AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಮುಂಬಡ್ತಿ ಪರೀಕ್ಷೆ: ಕನ್ನಡಪರ ಸಂಘಟನೆಗಳ ಪ್ರತಿಭಟನೆ ದಿಢೀರ್ ರದ್ದು, ಕಾರಣ ನಿಜಕ್ಕೂ ಗ್ರೇಟ್!

ಕನ್ನಡ ಭಾಷೆಯ ಆಯ್ಕೆ ಇಲ್ಲದೆ ಕೇವಲ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ನಡೆಯುತ್ತಿರುವ ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯನ್ನು ವಿರೋಧಿಸಿ ಜೂನ್ 25 ರಂದು ಹಮ್ಮಿಕೊಂಡಿದ್ದ ಧರಣಿಯನ್ನು ಕನ್ನಡಪರ ಸಂಘಟನೆಗಳು ಹಿಂಪಡೆದಿವೆ. ಕನ್ನಡಿಗ ಪರೀಕ್ಷಾರ್ಥಿಗಳೇ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಹೋರಾಟವನ್ನು ಕೈಬಿಡಲಾಗಿದೆ. ಇದಕ್ಕೆ ಕಾರಣ ಏನು ಗೊತ್ತೇ? ತಿಳಿಯಲು ಮುಂದೆ ಓದಿ.

ರೈಲ್ವೆ ಮುಂಬಡ್ತಿ ಪರೀಕ್ಷೆ: ಕನ್ನಡಪರ ಸಂಘಟನೆಗಳ ಪ್ರತಿಭಟನೆ ದಿಢೀರ್ ರದ್ದು, ಕಾರಣ ನಿಜಕ್ಕೂ ಗ್ರೇಟ್!
ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆ: ಕನ್ನಡಪರ ಸಂಘಟನೆಗಳ ಪ್ರತಿಭಟನೆ ವಾಪಸ್Image Credit source: PTI and tv9
ಸಂಜಯ್ಯಾ ಚಿಕ್ಕಮಠ
| Edited By: |

Updated on: Jun 23, 2026 | 7:37 AM

Share

ಹುಬ್ಬಳ್ಳಿ, ಜೂನ್ 23: ರೈಲ್ವೆ ಇಲಾಖೆಯ (Indian Railways) ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ (Kannada) ಭಾಷೆಗೆ ಅವಕಾಶ ನೀಡದೆ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ ಎಂಬ ಆರೋಪದ ನಡುವೆಯೇ, ರೈಲ್ವೆ ಮಂಡಳಿ (Railway Board) ವಿರುದ್ಧ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಕನ್ನಡಪರ ಸಂಘಟನೆಗಳು ದಿಢೀರನೆ ಕೈಬಿಟ್ಟಿವೆ. ಈ ನಿರ್ಧಾರದ ಹಿಂದೆ ಅತ್ಯಂತ ಆಸಕ್ತಿದಾಯಕ ಕಾರಣವೊಂದಿದೆ! ಸ್ವತಃ ಕನ್ನಡಿಗ ಅಭ್ಯರ್ಥಿಗಳ ಹಿತದೃಷ್ಟಿಯಿಂದಲೇ ಹೋರಾಟಗಾರರು ಈ ಹೆಜ್ಜೆ ಇಟ್ಟಿದ್ದಾರೆ. ಜೂನ್ 25 ಕ್ಕೆ ಮರುನಿಗದಿಯಾಗಿರುವ ಈ ಮುಂಬಡ್ತಿ ಪರೀಕ್ಷೆಗೆ ಯಾವುದೇ ಅಡ್ಡಿಪಡಿಸಬಾರದು ಎಂದು ಪರೀಕ್ಷಾರ್ಥಿಗಳೇ ಕನ್ನಡ ಸಂಘಟನೆಗಳ ಬಳಿ ವಿನಂತಿಸಿಕೊಂಡಿದ್ದಾರೆ.

ಮುಖ್ಯಾಂಶಗಳು

  • ಜೂನ್ 25 ಕ್ಕೆ ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆ.
  • ಪರೀಕ್ಷೆ ರದ್ದಾದರೆ ವಯೋಮಿತಿ ಮುಗಿಯುವ ಭೀತಿ.
  • 200 ಕ್ಕೂ ಹೆಚ್ಚು ಕನ್ನಡಿಗ ಅಭ್ಯರ್ಥಿಗಳಿಂದ ಮನವಿ.

ವಯೋಮಿತಿ ಮೀರುವ ಆತಂಕದಲ್ಲಿ ಕನ್ನಡಿಗ ಉದ್ಯೋಗಿಗಳು

ಈ ಹಿಂದೆ ರೈಲ್ವೆ ಮಂಡಳಿಯು ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಷ್ಟೇ ಮುಂಬಡ್ತಿ ಪರೀಕ್ಷೆ ನಡೆಸಲು ಮುಂದಾಗಿದ್ದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ತೀವ್ರ ಹೋರಾಟ ನಡೆಸಿದ್ದವು. ಆ ಪ್ರತಿಭಟನೆಯ ಪರಿಣಾಮವಾಗಿ ಪರೀಕ್ಷೆಯು ರದ್ದಾಗಿತ್ತು. ಇದೀಗ ರೈಲ್ವೆ ಇಲಾಖೆಯು ಜೂನ್ 25 ರಂದು ಮತ್ತೊಮ್ಮೆ ಪರೀಕ್ಷೆಯನ್ನು ನಿಗದಿಪಡಿಸಿದೆ. ಆದರೆ, ಈ ಬಾರಿಯೂ ಪ್ರತಿಭಟನೆ ನಡೆದು ಪರೀಕ್ಷೆ ರದ್ದಾದರೆ ಅಥವಾ ಮುಂದೂಡಲ್ಪಟ್ಟರೆ ಇಲಾಖೆಯಲ್ಲಿರುವ ನೂರಾರು ಕನ್ನಡಿಗ ಉದ್ಯೋಗಿಗಳ ಮುಂಬಡ್ತಿಯ ವಯೋಮಿತಿ (Age Limit) ಮುಗಿದುಹೋಗುತ್ತದೆ. ಇದರಿಂದ ಕನ್ನಡಿಗರೇ ಬಡ್ತಿಯಿಂದ ವಂಚಿತರಾಗಬೇಕಾಗುತ್ತದೆ ಎಂಬ ಆತಂಕ ಎದುರಾಗಿತ್ತು.

ಹೋರಾಟಗಾರರ ದೊಡ್ಡ ಗುಣ: ಧರಣಿ ವಾಪಸ್

ವಯೋಮಿತಿ ಮುಗಿಯುವ ಭೀತಿಯಲ್ಲಿದ್ದ 200 ಕ್ಕೂ ಹೆಚ್ಚು ಕನ್ನಡಿಗ ಅಭ್ಯರ್ಥಿಗಳು ಒಟ್ಟಾಗಿ ಕನ್ನಡಪರ ಹೋರಾಟಗಾರರನ್ನು ಭೇಟಿ ಮಾಡಿ, ‘ದಯವಿಟ್ಟು ಈ ಬಾರಿ ಪರೀಕ್ಷೆ ನಡೆಸಲು ಅಡ್ಡಿಪಡಿಸಬೇಡಿ, ಇದರಿಂದ ನಮಗೇ ಆರ್ಥಿಕವಾಗಿ ಹಾಗೂ ವೃತ್ತಿ ಬದುಕಿನಲ್ಲಿ ಅನ್ಯಾಯವಾಗುತ್ತದೆ’ ಎಂದು ಲಿಖಿತ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಕನ್ನಡಿಗರ ಎಚ್ಚರಿಕೆಯಿಂದ ರದ್ದಾಗಿದ್ದ ರೈಲ್ವೆ ಬಡ್ತಿ ಪರೀಕ್ಷೆಗೆ ಮರುದಿನಾಂಕ ನಿಗದಿ, ಈ ಬಾರಿಯೂ ಕನ್ನಡಕ್ಕೆ ಕೊಕ್‌

ಕನ್ನಡಿಗ ಉದ್ಯೋಗಿಗಳ ಭವಿಷ್ಯ ಮತ್ತು ವಾಸ್ತವ ಪರಿಸ್ಥಿತಿಯನ್ನು ಅರಿತ ಕನ್ನಡ ಸಂಘಟನೆಗಳು ತಕ್ಷಣವೇ ಸ್ಪಂದಿಸಿ, ಜೂನ್ 25 ರಂದು ರೈಲ್ವೆ ಇಲಾಖೆ ವಿರುದ್ಧ ನಡೆಸಲು ಉದ್ದೇಶಿಸಿದ್ದ ಧರಣಿ ಹಾಗೂ ಪ್ರತಿಭಟನೆಯನ್ನು ಅಧಿಕೃತವಾಗಿ ಕೈಬಿಟ್ಟಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ