AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ.ಪಿ.ರಾಜರತ್ನಂ ಪ್ರಶಸ್ತಿಗೆ ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಆಯ್ಕೆ

ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷ ಡಾ.ನಂದೀಶ್ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದು ಕನ್ನಡ ಪುಸ್ತಕ ಪ್ರಾಧಿಕಾರದ ಕಡೆಯಿಂದ ನೀಡಲಾಗುವ ವಾರ್ಷಿಕ ಜಿ.ಪಿ.ರಾಜರತ್ನಂ ಪರಿಚಾರಕ ಪ್ರಶಸ್ತಿಗೆ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಆಯ್ಕೆಯಾಗಿದ್ದಾರೆ.

ಜಿ.ಪಿ.ರಾಜರತ್ನಂ ಪ್ರಶಸ್ತಿಗೆ ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಆಯ್ಕೆ
ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್
TV9 Web
| Edited By: |

Updated on:Jun 30, 2021 | 12:48 PM

Share

ಮೈಸೂರು: ಮೈಸೂರಿನ ರಾಜೀವ್‌ ನಗರದಲ್ಲಿರುವ ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ರನ್ನು ಜಿ.ಪಿ.ರಾಜರತ್ನಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷ ಡಾ.ನಂದೀಶ್ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದು ಕನ್ನಡ ಪುಸ್ತಕ ಪ್ರಾಧಿಕಾರದ ಕಡೆಯಿಂದ ನೀಡಲಾಗುವ ವಾರ್ಷಿಕ ಜಿ.ಪಿ.ರಾಜರತ್ನಂ ಪರಿಚಾರಕ ಪ್ರಶಸ್ತಿಗೆ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಆಯ್ಕೆಯಾಗಿದ್ದಾರೆ. ಇನ್ನು ಈ ಪ್ರಶಸ್ತಿಯು 1 ಲಕ್ಷ ರೂ. ನಗದು ಒಳಗೊಂಡಿದ್ದು ಮೊದಲ ಬಾರಿಗೆ ಅಲ್ಪಸಂಖ್ಯಾತರೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ವಿಶೇಷ.

ಮೈಸೂರಿನ ರಾಜೀವ್‌ ನಗರದಲ್ಲಿರುವ ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಅವರ ಗ್ರಂಥಾಲಯದ 11 ಸಾವಿರ ಪುಸ್ತಕಗಳು ಇತ್ತೀಚೆಗೆ ಸುಟ್ಟು ಕರಕಲಾಗಿದ್ದವು. ಇಸಾಕ್ರ ಗ್ರಂಥಾಲಯಕ್ಕೆ ಬೆಂಕಿ ತಗುಲಿ ಪುಸ್ತಕಗಳು ಸುಟ್ಟು ಹೋಗಿದ್ದವು. ಈ ಜ್ಞಾನ ದೇಗುಲವನ್ನು 2011ರಲ್ಲಿ ಸ್ಥಾಪನೆ ಮಾಡಲಾಗಿದೆ. ಸಯ್ಯದ್ ಇಸಾಕ್ ತಮ್ಮ ಉಳಿತಾಯದ ಹಣದಲ್ಲಿ ಗುಡಿಸಿಲಿನಲ್ಲೇ ಗ್ರಂಥಾಲಯ ನಿರ್ಮಿಸಿದ್ದರು. ತನಗೆ ಅಕ್ಷರ ಜ್ಞಾನ ಇಲ್ಲದಿದ್ದರೇನಂತೆ ಇತರರಿಗೆ ಅಕ್ಷರ ಜ್ಞಾನ ನೀಡಲು ಮುಂದಾಗಿದ್ದ ಸಯ್ಯದ್ರ ಗ್ರಂಥಾಲಯ ಹಾಗೂ ಅವರ ಈ ಪ್ರೀತಿ ಮೈಸೂರಿನಲ್ಲಿ ಅಪಾರ ಜನ ಮೆಚ್ಚುಗೆಗೆ ಪಾತ್ರವಾಗಿತ್ತು. ಆದರೆ ದುಷ್ಕರ್ಮಿಗಳು ಗ್ರಂಥಾಲಯಕ್ಕೆ ಬೆಂಕಿ ಇಟ್ಟು ಪರಾರಿಯಾಗಿದ್ದರು.

ಇನ್ನು ಸಯ್ಯದ್ ತಮ್ಮ ಗ್ರಂಥಾಲಯದಲ್ಲಿ ಭಗವದ್ಗೀತೆ, ಕುರಾನ್, ಬೈಬಲ್‌ನ ಕನ್ನಡ ಪುಸ್ತಕಗಳನ್ನ ಓದಲು ಇಟ್ಟಿದ್ದರು. ಚರಂಡಿ ಸ್ವಚ್ಛತೆ, ಮ್ಯಾನ್‌ಹೋಲ್ ಕ್ಲೀನಿಂಗ್ ಮಾಡುವ ಕಾಯಕದ ಸಯ್ಯದ್ ಬೆಂಕಿಗಾಹುತಿಯಾಗಿರುವ ಪುಸ್ತಕಗಳ ನೋಡಿ ಮಮ್ಮಲಮರುಗಿದ್ದರು. ಈ ಘಟನೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದರು.

syed esakh

ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್

ಇದನ್ನೂ ಓದಿ: ಮನದಲ್ಲಿ ಅಷ್ಟು ನೋವಿದ್ದರೂ ಯುಗಾದಿಯ ಶುಭಾಶಯ ತಿಳಿಸಿದ ಕನ್ನಡ ಪ್ರೇಮಿ ಸಯ್ಯದ್ ಇಸಾಕ್‌

 ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡ ಪ್ರೇಮಿ ಸಯ್ಯದ್ ಗ್ರಂಥಾಲಯಕ್ಕೆ ಬೆಂಕಿ, 11 ಸಾವಿರ ಪುಸ್ತಕಗಳು ಭಸ್ಮ

ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಜಿ.ಪಿ.ರಾಜರತ್ನಂ ಪ್ರಶಸ್ತಿಗೆ ಆಯ್ಕೆ

Published On - 12:41 pm, Wed, 30 June 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?