ಸರ್ಕಾರದಿಂದ ಪರಿಹಾರ ಸಿಕ್ಕರೆ ಅದು ಸೆಕಂಡರಿ, ಮೊದಲು ನನ್ನ ಪತಿಯ ಸಾವಿಗೆ ನ್ಯಾಯ ಸಿಗಬೇಕು: ಕವಿತಾ ಚಂದ್ರಶೇಖರನ್

ತಾನು ಹೋರಾಟ ಮಾಡುತ್ತಿರುವುದೇ ಪತಿಯ ಸಾವಿಗೆ ನ್ಯಾಯ ದೊರಕಿಸಲು ಎಂದು ಹೇಳುವ ಕವಿತಾ, ಪತಿ ಬರೆದಿಟ್ಟ ಡೆತ್ ನೋಟ್ ಓದಿರುವೆ; ಅದರಲ್ಲಿ ಅವರು ಸಚಿವರ ಹೆಸರು ಉಲ್ಲೇಖ ಮಾಡಿಲ್ಲ, ಆಫೀಸ್ ಒತ್ತಡ, ಪ್ರದ್ಮನಾಭ, ಪರಶುರಾಮನ್ ಮತ್ತು ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎನ್ನುತ್ತಾರೆ.

ಸರ್ಕಾರದಿಂದ ಪರಿಹಾರ ಸಿಕ್ಕರೆ ಅದು ಸೆಕಂಡರಿ, ಮೊದಲು ನನ್ನ ಪತಿಯ ಸಾವಿಗೆ ನ್ಯಾಯ ಸಿಗಬೇಕು: ಕವಿತಾ ಚಂದ್ರಶೇಖರನ್
|

Updated on: Jun 06, 2024 | 6:48 PM

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation ) ನಡೆದಿರುವ ಹಣಕಾಸಿನ ಭಾರೀ ಅವ್ಯವಹಾರ ಪ್ರಕರಣದಲ್ಲ್ಲಿ (misappropriation of funds) ಇಂದು ಪರಿಶಿಷ್ಟ ಪಂಗಡ ಕಲ್ಯಾಣ ಖಾತೆ ಸಚಿವ ಬಿ ನಾಗೇಂದ್ರ (B Nagendra) ರಾಜೀನಾಮೆ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಮೇಲಧಿಕಾರಿಗಳ ಒತ್ತಡ ತಾಳಲಾಗದೆ ಆತ್ಮಹತ್ಯೆ ಮಾಡಿಕೊಂಡ ನಿಗಮ ಅಧೀಕ್ಷಕ ಪಿ ಚಂದ್ರಶೇಖರನ್ (P Chandrasekaran) ಅವರ ಪತ್ನಿ ಕವಿತಾ ಚಂದ್ರಶೇಖರನ್ (Kavita Chandrasekaran) ಜೊತೆ ಟಿವಿ9 ಶಿವಮೊಗ್ಗ ವರದಿಗಾರ ಮಾತುಕತೆ ನಡೆಸಿದ್ದಾರೆ. ಪತಿಯ ಅಕಾಲಿಕ ದುರ್ಮರಣದಿಂದ ಇನ್ನೂ ಚೇತರಿಸಿಕೊಳ್ಳದ ಕವಿತಾ ಅವರು ಮಂತ್ರಿ ರಾಜೀನಾಮೆ ಸಲ್ಲಿಸುವುದರಿಂದ ಏನು ಪ್ರಯೋಜನ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ತನ್ನ ಪತಿ ಸಾವಿಗೆ ನ್ಯಾಯ ಸಿಗಬೇಕು ಅನ್ನುತ್ತಾರೆ. ಈ ಮಾತುಕತೆಯಲ್ಲಿ ಅವರು ಪದೇಪದೆ ಪತಿಯ ಸಾವಿಗೆ ನ್ಯಾಯ ಸಿಗಬೇಕು ಅನ್ನುತ್ತಾರೆ. ಅವರ ಹೃದಯಲ್ಲಿ ಮಡುಗಟ್ಟಿರುವ ದುಃಖ, ಹತಾಷೆ, ಅಸಹಾಯಕತೆ ಮತ್ತು ನೋವನ್ನು ಸಂಬಂಧ ಪಟ್ಟವರು ಅರ್ಥಮಾಡಿಕೊಳ್ಳಬೇಕು.

ತಾನು ಹೋರಾಟ ಮಾಡುತ್ತಿರುವುದೇ ಪತಿಯ ಸಾವಿಗೆ ನ್ಯಾಯ ದೊರಕಿಸಲು ಎಂದು ಹೇಳುವ ಕವಿತಾ, ಪತಿ ಬರೆದಿಟ್ಟ ಡೆತ್ ನೋಟ್ ಓದಿರುವೆ; ಅದರಲ್ಲಿ ಅವರು ಸಚಿವರ ಹೆಸರು ಉಲ್ಲೇಖ ಮಾಡಿಲ್ಲ, ಆಫೀಸ್ ಒತ್ತಡ ಮತ್ತು ಪ್ರದ್ಮನಾಭ, ಪರಶುರಾಮನ್ ಮತ್ತು ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎನ್ನುತ್ತಾರೆ. ಸಾವಿಗೆ ಶರಣಾಗುವ ಮೊದಲು ಅವರು ಒಂದೂವರೆ ತಿಂಗಳು ಅತೀವ ಡಿಪ್ರಷನ್ ನಲ್ಲಿದ್ದರು. ಅವರ ಮಾನಸಿಕ ಒತ್ತಡಕ್ಕೆ ಕಾರಣರಾದ, ಮಾನಸಿಕ ಕಿರುಕುಳ ನೀಡಿದ ಅಧಿಕಾರಿಗಳಿಗೆ ಶಿಕ್ಷೆಯಾಗಲೇಬೇಕು ಎಂದು ಕವಿತಾ ಹೇಳುತ್ತಾರೆ.

ಪತಿ ಚಂದ್ರಶೇಖರನ್ ಪ್ರಾಮಾಣಿಕ ಮತ್ತು ನಿಷ್ಠಾವಂತ ಅಧಿಕಾರಿಯಾಗಿದ್ದರು, ತನ್ನ ಮಾವ ಕಟ್ಟಿಸಿದ ಈ ಮನೆ ಬಿಟ್ಟರೆ ತಮಗೆ ಬೇರೆ ಆಧಾರವಿಲ್ಲ. ಗುತ್ತಿಗೆ ಆಧಾರದಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿರುವೆ, ಓದುತ್ತಿರುವ ಮಕ್ಕಳೊಂದಿಗೆ ಸಂಸಾರ ನಿರ್ವಹಣೆ ಕಷ್ಟವಾಗಿದೆ ಎಂದು ಕವಿತಾ ಹೇಳುತ್ತಾರೆ. ಸರ್ಕಾರದಿಂದ ಯಾವುದೇ ಬಗೆಯ ಪರಿಹಾರ ತನಗೆ ಹೆಚ್ಚು ಮಹತ್ವದಲ್ಲ, ಪತಿಯ ಸಾವಿಗೆ ನ್ಯಾಯ ಸಿಗಬೇಕು ಅದೇ ತನ್ನ ಮೊದಲ ಆದ್ಯತೆ ಎಂದು ಕವಿತಾ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:     ನನ್ನ ಪತಿಯ ಸಾವಿಗೆ ನ್ಯಾಯ ಸಿಗಲೇಬೇಕು ಮತ್ತು ಅಸಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಕವಿತಾ, ಚಂದ್ರಶೇಖರ್ ಪತ್ನಿ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್