Sign In

By signing in or creating an account, you agree with Associated Broadcasting Company's Terms & Conditions and Privacy Policy.

T.A.ನಾರಾಯಣಗೌಡ ಯಾರೆಂದು ಪ್ರಶ್ನಿಸಿದ್ದಕ್ಕೆ ಸಚಿವರಿಗೆ ಕರವೇ ಕಾರ್ಯಕರ್ತರಿಂದ ಘೇರಾವ್

ನಾರಾಯಣಗೌಡ ಯಾರೆಂದು ಪ್ರಶ್ನಿಸಿದ್ದಕ್ಕೆ ಆರೋಗ್ಯ ಸಚಿವ ಸುಧಾಕರ್​ಗೆ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಘೇರಾವ್ ಹಾಕಿರುವ ಘಟನೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ. ಸಚಿವ ಡಾ.ಕೆ.ಸುಧಾಕರ್ ಕಾರಿಗೆ ಘೇರಾವ್ ಹಾಕಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

T.A.ನಾರಾಯಣಗೌಡ ಯಾರೆಂದು ಪ್ರಶ್ನಿಸಿದ್ದಕ್ಕೆ ಸಚಿವರಿಗೆ ಕರವೇ ಕಾರ್ಯಕರ್ತರಿಂದ ಘೇರಾವ್
T.A. ನಾರಾಯಣಗೌಡ ಯಾರೆಂದು ಪ್ರಶ್ನಿಸಿದ್ದಕ್ಕೆ ಸಚಿವರಿಗೆ ಕರವೇ ಕಾರ್ಯಕರ್ತರಿಂದ ಘೇರಾವ್
Follow us
KUSHAL V
|

Updated on: Jan 18, 2021 | 9:49 PM

ಬೆಳಗಾವಿ: ನಾರಾಯಣಗೌಡ ಯಾರೆಂದು ಪ್ರಶ್ನಿಸಿದ್ದಕ್ಕೆ ಆರೋಗ್ಯ ಸಚಿವ ಸುಧಾಕರ್​ಗೆ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಘೇರಾವ್ ಹಾಕಿರುವ ಘಟನೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ. ಸಚಿವ ಡಾ.ಕೆ.ಸುಧಾಕರ್ ಕಾರಿಗೆ ಘೇರಾವ್ ಹಾಕಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

ಕಾರಿನ ಎದುರು ಕುಳಿತು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸಚಿವರ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ, ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮುಗಿಸಿ ಹೊರಬಂದಿದ್ದ ಸಚಿವ ನಾನು ನಿಪ್ಪಾಣಿ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ಲವೆಂದ ಸಮಜಾಯಿಷಿ ನೀಡಲು ಮುಂದಾದರು.

ಈ ನಡುವೆ, MESನವರು ಕರೆದರೂ ಕಾರ್ಯಕ್ರಮದಲ್ಲಿ ಭಾಗಿಯಾಗ್ತೀರಾ? ಎಂದು ಸಚಿವ ಡಾ.ಕೆ.ಸುಧಾಕರ್‌ಗೆ ಕರವೇ ಕಾರ್ಯಕರ್ತರು ಪ್ರಶ್ನೆ ಹಾಕಿದರು. ಜೊತೆಗೆ, ನಾರಾಯಣಗೌಡ ಯಾರೆಂದು ಕೇಳಿದ್ದೀರಲ್ಲಾ ಎಂದು ಗರಂ ಸಹ ಆದರು.

ಏನಿದು ಪ್ರಕರಣ? ಜಿಲ್ಲೆಯ ನಿಪ್ಪಾಣಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಚಿವ ಸುಧಾಕರ್​ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ವೇಳೆ ಮರಾಠಿ ಭಾಷೆ ಬಳಕೆಯಾದ ಬಗ್ಗೆ ಎಲ್ಲೆಡೆಯಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ತಾಯಿ-ಮಗು ಆಸ್ಪತ್ರೆ ಉದ್ಘಾಟನೆಯಲ್ಲಿ ಮರಾಠಿ ಗೀತೆ ಹಾಡಿದ್ದಕ್ಕೆ ವಿರೋಧ ವ್ಯಕ್ತವಾಗಿತ್ತು.

ಹಾಗಾಗಿ, ಮರಾಠಿಮಯ ಕಾರ್ಯಕ್ರಮದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಸಚಿವೆ ರಾಜೀನಾಮೆ ನೀಡುವಂತೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದರು. ಈ ಕುರಿತು ಸಚಿವ ಸುಧಾಕರ್​ಗೆ ಪ್ರಶ್ನಿಸಿದ್ದಕ್ಕೆ ಟಿ.ಎ.ನಾರಾಯಣಗೌಡ ಯಾರೆಂದು ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದರು.

ಈ ಮಧ್ಯೆ, ನಾರಾಯಣಗೌಡ ಗೊತ್ತಿಲ್ಲಪ್ಪ ಎಂದು ಹೇಳಿದ್ದೆ. ಕರ್ನಾಟಕದಲ್ಲಿ ಎಷ್ಟು ಜನ ನಾರಾಯಣಗೌಡರು ಇದ್ದಾರೆ. ಯಾರು ಹೇಳಿ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಮಜಾಯಿಶಿ ನೀಡಿದರು. ಇದಕ್ಕೆ ಒಪ್ಪದ ಕಾರ್ಯಕರ್ತರು ತಮ್ಮ ಪ್ರತಿಭಟನೆ ಮುಂದುವರಿಸಿದರು. ಕೊನೆಗೆ, ಪೊಲೀಸರು ಕಾರ್ಯಕರ್ತರನ್ನ ಎಳೆದು ಹಾಕಿ ಕಾರು ಹೋಗಲು ಅವಕಾಶ ನೀಡಿದರು.

ಕರ್ನಾಟಕ ಸರ್ಕಾರದ ಕಾರ್ಯಕ್ರಮದಲ್ಲಿ ಮರಾಠಿ ಪ್ರೇಮ: ಕನ್ನಡಿಗರ ಆಕ್ರೋಶ

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್