AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಮಾತಿದು: ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎಂದು ಹೇಳಿ

ಯಾವನಿಗಿದೆ ಕನ್ನಡವನ್ನ ಕಿತ್ತುಕೊಳ್ಳುವ ತಾಕತ್ತು, ಬರೋಕೆ ಹೇಳಿ. ಇಲ್ಲಿ ಬೇರೆ ಭಾಷೆ ಹೆಚ್ಚಾಗಿರುವುದಕ್ಕೆ ಕಾರಣ ನೀವೇ ಯೋಚಿಸಿ. ನೀವೇ ಯೋಚಿಸಿದ್ರೆ ಅರ್ಥ ಸಿಗಲಿದೆ ಎಂದು ರಾಮನಗರ ತಾಲೂಕಿನ ಬಿಡದಿಯಲ್ಲಿ ನಟ ಸುದೀಪ್ ಹೇಳಿದ್ದಾರೆ.

ಕಿಚ್ಚ ಸುದೀಪ್ ಮಾತಿದು: ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎಂದು ಹೇಳಿ
ಕಿಚ್ಚ ಸುದೀಪ
Follow us
TV9 Web
| Updated By: ganapathi bhat

Updated on:Apr 06, 2022 | 7:25 PM

ರಾಮನಗರ: ಕನ್ನಡವನ್ನು ಉಳಿಸಿ ಎಂದು ಹೇಳ್ತೀರಾ, ಅದು ತಪ್ಪು. ಕನ್ನಡವನ್ನ ಕಿತ್ತುಕೊಂಡವರು ಯಾರು, ಯಾರಿಗಿದೆ ಆ ಧೈರ್ಯ. ಕನ್ನಡಕ್ಕೆ ಇರುವ ಇತಿಹಾಸ ಬೇರೆ ಯಾವ ಭಾಷೆಗೂ ಇಲ್ಲ ಎಂದು ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಯಾವನಿಗಿದೆ ಕನ್ನಡವನ್ನ ಕಿತ್ತುಕೊಳ್ಳುವ ತಾಕತ್ತು, ಬರೋಕೆ ಹೇಳಿ. ಇಲ್ಲಿ ಬೇರೆ ಭಾಷೆ ಹೆಚ್ಚಾಗಿರುವುದಕ್ಕೆ ಕಾರಣ ನೀವೇ ಯೋಚಿಸಿ. ನೀವೇ ಯೋಚಿಸಿದ್ರೆ ಅರ್ಥ ಸಿಗಲಿದೆ ಎಂದು ರಾಮನಗರ ತಾಲೂಕಿನ ಬಿಡದಿಯಲ್ಲಿ ನಟ ಸುದೀಪ್ ಹೇಳಿದ್ದಾರೆ.

ಕನ್ನಡದ ಮೇಲೆ ಅಭಿಮಾನ ಇಲ್ಲಾಂದ್ರೆ, ಬಿಟ್ಟಾಕಿ ಅವರನ್ನು. ಅಭಿಮಾನ ಇರೋರನ್ನ ಗುರುತಿಸಿ ಬೆಳೆಸಿ. ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎಂದು ಹೇಳಿ ಎಂದು ಸುದೀಪ್ ತಿಳಿಸಿದ್ದಾರೆ. ಬುರ್ಜ್‌ ಖಲೀಫಾದಲ್ಲಿ ಕನ್ನಡದ ಬಾವುಟ ಪ್ರದರ್ಶನ ಹಿನ್ನೆಲೆ, ಕಿಚ್ಚ ಸುದೀಪ್‌ಗೆ ಕನ್ನಡಪರ ಹೋರಾಟಗಾರರಿಂದ ಸನ್ಮಾನ ಮಾಡಲಾಗಿದ್ದು, ಆ ಸಂದರ್ಭ ಸುದೀಪ್ ಮಾತನಾಡಿದ್ದಾರೆ.

ನಮ್ಮಲ್ಲಿ ಕನ್ನಡದ ವಿಚಾರವಾಗಿ ಯಾವುದೇ ಗೊಂದಲವಿಲ್ಲ. ಆದರೆ, ಕೆಲ ಕನ್ನಡಪರ ಸಂಘಟನೆಗಳಲ್ಲೇ ಗೊಂದಲವಿದೆ ಎಂದು ಕಿಚ್ಚ ಸುದೀಪ್ ಹೇಳಿಕೆ ನೀಡಿದ್ದಾರೆ. ನೀವು ಮೊದಲು ನಿಮ್ಮ ಗೊಂದಲಗಳನ್ನು ಸರಿಪಡಿಸಿಕೊಳ್ಳಿ. ಕನ್ನಡದ ಶಾಲು ಹಾಕಿ ಮನೆಗೆ ಬಂದರೆ ಖುಷಿ ಪಡಬೇಕಾ, ಇಲ್ಲ ಭಯ ಪಡಬೇಕಾ ಎಂದು ಗೊತ್ತಾಗಲ್ಲ ನನಗೆ ಎಂದು ಸುದೀಪ್ ಹೇಳಿದ್ದಾರೆ.

ನನಗೆ ಬೈಯಲು ಬಂದಿದ್ದೀರಾ, ಹೊಗಳಲು ಬಂದಿದ್ದೀರಾ, ಇದು ಸಹ ನನಗೆ ಗೊತ್ತಾಗುತ್ತಿಲ್ಲ. ಕನ್ನಡ ಮಾತಾಡಿದ್ರೂ ಬೈತೀರಾ, ಮಾತಾಡದಿದ್ರೂ ಬೈತೀರಾ. ನಮಗೆ ಬೇರೆ ಭಾಷೆಗಳ ಮೇಲೂ ಅಭಿಮಾನ ಇರಬೇಕು. ಬೇರೆಯವರು ನಮ್ಮ ಭಾಷೆ ಮಾತಾಡುವಾಗ ತುಸು ತಪ್ಪಾದರೆ ಗಲಾಟೆ ಆಗುತ್ತೆ. ಆಗ ನನಗೆ ಗೊಂದಲ ಆಗುತ್ತೆ ಎಂದು ಸುದೀಪ್ ತಿಳಿಸಿದ್ದಾರೆ.

ಸಂಘಟನೆಯವರ ಹಿಂದೆ ನೂರಾರು, ಸಾವಿರಾರು ಜನ ಬರ್ತೀರಿ. ಕಲಾವಿದರಿಗೆ ಅಭಿಮಾನಿಗಳಷ್ಟೇ ಇದ್ದಾರೆ, ಎಲ್ಲಾ ಕಡೆ ಇರ್ತಾರೆ. ಆದರೆ, ನೀವು ನಮ್ಮನ್ನ ಹೊಡೆಯಲು ಬಂದ್ರೆ ನಾವೊಬ್ಬರೇ ಸಿಗುತ್ತೇವೆ. ಕೆಲವರು ಏನಾದರೂ ಸ್ಟೆಪ್ ತೆಗೆದುಕೊಂಡಾಗ ಸ್ವಲ್ಪ ಯೋಚಿಸಿ ಎಂದು ನಟ ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ: ದರ್ಶನ್​ ಮತ್ತು ಸುದೀಪ್​ ಸ್ನೇಹ ಮುರಿದು ಬಿದ್ದ ಆ ಕಹಿ ಘಳಿಗೆಗೆ ಈಗ ನಾಲ್ಕು ವರ್ಷ!

ಇದನ್ನೂ ಓದಿ: ‘ಸುದೀಪ್ ಅಂಕಲ್.. ದಯವಿಟ್ಟು ಮನಸ್ಸು ಮಾಡಿ ನನಗೆ ಬಿಗ್​ ಬಾಸ್ ಮನೆಗೆ ಹೋಗೋಕೆ ಅವಕಾಶ ಮಾಡಿಕೊಡಿ, ಪ್ಲೀಸ್​!’

Published On - 10:05 pm, Fri, 5 March 21

ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?