AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನದಲ್ಲಿ ಅಷ್ಟು ನೋವಿದ್ದರೂ ಯುಗಾದಿಯ ಶುಭಾಶಯ ತಿಳಿಸಿದ ಕನ್ನಡ ಪ್ರೇಮಿ ಸಯ್ಯದ್ ಇಸಾಕ್‌

ಕನ್ನಡ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು. ನಿನ್ನೆಯಿಂದ ಹಲವಾರು ಜನ ಬಂದು ಪುಸ್ತಕ ಹಾಗೂ ನೆರವನ್ನು ನೀಡಿ ಪ್ರೀತಿ ತೋರಿದ್ದಾರೆ. ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದು ವಿನಮ್ರ ಭಾವ ಹಂಚಿಕೊಂಡಿದ್ದಾರೆ.

ಮನದಲ್ಲಿ ಅಷ್ಟು ನೋವಿದ್ದರೂ ಯುಗಾದಿಯ ಶುಭಾಶಯ ತಿಳಿಸಿದ ಕನ್ನಡ ಪ್ರೇಮಿ ಸಯ್ಯದ್ ಇಸಾಕ್‌
ಕನ್ನಡ ಪ್ರೇಮಿ ಸಯ್ಯದ್ ಇಸಾಕ್​ರ ಗ್ರಂಥಾಲಯ
Follow us
shruti hegde
| Updated By: ganapathi bhat

Updated on: Apr 11, 2021 | 5:22 PM

ಮೈಸೂರು: ವಿದ್ಯೆ ಬಲ್ಲವನು ಏನು ಬೇಕಾದರೂ ಮಾಡಬಲ್ಲ. ಅದು ಪುಸ್ತಕಓದುವುದರಿಂದ ಮಾತ್ರ ಸಾಧ್ಯ. ಆದರೆ ಮೈಸೂರಿನ ಗ್ರಂಥಾಲಯಕ್ಕೆ ಕೆಲ ಕಿಡಿಗೇಡಿಗಳು ಬೆಂಕಿ ಇಟ್ಟು ಗ್ರಂಥಾಲಯದಲ್ಲಿದ್ದ 11 ಸಾವಿರ ಪುಸ್ತಕಗಳು ಸುಟ್ಟು ಭಸ್ಮವಾಗಿದ್ದವು. ಸಾಂಸ್ಕೃತಿಕ ನಗರಿ ಮೈಸೂರಿನ ಕನ್ನಡ ಪ್ರೇಮಿ ಸಯ್ಯದ್ ಅವರ ಗ್ರಂಥಾಲಯಕ್ಕೆ ಬೆಂಕಿ ಹೊತ್ತುಕೊಂಡಿದ್ದು ಪುಸ್ತಕಗಳು ಬೆಂಕಿಗಾಹುತಿಯಾಗಿದ್ದವು.ಇಂತಹ ನೋವಿನ ಸಂದರ್ಭದಲ್ಲೂ ನೋವಿನಲ್ಲೂ ಕನ್ನಡ ಪ್ರೇಮಿ ಸಯ್ಯದ್ ಇಸಾಕ್‌ ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ.

ಕನ್ನಡ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು. ನಿನ್ನೆಯಿಂದ ಹಲವಾರು ಜನ ಬಂದು ಪುಸ್ತಕ ಹಾಗೂ ನೆರವನ್ನು ನೀಡಿ ಪ್ರೀತಿ ತೋರಿದ್ದಾರೆ. ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದು ವಿನಮ್ರ ಭಾವ ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ನನ್ನನ್ನು ದೂರವಾಣಿ ಮೂಲಕ ಮಾತನಾಡಿಸಿದ್ದಾರೆ. ಇದೇ ಜಾಗದಲ್ಲಿ ಗ್ರಂಥಾಲಯ ನಿರ್ಮಿಸಿ ಕೊಡುವ ಭರವಸೆ ನೀಡಿದ್ದಾರೆ. ಪುಸ್ತಕ ನೀಡುತ್ತಿರುವ ಎಲ್ಲರಿಗೂ ಧನ್ಯವಾದಗಳು ಎಂದ ಸಯ್ಯದ್ ಇಸಾಕ್‌ ಹೇಳಿದ್ದಾರೆ.

ಮೈಸೂರಿನ ರಾಜೀವ್‌ ನಗರದಲ್ಲಿರುವ ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಅವ​ರ ಗ್ರಂಥಾಲಯದ 11 ಸಾವಿರ ಪುಸ್ತಕಗಳು ಸುಟ್ಟು ಕರಕಲಾಗಿದ್ದವು. ಈ ಜ್ಞಾನ ದೇಗುಲವನ್ನು 2011ರಲ್ಲಿ ಸ್ಥಾಪನೆ ಮಾಡಲಾಗಿತ್ತು. ಸಯ್ಯದ್ ಇಸಾಕ್ ತಮ್ಮ ಉಳಿತಾಯದ ಹಣದಲ್ಲಿ ಗುಡಿಸಿಲಿನಲ್ಲೇ ಗ್ರಂಥಾಲಯ ನಿರ್ಮಿಸಿದ್ದರು. ತನಗೆ ಅಕ್ಷರ ಜ್ಞಾನ ಇಲ್ಲದಿದ್ದರೇನಂತೆ ಇತರರಿಗೆ ಅಕ್ಷರ ಜ್ಞಾನ ನೀಡಲು ಮುಂದಾಗಿದ್ದ ಸಯ್ಯದ್​ರ ಗ್ರಂಥಾಲಯ ಹಾಗೂ ಅವರ ಈ ಪ್ರೀತಿ ಮೈಸೂರಿನಲ್ಲಿ ಅಪಾರ ಜನ ಮೆಚ್ಚುಗೆಗೆ ಪಾತ್ರವಾಗಿತ್ತು. ಆದರೆ ದುಷ್ಕರ್ಮಿಗಳು ಗ್ರಂಥಾಲಯಕ್ಕೆ ಬೆಂಕಿ ಇಟ್ಟು ಕೃತ್ಯ ಎಸಗಿದ್ದರು.

ಇದನ್ನೂ ಓದಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡ ಪ್ರೇಮಿ ಸಯ್ಯದ್ ಗ್ರಂಥಾಲಯಕ್ಕೆ ಬೆಂಕಿ, 11 ಸಾವಿರ ಪುಸ್ತಕಗಳು ಭಸ್ಮ 

ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಓಮ್ನಿ ಕಾರ್

ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್