AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಚೈನ್ ಲಿಂಕ್ ತಪ್ಪಿಸಿಲು ನೈಟ್ ಕರ್ಪ್ಯೂ ಜಾರಿ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕೆಲವು ವ್ಯಾಪಾರಗಳು ಹತ್ತು ಗಂಟೆಯ ನಂತರ ಲಾಭ ಪಡೆದುಕೊಳ್ಳುತ್ತಿವೆ. ಇದರಿಂದ ನೈಟ್ ಕರ್ಫ್ಯೂ ಬಗ್ಗೆ ವ್ಯಾಪಾರದಲ್ಲಿ ನಷ್ಟವಾಗುವುದರಿಂದ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಈಗ ಕೊರೊನಾ ನಿಯಂತ್ರಣಕ್ಕೆ ಬೇರೆ ಮಾರ್ಗವಿಲ್ಲ. ಜೀವ ಮತ್ತು ಜೀವನೋಪಾಯ ಎರಡೂ ಉಳಿಸಬೇಕಾಗಿದೆ ಎಂದು ಡಾ.ಕೆ.ಸುಧಾಕರ್ ಹೇಳಿದರು.

ಕೊರೊನಾ ಚೈನ್ ಲಿಂಕ್ ತಪ್ಪಿಸಿಲು ನೈಟ್ ಕರ್ಪ್ಯೂ ಜಾರಿ:  ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಕೆ. ಸುಧಾಕರ್​
sandhya thejappa
| Edited By: |

Updated on: Apr 10, 2021 | 12:08 PM

Share

ಚಿಕ್ಕಬಳ್ಳಾಪುರ: ಕೊರೊನಾ ಎರಡನೇ ಅಲೆಯ ಬಗ್ಗೆ ಜನರು ನಿರ್ಲಕ್ಷಿಸುತ್ತಿದ್ದಾರೆ ಎಂದು ಟಿವಿ9ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಮಾಸ್ಕ್ ಧರಿಸುತ್ತಿಲ್ಲ, ಜನರು ಗುಂಪಾಗಿ ಸೇರುತ್ತಿದ್ದಾರೆ. ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಲು ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೆ ಶಾಶ್ವತವಾಗಿ ಜಾರಿ ಮಾಡಿಲ್ಲ. ಕೊರೊನಾ ಚೈನ್ ಲಿಂಕ್ ತಪ್ಪಿಸಲು ನೈಟ್ ಕರ್ಫ್ಯೂ ಜಾರಿ ತರಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಕೆಲವು ವ್ಯಾಪಾರಗಳು ಹತ್ತು ಗಂಟೆಯ ನಂತರ ಲಾಭ ಪಡೆದುಕೊಳ್ಳುತ್ತಿವೆ. ಇದರಿಂದ ನೈಟ್ ಕರ್ಫ್ಯೂ ಬಗ್ಗೆ ವ್ಯಾಪಾರದಲ್ಲಿ ನಷ್ಟವಾಗುವುದರಿಂದ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಈಗ ಕೊರೊನಾ ನಿಯಂತ್ರಣಕ್ಕೆ ಬೇರೆ ಮಾರ್ಗವಿಲ್ಲ. ಜೀವ ಮತ್ತು ಜೀವನೋಪಾಯ ಎರಡೂ ಉಳಿಸಬೇಕಾಗಿದೆ. ಲಾಕ್​ಡೌನ್ ಮಾಡಬಾರದು ಎನ್ನುವುದಾದರೆ ಸಹಕರಿಸಿ ನೈಟ್ ಕರ್ಫ್ಯೂನ ಪಾಲಿಸಿ ಎಂದು ಮನವಿ ಮಾಡಿದ ಆರೋಗ್ಯ ಸಚಿವರು ಕೊವಿಡ್ ನಿಯಮ ಪಾಲಿಸಿ ಸರ್ಕಾರಕ್ಕೆ ಸಹಕಾರ ನೀಡಿ ಎಂದು ಚಿಕ್ಕಬಳ್ಳಾಪುರದಲ್ಲಿ ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಲಹೆಯಂತೆ ಕರ್ಫ್ಯೂ ಜಾರಿ ಮಾಡಲಾಗಿದೆ. ಜನ ಕೊರೊನಾ ಮರೆತು ಬಿಟ್ಟಿದ್ದಾರೆ. ಕೊವಿಡ್ ನಿಯಮಾವಳಿಗಳ ವಿರುದ್ಧವಾಗಿ ಜನ ನಡೆದುಕೊಳ್ಳುತ್ತಿದ್ದಾರೆ. ಜನಜಾಗೃತಿ, ಕೊರೊನಾ ಸೋಂಕು ನಿಯಂತ್ರಣಕ್ಕೆ ಕರ್ಫ್ಯೂ ಅನಿವಾರ್ಯವಾಗಿದೆ. ಯಾರಿಗೂ ನಷ್ಟ ಉಂಟುಮಾಡುವುದು ನಮ್ಮ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದ ಆರೋಗ್ಯ ಸಚಿವ ಸುಧಾಕರ್ ಕೊರೊನಾ ಎರಡನೇ ಅಲೆ ತೀವ್ರವಾಗಿ ಹರಡುತ್ತಿದೆ. ತೀವ್ರ ರೂಪದಲ್ಲಿ ಮುಂಜಾಗ್ರತೆ ಕ್ರಮಗಳ ಅನಿವಾರ್ಯತೆಯಿದೆ ಎಂದು ತಿಳಿಸಿದರು

ಇದನ್ನೂ ಓದಿ

ಬಸ್ ಮುಷ್ಕರಕ್ಕೆ ಕುಮ್ಮಕ್ಕು ನೀಡಿದ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಯಲ್ಲಿ ಪೊಲೀಸರ ವಶಕ್ಕೆ

ರಸಗೊಬ್ಬರ ದರ ಹೆಚ್ಚಳಕ್ಕೆ ಕೇಂದ್ರದಿಂದ ಸದ್ಯಕ್ಕೆ ಬ್ರೇಕ್​; ಆದರೆ ಮುಂದಿನ ದಿನಗಳಲ್ಲಿ ಬೆಲೆ ಏರಿಕೆ ನಿಶ್ಚಿತ (Kannada News Dr K Sudhakar says night curfew has been issued to prevent corona infection in chikkaballapur)

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್