ್ನ ಓದಲು ಇಟ್ಟಿದ್ದರು. ಚರಂಡಿ ಸ್ವಚ್ಛತೆ, ಮ್ಯಾನ್‌ಹೋಲ್ ಕ್ಲೀನಿಂಗ್ ಮಾಡುವ ಕಾಯಕದ ಸಯ್ಯದ್ ಬೆಂಕಿಗಾಹುತಿಯಾಗಿರುವ ಪುಸ್ತಕಗಳ ನೋಡಿ ಮಮ್ಮಲಮರುಗಿದ್ದರು. ಈ ಘಟನೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದರು.

syed esakh

ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್

ಇದನ್ನೂ ಓದಿ: ಮನದಲ್ಲಿ ಅಷ್ಟು ನೋವಿದ್ದರೂ ಯುಗಾದಿಯ ಶುಭಾಶಯ ತಿಳಿಸಿದ ಕನ್ನಡ ಪ್ರೇಮಿ ಸಯ್ಯದ್ ಇಸಾಕ್‌

 ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡ ಪ್ರೇಮಿ ಸಯ್ಯದ್ ಗ್ರಂಥಾಲಯಕ್ಕೆ ಬೆಂಕಿ, 11 ಸಾವಿರ ಪುಸ್ತಕಗಳು ಭಸ್ಮ

ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಜಿ.ಪಿ.ರಾಜರತ್ನಂ ಪ್ರಶಸ್ತಿಗೆ ಆಯ್ಕೆ

Published On - 12:41 pm, Wed, 30 June 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ