AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಮಾತಿದು: ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎಂದು ಹೇಳಿ

ಯಾವನಿಗಿದೆ ಕನ್ನಡವನ್ನ ಕಿತ್ತುಕೊಳ್ಳುವ ತಾಕತ್ತು, ಬರೋಕೆ ಹೇಳಿ. ಇಲ್ಲಿ ಬೇರೆ ಭಾಷೆ ಹೆಚ್ಚಾಗಿರುವುದಕ್ಕೆ ಕಾರಣ ನೀವೇ ಯೋಚಿಸಿ. ನೀವೇ ಯೋಚಿಸಿದ್ರೆ ಅರ್ಥ ಸಿಗಲಿದೆ ಎಂದು ರಾಮನಗರ ತಾಲೂಕಿನ ಬಿಡದಿಯಲ್ಲಿ ನಟ ಸುದೀಪ್ ಹೇಳಿದ್ದಾರೆ.

ಕಿಚ್ಚ ಸುದೀಪ್ ಮಾತಿದು: ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎಂದು ಹೇಳಿ
ಕಿಚ್ಚ ಸುದೀಪ
TV9 Web
| Edited By: |

Updated on:Apr 06, 2022 | 7:25 PM

Share

ರಾಮನಗರ: ಕನ್ನಡವನ್ನು ಉಳಿಸಿ ಎಂದು ಹೇಳ್ತೀರಾ, ಅದು ತಪ್ಪು. ಕನ್ನಡವನ್ನ ಕಿತ್ತುಕೊಂಡವರು ಯಾರು, ಯಾರಿಗಿದೆ ಆ ಧೈರ್ಯ. ಕನ್ನಡಕ್ಕೆ ಇರುವ ಇತಿಹಾಸ ಬೇರೆ ಯಾವ ಭಾಷೆಗೂ ಇಲ್ಲ ಎಂದು ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಯಾವನಿಗಿದೆ ಕನ್ನಡವನ್ನ ಕಿತ್ತುಕೊಳ್ಳುವ ತಾಕತ್ತು, ಬರೋಕೆ ಹೇಳಿ. ಇಲ್ಲಿ ಬೇರೆ ಭಾಷೆ ಹೆಚ್ಚಾಗಿರುವುದಕ್ಕೆ ಕಾರಣ ನೀವೇ ಯೋಚಿಸಿ. ನೀವೇ ಯೋಚಿಸಿದ್ರೆ ಅರ್ಥ ಸಿಗಲಿದೆ ಎಂದು ರಾಮನಗರ ತಾಲೂಕಿನ ಬಿಡದಿಯಲ್ಲಿ ನಟ ಸುದೀಪ್ ಹೇಳಿದ್ದಾರೆ.

ಕನ್ನಡದ ಮೇಲೆ ಅಭಿಮಾನ ಇಲ್ಲಾಂದ್ರೆ, ಬಿಟ್ಟಾಕಿ ಅವರನ್ನು. ಅಭಿಮಾನ ಇರೋರನ್ನ ಗುರುತಿಸಿ ಬೆಳೆಸಿ. ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎಂದು ಹೇಳಿ ಎಂದು ಸುದೀಪ್ ತಿಳಿಸಿದ್ದಾರೆ. ಬುರ್ಜ್‌ ಖಲೀಫಾದಲ್ಲಿ ಕನ್ನಡದ ಬಾವುಟ ಪ್ರದರ್ಶನ ಹಿನ್ನೆಲೆ, ಕಿಚ್ಚ ಸುದೀಪ್‌ಗೆ ಕನ್ನಡಪರ ಹೋರಾಟಗಾರರಿಂದ ಸನ್ಮಾನ ಮಾಡಲಾಗಿದ್ದು, ಆ ಸಂದರ್ಭ ಸುದೀಪ್ ಮಾತನಾಡಿದ್ದಾರೆ.

ನಮ್ಮಲ್ಲಿ ಕನ್ನಡದ ವಿಚಾರವಾಗಿ ಯಾವುದೇ ಗೊಂದಲವಿಲ್ಲ. ಆದರೆ, ಕೆಲ ಕನ್ನಡಪರ ಸಂಘಟನೆಗಳಲ್ಲೇ ಗೊಂದಲವಿದೆ ಎಂದು ಕಿಚ್ಚ ಸುದೀಪ್ ಹೇಳಿಕೆ ನೀಡಿದ್ದಾರೆ. ನೀವು ಮೊದಲು ನಿಮ್ಮ ಗೊಂದಲಗಳನ್ನು ಸರಿಪಡಿಸಿಕೊಳ್ಳಿ. ಕನ್ನಡದ ಶಾಲು ಹಾಕಿ ಮನೆಗೆ ಬಂದರೆ ಖುಷಿ ಪಡಬೇಕಾ, ಇಲ್ಲ ಭಯ ಪಡಬೇಕಾ ಎಂದು ಗೊತ್ತಾಗಲ್ಲ ನನಗೆ ಎಂದು ಸುದೀಪ್ ಹೇಳಿದ್ದಾರೆ.

ನನಗೆ ಬೈಯಲು ಬಂದಿದ್ದೀರಾ, ಹೊಗಳಲು ಬಂದಿದ್ದೀರಾ, ಇದು ಸಹ ನನಗೆ ಗೊತ್ತಾಗುತ್ತಿಲ್ಲ. ಕನ್ನಡ ಮಾತಾಡಿದ್ರೂ ಬೈತೀರಾ, ಮಾತಾಡದಿದ್ರೂ ಬೈತೀರಾ. ನಮಗೆ ಬೇರೆ ಭಾಷೆಗಳ ಮೇಲೂ ಅಭಿಮಾನ ಇರಬೇಕು. ಬೇರೆಯವರು ನಮ್ಮ ಭಾಷೆ ಮಾತಾಡುವಾಗ ತುಸು ತಪ್ಪಾದರೆ ಗಲಾಟೆ ಆಗುತ್ತೆ. ಆಗ ನನಗೆ ಗೊಂದಲ ಆಗುತ್ತೆ ಎಂದು ಸುದೀಪ್ ತಿಳಿಸಿದ್ದಾರೆ.

ಸಂಘಟನೆಯವರ ಹಿಂದೆ ನೂರಾರು, ಸಾವಿರಾರು ಜನ ಬರ್ತೀರಿ. ಕಲಾವಿದರಿಗೆ ಅಭಿಮಾನಿಗಳಷ್ಟೇ ಇದ್ದಾರೆ, ಎಲ್ಲಾ ಕಡೆ ಇರ್ತಾರೆ. ಆದರೆ, ನೀವು ನಮ್ಮನ್ನ ಹೊಡೆಯಲು ಬಂದ್ರೆ ನಾವೊಬ್ಬರೇ ಸಿಗುತ್ತೇವೆ. ಕೆಲವರು ಏನಾದರೂ ಸ್ಟೆಪ್ ತೆಗೆದುಕೊಂಡಾಗ ಸ್ವಲ್ಪ ಯೋಚಿಸಿ ಎಂದು ನಟ ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ: ದರ್ಶನ್​ ಮತ್ತು ಸುದೀಪ್​ ಸ್ನೇಹ ಮುರಿದು ಬಿದ್ದ ಆ ಕಹಿ ಘಳಿಗೆಗೆ ಈಗ ನಾಲ್ಕು ವರ್ಷ!

ಇದನ್ನೂ ಓದಿ: ‘ಸುದೀಪ್ ಅಂಕಲ್.. ದಯವಿಟ್ಟು ಮನಸ್ಸು ಮಾಡಿ ನನಗೆ ಬಿಗ್​ ಬಾಸ್ ಮನೆಗೆ ಹೋಗೋಕೆ ಅವಕಾಶ ಮಾಡಿಕೊಡಿ, ಪ್ಲೀಸ್​!’

Published On - 10:05 pm, Fri, 5 March 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ