AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಸಿಗಲು ಪ್ರಮುಖ ಕಾರಣಕರ್ತರಾಗಿದ್ದ ಚಿಮೂ

ಬೆಂಗಳೂರು: ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಅವರು ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ಕನ್ನಡ ಭಾಷೆಯ ಐತಿಹಾಸಿಕತೆಯ ಕುರಿತು ಚಿಮೂ ಸಂಶೋಧನೆ ನಡೆಸಿದ್ದರು. ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಸಿಗಲು ಚಿಮೂ ಪ್ರಮುಖ ಕಾರಣರಾಗಿದ್ದರು. 1953ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಚಿಮೂ ಪದವಿ ಪಡೆದಿದ್ದಾರೆ. 1957ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಸ್ನಾತಕೋತ್ತರ ಪದವಿ ಓದುತ್ತಿದ್ದ ವೇಳೆಯೇ ಪಂಪ ಕವಿ ಮತ್ತು ಮೌಲ್ಯ ಪ್ರಸಾರದ ಕುರಿತು ಚಿಮೂ ಪ್ರಬಂಧ ರಚಿಸಿದ್ದಾರೆ. ಚಿಮೂಗೆ ಮೈಸೂರು ವಿವಿಯಲ್ಲಿ ಕುವೆಂಪು, […]

ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಸಿಗಲು ಪ್ರಮುಖ ಕಾರಣಕರ್ತರಾಗಿದ್ದ ಚಿಮೂ
ಸಾಧು ಶ್ರೀನಾಥ್​
|

Updated on: Jan 11, 2020 | 7:22 AM

Share

ಬೆಂಗಳೂರು: ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಅವರು ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ಕನ್ನಡ ಭಾಷೆಯ ಐತಿಹಾಸಿಕತೆಯ ಕುರಿತು ಚಿಮೂ ಸಂಶೋಧನೆ ನಡೆಸಿದ್ದರು. ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಸಿಗಲು ಚಿಮೂ ಪ್ರಮುಖ ಕಾರಣರಾಗಿದ್ದರು.

1953ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಚಿಮೂ ಪದವಿ ಪಡೆದಿದ್ದಾರೆ. 1957ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಸ್ನಾತಕೋತ್ತರ ಪದವಿ ಓದುತ್ತಿದ್ದ ವೇಳೆಯೇ ಪಂಪ ಕವಿ ಮತ್ತು ಮೌಲ್ಯ ಪ್ರಸಾರದ ಕುರಿತು ಚಿಮೂ ಪ್ರಬಂಧ ರಚಿಸಿದ್ದಾರೆ. ಚಿಮೂಗೆ ಮೈಸೂರು ವಿವಿಯಲ್ಲಿ ಕುವೆಂಪು, ಪುತಿನ ಸಂಪರ್ಕ ಸಿಕ್ಕಿತ್ತು. ತೀ.ನಂ.ಶ್ರೀಕಂಠಯ್ಯ ಮಾರ್ಗದರ್ಶನಲ್ಲಿ ಕನ್ನಡ ಶಾಸನಗಳ ಕುರಿತು ಪಿಹೆಚ್​ಡಿ ಪಡೆದಿದ್ದರು. 1964ರಲ್ಲಿ ಬೆಂಗಳೂರು ವಿವಿಯಿಂದ ಚಿಮೂ ಪಿಹೆಚ್​ಡಿ ಪಡೆದಿದ್ದರು.

ಪ್ರಮುಖ ಪುಸ್ತಕಗಳು ಹಿರಿಯ ಸಂಶೋಧಕ ಡಾ.ಚಿದಾನಂದಮೂರ್ತಿ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. 2000ರಲ್ಲಿ ವೀರಶೈವ ಧರ್ಮ, ವಾಗರ್ಥ, 1975ರಲ್ಲಿ ವಚನ ಸಾಹಿತ್ಯ, 1966ರಲ್ಲಿ ಸಂಶೋಧನಾ ತರಂಗ ಪುಸ್ತಕವನ್ನು ಪ್ರಕಟಿಸಿದ್ದಾರೆ. ಪುರಾಣ ಸೂರ್ಯಗ್ರಹಣ, 1985ರಲ್ಲಿ ಮಧ್ಯಕಾಲೀನ ಕನ್ನಡ ಸಾಹಿತ್ಯ ಮತ್ತು ಅಸ್ಪೃಶ್ಯತೆ ಬಗ್ಗೆ ಪುಸ್ತಕ ಬರೆದಿದ್ದರು. ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ, ಹೊಸತು ಹೊಸತು, ಗ್ರಾಮೀಣ, ಚಿದಾನಂದ ಸಮಗ್ರ ಸಂಪುಟ, ಬಸವಣ್ಣ ಸೇರಿದಂತೆ ಹಲವು ಕೃತಿಗಳನ್ನು ಚಿಮೂ ರಚಿಸಿದ್ದಾರೆ.

ಚಿಮೂಗೆ ಸಿಕ್ಕ ಗೌರವಗಳು ಹಿರಿಯ ಸಂಶೋಧಕ ಡಾ.ಚಿದಾನಂದಮೂರ್ತಿಗೆ ರಾಜ್ಯೋತ್ಸವ ಪ್ರಶಸ್ತಿ, 2002ರಲ್ಲಿ ಪಂಪ ಪ್ರಶಸ್ತಿ ಲಭಿಸಿದೆ. ‘ಹೊಸತು ಹೊಸತು’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 2006ರಲ್ಲಿ ಆಳ್ವಾಸ್ ನುಡಿಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ