AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕದಾಸ ವೃತ್ತ ನಿರ್ಮಾಣ ವಿರೋಧಿಸಿ ಸಂಸದ ಕರಡಿ ಸಂಗಣ್ಣ ಪತ್ರ; ಸಂಗಣ್ಣ ಕ್ಷಮೆ ಯಾಚನೆಗೆ ಪಟ್ಟು ಹಿಡಿದ ಕುರುಬ ಸಮುದಾಯ

ನಗರ ಸಭೆಯ ವಾಣಿಜ್ಯ ಮಳಿಗೆಯ ಜಾಗವನ್ನು ಅತಿಕ್ರಮಿಸಿಕೊಂಡು ಕನಕದಾಸ ವೃತ್ತ ನಿರ್ಮಾಣ ಮಾಡಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಡಿಸಿಗೆ ಕರಡಿ ಸಂಗಣ್ಣ ಪತ್ರ ಬರೆದಿದ್ದಾರೆ.

ಕನಕದಾಸ ವೃತ್ತ ನಿರ್ಮಾಣ ವಿರೋಧಿಸಿ ಸಂಸದ ಕರಡಿ ಸಂಗಣ್ಣ ಪತ್ರ; ಸಂಗಣ್ಣ ಕ್ಷಮೆ ಯಾಚನೆಗೆ ಪಟ್ಟು ಹಿಡಿದ ಕುರುಬ ಸಮುದಾಯ
ವೃತ್ತ ನಿರ್ಮಾಣಕ್ಕೆ ನಗರಸಭೆಗೆ ಸೇರಿದ 20 ವಾಣಿಜ್ಯ ಮಳಿಗೆ ತೆರವು
TV9 Web
| Edited By: |

Updated on: Jul 08, 2021 | 1:38 PM

Share

ಕೊಪ್ಪಳ: ಕನಕದಾಸ ವೃತ್ತ ರಾಜಕೀಯ ಪ್ರತಿಷ್ಠೆಗೆ ಕಾರಣವಾಗಿದೆ. ಕೊಪ್ಪಳ ಬಸ್ ನಿಲ್ದಾಣದ ಮುಂದಿರುವ ಕನಕದಾಸ ವೃತ್ತದ ಸ್ಥಳದಲ್ಲಿದ್ದ ಕಾಂಪ್ಲೆಕ್ಸ್, ಕಟ್ಟೆಯನ್ನು ಕೆಡವಿ ಅಲ್ಲಿ ಕನಕದಾಸ ಮೂರ್ತಿ ಸ್ಥಾಪನೆಗೆ ಸಿದ್ಧತೆ ನಡೆದಿದೆ. ಹೀಗಾಗಿ ಇದರ ನಿರ್ಮಾಣಕ್ಕೆ ಹೆಚ್ಚುವರಿ ಜಾಗ ಬಳಕೆಗೆ ಸಂಸದ ಕರಡಿ ಸಂಗಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗೂ ಈ ಬಗ್ಗೆ ಕೊಪ್ಪಳ ಡಿಸಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಈಗ ಕೊಪ್ಪಳದಲ್ಲಿ ಜಾತಿ ವೈಷಮ್ಯದ ರಾಜಕಾರಣ ಆರಂಭವಾಗಿದೆ.

1988ರಲ್ಲಿ ಆಗಿನ ಸಾರಿಗೆ ಸಚಿವರಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕದಾಸ ವೃತ್ತಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಆದ್ರೆ ಇತ್ತೀಚೆಗೆ ಬಹುಕೋಟಿ ವೆಚ್ಚದಲ್ಲಿ ಕನಕದಾಸ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅದೇ ಸ್ಥಳದಲ್ಲಿ ಉದ್ಯಾನವನ ನಿರ್ಮಾಣ ಮಾಡುವ ಯೋಜನೆ ಮಾಡಿಕೊಳ್ಳಲಾಗಿತ್ತು. ಅದರಂತೆಯೇ ವೃತ್ತ ನಿರ್ಮಾಣಕ್ಕೆ ನಗರಸಭೆಗೆ ಸೇರಿದ 20 ವಾಣಿಜ್ಯ ಮಳಿಗೆ ತೆರವು ಮಾಡಲಾಯಿತು. ವಾಣಿಜ್ಯಮಳಿಗೆ ಜಾಗ ಹೆಚ್ಚುವರಿಯಾಗಿ ಬಳಸಿ ಕನಕದಾಸ ಮೂರ್ತಿ ಪ್ರತಿಷ್ಠಾಪಿಸಿ ವೃತ್ತ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಹೆಚ್ಚುವರಿ ಜಾಗ ಬಳಕೆಗೆ ಸಂಸದ ಕರಡಿ ಸಂಗಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ.

ನಗರ ಸಭೆಯ ವಾಣಿಜ್ಯ ಮಳಿಗೆಯ ಜಾಗವನ್ನು ಅತಿಕ್ರಮಿಸಿಕೊಂಡು ಕನಕದಾಸ ವೃತ್ತ ನಿರ್ಮಾಣ ಮಾಡಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಡಿಸಿಗೆ ಕರಡಿ ಸಂಗಣ್ಣ ಪತ್ರ ಬರೆದಿದ್ದಾರೆ. ಕರಡಿ ಸಂಗಣ್ಣ ಪತ್ರ ಹಿನ್ನೆಲೆಯಲ್ಲಿ ಕುರುಬ ಸಮುದಾಯ ವಿರೋಧಿಸಿದೆ. ಸಂಗಣ್ಣ ಕುರುಬ ಸಮುದಾಯದ ಕ್ಷಮೆ ಕೇಳುವಂತೆ ಆಗ್ರಹಿಸಲಾಗಿದೆ.

kanakadasa circle

ಸಂಸದ ಕರಡಿ ಸಂಗಣ್ಣ ಪತ್ರ

ಇದನ್ನೂ ಓದಿ: ಕಿಡಿ ಹೊತ್ತಿಸಿದ ಮಾಧುಸ್ವಾಮಿ ಕನಕ ಕದನ, ಇಂದು ಹುಳಿಯಾರು ಬಂದ್..!

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್