AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kara Hunnime: ಕಾರ ಹುಣ್ಣಿಮೆ ಆಚರಣೆ ವೇಳೆ ಅವಘಡ, ಎತ್ತು ಡಿಕ್ಕಿ ಹೊಡೆದು ವ್ಯಕ್ತಿಯ ಸಾವು

Bull running: ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿಯಲ್ಲಿ ಈ ದುರ್ಘಟನೆ ನಡೆದಿದೆ.  ನಿನ್ನೆ ಕಾರ ಹುಣ್ಣಿಮೆ ನಿಮಿತ್ತ ಎತ್ತುಗಳನ್ನ ಓಡಿಸುವಾಗ ಈ ಘಟನೆ ನಡೆದಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Kara Hunnime: ಕಾರ ಹುಣ್ಣಿಮೆ ಆಚರಣೆ ವೇಳೆ ಅವಘಡ, ಎತ್ತು ಡಿಕ್ಕಿ ಹೊಡೆದು ವ್ಯಕ್ತಿಯ ಸಾವು
Kara Hunnime: ಕಾರ ಹುಣ್ಣಿಮೆ ಆಚರಣೆ ವೇಳೆ ಅವಘಡ: ಎತ್ತುಗಳು ಡಿಕ್ಕಿ ಹೊಡೆದು ವ್ಯಕ್ತಿಯ ಸಾವು
Follow us
ಸಾಧು ಶ್ರೀನಾಥ್​
|

Updated on:Jun 25, 2021 | 5:16 PM

ಗದಗ: ಉತ್ತರ ಕರ್ನಾಟಕ ಸೇರದಿಂತೆ ಅನೇಕ ಕಡೆ ನಿನ್ನೆ ಕಾರ ಹುಣ್ಣಿಮೆಯ ಆಚರಣೆ ಜೋರಾಗಿ ನಡೆದಿದೆ. ಆದರೆ ಈ  ವೇಳೆ ಅವಘಡ ಒಂದು ಸಂಭವಿಸಿದ್ದು, ಎತ್ತು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ.

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿಯಲ್ಲಿ ಈ ದುರ್ಘಟನೆ ನಡೆದಿದೆ.  ನಿನ್ನೆ ಕಾರ ಹುಣ್ಣಿಮೆ ನಿಮಿತ್ತ ಎತ್ತುಗಳನ್ನ ಓಡಿಸುವಾಗ ಈ ಘಟನೆ ನಡೆದಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಘಟನೆ ನಡೆದಿದ್ದು ಹೇಗೆ?: ಕಾರ ಹುಣ್ಣಿಮೆ ಸಂಭ್ರಮದ ವೇಳೆ ರಾಸುಗಳನ್ನು ಹಾಯಿಸುವ ಕಾರ್ಯಕ್ರಮ ನಡೆದಿತ್ತು. ರಾಸುಗಳ ಓಡಿಸುವಾಗ ರಾಸು ಡಿಕ್ಕಿ ಹೊಡೆದ ರಭಸಕ್ಕೆ 42 ವರ್ಷದ ಕಿರಣ  ನೆಲಕ್ಕುರುಳಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕಿರಣ ಇಂದು ಮೃತಪಟ್ಟಿದ್ದಾರೆ. ಕಾರ ಹುಣ್ಣಿಮೆ ಸಂಭ್ರಮದಲ್ಲಿ ಭಾರೀ ಜನ ಜಾತ್ರೆ ಸೇರಿತ್ತು. ಪೊಲೀಸರು ಖಡಕ್ ಸೂಚನೆ ನೀಡಿದ್ದರೂ ಜನ ಸೇರಿದ್ದರು.

ಕಾರ ಹುಣ್ಣಿಮೆ ಆಚರಣೆ: ಏನಿದು ಬೇಸಿಗೆ ಮುಗಿದು, ಮುಂಗಾರು ಕಾಲಿಟ್ಟಾಗ ಈ ಪರಿವರ್ತನಾ ಕಾಲವನ್ನು ಆಚರಿಸಲು ರೈತಾಪಿ ವರ್ಗ ಕಾರ ಹುಣ್ಣಿಮೆಯನ್ನು ಹಬ್ಬದಂತೆ ಸಂಭ್ರಮದಿಂದ ಆಚರಿಸುತ್ತಾರೆ. ರೈತರು ಮನೆಗಳಲ್ಲಿ ಮಕ್ಕಳಿಗೆ ಸ್ನಾನ ಮಾಡಿಸಿದಂತೆ… ತಮ್ಮ ಎತ್ತಿನ ರಾಸುಗಳಿಗೆ ಸ್ನಾನ ಮಾಡಿಸಿ, ರಂಗುರಂಗಿನ ಬಣ್ಣಗಳಿಂದ ಅಲಂಕರಿಸುತ್ತಾರೆ. ಕೊಂಬುಗಳಿಗೆ ನವಿಲುಗರಿಗಳನ್ನು ಸಿಕ್ಕಿಸಿ, ಬಲೂಗಳನ್ನು ಕಟ್ಟುತ್ತಾರೆ. ಬಣ್ಣದ ಟೇಪ್​ಗಳನ್ನೂ ಸುತ್ತುತ್ತಾರೆ. ಹಿಂಭಾಗವನ್ನೂ ಅಲಂಕರಿಸುತ್ತಾರೆ. ಕಾಲುಗಳಿಗೆ ಗೆಜ್ಜೆ ಕಟ್ಟುತ್ತಾರೆ. ಇದಾದ ಮೇಲೆ ಶೇಂಗಾ ಹೋಳಿಗೆ, ಹುಗ್ಗಿ, ಸಿಹಿ ಪೊಂಗಲ್​ ಮಾಡಿಕೊಂಡು ಹಬ್ಬದೂಟ ಸವಿಯುತ್ತಾರೆ. ಅದಾದ ಮೇಲೆ ನಡೆಯುವುದೇ ರಾಸುಗಳ ಓಟ. ಅದರಲ್ಲಿ ಇಡೀ ಹಳ್ಳಿಯ ಮಂದಿ ಭಾಗವಹಿಸುತ್ತಾರೆ.

ತಿಮ್ಮಾಪುರದಲ್ಲಿ ಕಾರ ಹುಣ್ಣಿಮೆಗೆ ಎತ್ತಿನ ಮೇಲೆ ಸಿಂಗಾರಗೊಂಡ ‘ಮುಂದಿನ CM ಸಿದ್ದರಾಮಯ್ಯ’ ಎಂಬ ಮೂಕ ಘೋಷ ವಾಕ್ಯ! (kara hunnime celebration bull race one person died as racing bull hits him)

Published On - 5:11 pm, Fri, 25 June 21

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?