AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಸಿಗಲು ಪ್ರಮುಖ ಕಾರಣಕರ್ತರಾಗಿದ್ದ ಚಿಮೂ

ಬೆಂಗಳೂರು: ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಅವರು ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ಕನ್ನಡ ಭಾಷೆಯ ಐತಿಹಾಸಿಕತೆಯ ಕುರಿತು ಚಿಮೂ ಸಂಶೋಧನೆ ನಡೆಸಿದ್ದರು. ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಸಿಗಲು ಚಿಮೂ ಪ್ರಮುಖ ಕಾರಣರಾಗಿದ್ದರು. 1953ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಚಿಮೂ ಪದವಿ ಪಡೆದಿದ್ದಾರೆ. 1957ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಸ್ನಾತಕೋತ್ತರ ಪದವಿ ಓದುತ್ತಿದ್ದ ವೇಳೆಯೇ ಪಂಪ ಕವಿ ಮತ್ತು ಮೌಲ್ಯ ಪ್ರಸಾರದ ಕುರಿತು ಚಿಮೂ ಪ್ರಬಂಧ ರಚಿಸಿದ್ದಾರೆ. ಚಿಮೂಗೆ ಮೈಸೂರು ವಿವಿಯಲ್ಲಿ ಕುವೆಂಪು, […]

ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಸಿಗಲು ಪ್ರಮುಖ ಕಾರಣಕರ್ತರಾಗಿದ್ದ ಚಿಮೂ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 11, 2020 | 7:22 AM

Share

ಬೆಂಗಳೂರು: ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಅವರು ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ಕನ್ನಡ ಭಾಷೆಯ ಐತಿಹಾಸಿಕತೆಯ ಕುರಿತು ಚಿಮೂ ಸಂಶೋಧನೆ ನಡೆಸಿದ್ದರು. ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಸಿಗಲು ಚಿಮೂ ಪ್ರಮುಖ ಕಾರಣರಾಗಿದ್ದರು.

1953ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಚಿಮೂ ಪದವಿ ಪಡೆದಿದ್ದಾರೆ. 1957ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಸ್ನಾತಕೋತ್ತರ ಪದವಿ ಓದುತ್ತಿದ್ದ ವೇಳೆಯೇ ಪಂಪ ಕವಿ ಮತ್ತು ಮೌಲ್ಯ ಪ್ರಸಾರದ ಕುರಿತು ಚಿಮೂ ಪ್ರಬಂಧ ರಚಿಸಿದ್ದಾರೆ. ಚಿಮೂಗೆ ಮೈಸೂರು ವಿವಿಯಲ್ಲಿ ಕುವೆಂಪು, ಪುತಿನ ಸಂಪರ್ಕ ಸಿಕ್ಕಿತ್ತು. ತೀ.ನಂ.ಶ್ರೀಕಂಠಯ್ಯ ಮಾರ್ಗದರ್ಶನಲ್ಲಿ ಕನ್ನಡ ಶಾಸನಗಳ ಕುರಿತು ಪಿಹೆಚ್​ಡಿ ಪಡೆದಿದ್ದರು. 1964ರಲ್ಲಿ ಬೆಂಗಳೂರು ವಿವಿಯಿಂದ ಚಿಮೂ ಪಿಹೆಚ್​ಡಿ ಪಡೆದಿದ್ದರು.

ಪ್ರಮುಖ ಪುಸ್ತಕಗಳು ಹಿರಿಯ ಸಂಶೋಧಕ ಡಾ.ಚಿದಾನಂದಮೂರ್ತಿ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. 2000ರಲ್ಲಿ ವೀರಶೈವ ಧರ್ಮ, ವಾಗರ್ಥ, 1975ರಲ್ಲಿ ವಚನ ಸಾಹಿತ್ಯ, 1966ರಲ್ಲಿ ಸಂಶೋಧನಾ ತರಂಗ ಪುಸ್ತಕವನ್ನು ಪ್ರಕಟಿಸಿದ್ದಾರೆ. ಪುರಾಣ ಸೂರ್ಯಗ್ರಹಣ, 1985ರಲ್ಲಿ ಮಧ್ಯಕಾಲೀನ ಕನ್ನಡ ಸಾಹಿತ್ಯ ಮತ್ತು ಅಸ್ಪೃಶ್ಯತೆ ಬಗ್ಗೆ ಪುಸ್ತಕ ಬರೆದಿದ್ದರು. ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ, ಹೊಸತು ಹೊಸತು, ಗ್ರಾಮೀಣ, ಚಿದಾನಂದ ಸಮಗ್ರ ಸಂಪುಟ, ಬಸವಣ್ಣ ಸೇರಿದಂತೆ ಹಲವು ಕೃತಿಗಳನ್ನು ಚಿಮೂ ರಚಿಸಿದ್ದಾರೆ.

ಚಿಮೂಗೆ ಸಿಕ್ಕ ಗೌರವಗಳು ಹಿರಿಯ ಸಂಶೋಧಕ ಡಾ.ಚಿದಾನಂದಮೂರ್ತಿಗೆ ರಾಜ್ಯೋತ್ಸವ ಪ್ರಶಸ್ತಿ, 2002ರಲ್ಲಿ ಪಂಪ ಪ್ರಶಸ್ತಿ ಲಭಿಸಿದೆ. ‘ಹೊಸತು ಹೊಸತು’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 2006ರಲ್ಲಿ ಆಳ್ವಾಸ್ ನುಡಿಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು