AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Evening News: ನ್ಯೂ ಇಯರ್​ಗೆ​ ಕೊರೊನಾ ರೂಲ್ಸ್, ಜಲೀಲ್ ಹತ್ಯೆ ಪ್ರಕರಣದಲ್ಲಿ 3 ಜನ ಅರೆಸ್ಟ್​​, ನಿರ್ಮಲಾ ಸೀತಾರಾಮನ್ ​ಆಸ್ಪತ್ರೆಗೆ ದಾಖಲು – ಇಂದಿನ ಪ್ರಮುಖ ಸುದ್ದಿಗಳು

ಪೌಡರ್​​ ರೂಪದಲ್ಲಿ ಸಿಗುತ್ತಿದೆ ತಾಯಿಯ ಎದೆಹಾಲು, ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸಿದೆ. ನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಚಂಡ ನೇಮಕಗೊಂಡಿದ್ದಾರೆ.

Evening News: ನ್ಯೂ ಇಯರ್​ಗೆ​ ಕೊರೊನಾ ರೂಲ್ಸ್, ಜಲೀಲ್ ಹತ್ಯೆ ಪ್ರಕರಣದಲ್ಲಿ 3 ಜನ ಅರೆಸ್ಟ್​​, ನಿರ್ಮಲಾ ಸೀತಾರಾಮನ್ ​ಆಸ್ಪತ್ರೆಗೆ ದಾಖಲು - ಇಂದಿನ ಪ್ರಮುಖ ಸುದ್ದಿಗಳು
ಸಚಿವ ಆರ್ ಅಶೋಕ, ಕಮಿಷನರ್​ ಶಶಿಕುಮಾರ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
TV9 Web
| Updated By: ವಿವೇಕ ಬಿರಾದಾರ|

Updated on:Dec 26, 2022 | 7:54 PM

Share

ಪೌಡರ್​​ ರೂಪದಲ್ಲಿ ಸಿಗುತ್ತಿದೆ ತಾಯಿಯ ಎದೆಹಾಲು, ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸಿದೆ. ನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಚಂಡ ನೇಮಕಗೊಂಡಿದ್ದಾರೆ.

ಹೊಸ ವರ್ಷಾಚರಣೆಗೆ ಕೊರೊನಾ ರೂಲ್ಸ್; ಸೆಲೆಬ್ರೆಶನ್​ 1 ಗಂಟೆಯವರೆಗೆ ಮಾತ್ರ

ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ ಕಲ್ಪಿಸಲಾಗಿದೆ. ಬಾರ್, ಪಬ್ ಹಾಗೂ ಹೊಟೇಲ್​ಗಳಲ್ಲಿ ಗ್ರಾಹಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆಯನ್ನು ಪಡೆದಿರಬೇಕು ಎಂದು ಕಂದಾಯ ಸಚಿವ ಆರ್​. ಅಶೋಕ ಹೇಳಿದ್ದಾರೆ. ಎಷ್ಟು ಟೇಬಲ್ ಇದೆಯೋ ಅಷ್ಟು ಚೇರ್​ಗೆ ಮಾತ್ರ ಅನುಮತಿ ನೀಡಲಾಗಿದೆ. ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡುವವರು ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ನಗರಗಳಿಗೆ ಈ ನಿಯಮ ಅನ್ವಯವಾಗುತ್ತದೆ ಎಂದರು.

ಜಲೀಲ್ ಹತ್ಯೆ ಪ್ರಕರಣದಲ್ಲಿ ಮೂವರ ಬಂಧನ: ಕಮಿಷನರ್

ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ಅಬ್ದುಲ್​ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದೇವೆ. ವಶಕ್ಕೆ ಪಡೆದ ಮೂವರ ಪೈಕಿ ಇಬ್ಬರು ಕೃತ್ಯದಲ್ಲಿ ಭಾಗಿಯಾಗಿದ್ದು, ಒಬ್ಬ ಬೈಕ್​ನಲ್ಲಿ ಕರೆತಂದು ಇಬ್ಬರನ್ನು ಡ್ರಾಪ್ ಮಾಡಿದ್ದ.​ ಕೊಲೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್​ ಆಸ್ಪತ್ರೆಗೆ ದಾಖಲು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಸೋಮವಾರ) ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. 63 ವರ್ಷದ ನಿರ್ಮಲಾ ಸೀತಾರಾಮನ್ ಅವರನ್ನು ಏಮ್ಸ್​ ಆಸ್ಪತ್ರೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದೆ.

ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಪ್ರಕರಣ ಸಿಬಿಐಗೆ ವರ್ಗಾ

ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯ ನಾಲ್ವರು ಶಾಸಕರನ್ನು ಬಿಜೆಪಿ ಖರೀದಿಸಲು ಯತ್ನ ನಡೆಸಿದೆ ಎಂಬ ಆರೋಪದ ಬಗ್ಗೆ ವಿಚಾರಣೆ ನಡೆಸಿದ ತೆಲಂಗಾಣ ಹೈಕೋರ್ಟ್ ಸೋಮವಾರ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ ವರ್ಗಾಯಿಸಿದ್ದು, ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಈ ತಿಂಗಳ ಆರಂಭದಲ್ಲಿ ಶಾಸಕರನ್ನು ಖರೀದಿಸಲು ಯತ್ನ ನಡೆದಿದೆ ಎಂಬ ಆರೋಪದ ತನಿಖೆಗಾಗಿ ರಚಿಸಿದ್ದ ಏಳು ಸದಸ್ಯರ ಎಸ್‌ಐಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಪೌಡರ್​​ ರೂಪದಲ್ಲಿ ಸಿಗುತ್ತಿದೆ ತಾಯಿಯ ಎದೆಹಾಲು

ತಾಯಿಯ ಎದೆಹಾಲು ಮಕ್ಕಳಿಗೆ ಅಮೃತ. ಹೀಗಿರುವಾಗ ಎದೆಹಾಲು ಚಿಕ್ಕ ಬಾಟಲಿ, ಪ್ಯಾಕೆಟ್​​ಗಳಲ್ಲಿ ಸಿಕ್ಕಿದರೆ? ಹೌದು, ಎದೆಹಾಲು ಹೀಗೆ ಮಾರುಕಟ್ಟೆಯಲ್ಲಿ ಲಭಿಸುತ್ತಿದೆ. ಇದನ್ನು ಫ್ರೀಜರ್​​ನಲ್ಲಿಡುವ ಅಗತ್ಯವೇ ಇಲ್ಲ. ಇತ್ತೀಚೆಗೆ ಭಾರತದ ಚೈಲ್ಡ್ ಕೇರ್ ಇಂಡಸ್ಟ್ರಿಗೆ ಹೊಸತಾಗಿ ಕಾಲಿಟ್ಟ ಉತ್ಪನ್ನವೇ ಅಮ್ಮನ ಎದೆ ಹಾಲು. ದೇಶದಲ್ಲಿ ಇದರ ಮಾರುಕಟ್ಟೆ ಬೆಳೆಯುತ್ತಿದೆ. ಆದರೆ ಇದನ್ನು ಯಾವ ರೀತಿ ವರ್ಗೀಕರಿಸಲಾಗಿದೆ ಮತ್ತು ನಿಯಂತ್ರಿಸಲಾಗಿದೆ ಎಂಬುದಕ್ಕೆ ಸ್ಪಷ್ಟ ಉತ್ತರ ಇಲ್ಲ.

ನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಪ್ರಮಾಣ ವಚನ

ಮಾಜಿ ಮಾವೋವಾದಿ ನಾಯಕ ಪುಷ್ಪ ಕಮಲ್ ದಹಾಲ್ ಪ್ರಚಂಡ ಅವರು ನೇಪಾಳದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಪ್ರಚಂಡ ಅವರನ್ನು ಭಾನುವಾರ ಹೊಸ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿದ್ದರು. ಶೀತಲ್ ನಿವಾಸದಲ್ಲಿ ನಡೆದ ಅಧಿಕೃತ ಸಮಾರಂಭದಲ್ಲಿ ಅಧ್ಯಕ್ಷೆ ಭಂಡಾರಿ ಅವರು 68 ವರ್ಷದ ಪ್ರಚಂಡ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಸುಂದರ್ ಪಿಚೈ, ಸಲ್ಮಾನ್ ಖಾನ್​ರ ವೈಯಕ್ತಿಕ ವಿವರ ಡಾರ್ಕ್​ವೆಬ್​ನಲ್ಲಿ ಮಾರಾಟ

ಗೂಗಲ್ ಸಿಇಒ ಸುಂದರ್ ಪಿಚೈ , ಬಾಲಿವುಡ್ ನಟ ಸಲ್ಮಾನ್ ಖಾನ್ , ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೇರಿದಂತೆ 40 ಕೋಟಿ ಟ್ವಿಟರ್ ಬಳಕೆದಾರರ ವೈಯಕ್ತಿಕ ದತ್ತಾಂಶ ಸೋರಿಕೆಯಾಗಿದೆ. ಇದು ಡಾರ್ಕ್​​ವೆಬ್​ನಲ್ಲಿ ಮಾರಾಟಕ್ಕಿದೆ ಎಂದು ಇಸ್ರೇಲ್​ನ ಸೈಬರ್ ಗುಪ್ತಚರ ಕಂಪನಿ ಹಡ್ಸನ್ ರಾಕ್ ವರದಿ ತಿಳಿಸಿದೆ.

ಶ್ರದ್ಧಾ ವಾಕರ್​ ಕೊಲೆ ಕೇಸ್​ ಪ್ರಭಾವದಿಂದ ತುನಿಶಾ ಶರ್ಮಾ, ಶೀಜಾನ್​ ಖಾನ್​ ನಡುವೆ ಬ್ರೇಕಪ್​

ಹಿಂದಿ ಕಿರುತೆರೆಯ ಖ್ಯಾತ ನಟಿ ತುನಿಶಾ ಶರ್ಮಾ ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಮಾಜಿ ಪ್ರಿಯಕರ ಶೀಜಾನ್​ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶೀಜಾನ್​ ಖಾನ್​ ವಿಚಾರಣೆ ವೇಳೆ ಬ್ರೇಕಪ್​ಗೆ ಕಾರಣವೇನೆಂಬುದನ್ನು ಪೊಲೀಸರಿಗೆ ತಿಳಿಸಿದ್ದಾರೆ. ದೆಹಲಿಯ ಶ್ರದ್ಧಾ ವಾಕರ್​ ಅವರನ್ನು ಅಫ್ತಾಬ್​ ಪೂನಾವಾಲ ಭೀಕರವಾಗಿ ಕೊಲೆ ಮಾಡಿದ ಸುದ್ದಿಯಿಂದ ಶೀಜಾನ್​ ಖಾನ್​ ವಿಚಲಿತರಾದರು. ಶ್ರದ್ಧಾ ವಾಕರ್​ ಮತ್ತು ಅಫ್ತಾಬ್​ ಪೂನಾವಾಲಾ ರೀತಿಯೇ ಶೀಜಾನ್​ ಖಾನ್​ ಮತ್ತು ತುನಿಶಾ ಶರ್ಮಾ ಅವರು ಕೂಡ ಬೇರೆ ಬೇರೆ ಧರ್ಮಕ್ಕೆ ಸೇರಿದವರಾದ್ದರಿಂದ ಬ್ರೇಕಪ್​ ಮಾಡಿಕೊಳ್ಳುವುದೇ ಒಳಿತು ಎಂಬ ನಿರ್ಧಾರವನ್ನು ಶೀಜಾನ್​ ತೆಗೆದುಕೊಂಡರು. ಇಬ್ಬರ ನಡುವೆ ವಯಸ್ಸಿನ ಅಂತರ ಇದ್ದಿದ್ದು ಕೂಡ ಬ್ರೇಕಪ್​ಗೆ ಕಾರಣ ಆಗಿತ್ತು.

ಜನವರಿ ತಿಂಗಳಲ್ಲಿ ಬ್ಯಾಂಕ್​ಗಳಿಗೆ 11 ದಿನ ರಜೆ; ಇಲ್ಲಿದೆ ಪಟ್ಟಿ

ಜನವರಿ ತಿಂಗಳಲ್ಲಿ ಬ್ಯಾಂಕ್​ಗಳಿಗೆ 11 ದಿನ ರಜೆ ಇರಲಿದೆ. ಇದರಲ್ಲಿ ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರ ಕೂಡ ಸೇರಿದೆ. ಕೆಲವೊಂದು ಹಬ್ಬಗಳ ರಜೆ ಆಯಾ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರುವುದರಿಂದ ಅಂಥ ಸಂದರ್ಭದಲ್ಲಿ ದೇಶದ ಎಲ್ಲ ಬ್ಯಾಂಕ್​ಗಳಿಗೂ ರಜೆ ಇರುವುದಿಲ್ಲ (ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ)

ಡಿಯೊಕಾನ್ ಸಿಇಒ ವೇಣುಗೋಪಾಲ್ ಧೂತ್ ಬಂಧಿಸಿದ ಸಿಬಿಐ

ವಂಚನೆ ಪ್ರಕರಣಕ್ಕೆ ಸಂಬಂಧಿಸಿ ವಿಡಿಯೊಕಾನ್ ಗ್ರೂಪ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೇಣುಗೋಪಾಲ್ ಧೂತ್ ಅವರನ್ನು ಸಿಬಿಐ ಸೋಮವಾರ ಬಂಧಿಸಿದೆ. ಐಸಿಐಸಿ ಬ್ಯಾಂಕ್​​ನ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೆಶಕಿ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್​ ಅವರನ್ನು ಬಂಧಿಸಿದ ಕೆಲವೇ ದಿನಗಳಲ್ಲಿ ಧೂತ್ ಬಂಧನವಾಗಿದೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:46 pm, Mon, 26 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ