AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾ ಸ್ವಾಗತಕ್ಕೆ ಅಳವಡಿಸಲಾಗಿದ್ದ ತಮಿಳು ಭಾಷೆಯ ಬ್ಯಾನರ್, ಫ್ಲೆಕ್ಸ್​ಗಳಿಗೆ ಬೆಂಕಿ ಹಚ್ಚಿದ ಕರವೇ ಕಾರ್ಯಕರ್ತರು

ತಮಿಳು ಭಾಷೆಯಲ್ಲಿದ್ದ ಬ್ಯಾನರ್ ಮತ್ತು ಫ್ಲೆಕ್ಸ್​ಗಳನ್ನು ಹರಿದು ಹಾಕಿ ತಮ್ಮ ಆಕ್ರೋಶ ಹೊರಹಾಕಿದರು. ಇದಲ್ಲದೆ, ಕೆಲವು ಬ್ಯಾನರ್ ಹಾಗೂ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದರು.

ಶಶಿಕಲಾ ಸ್ವಾಗತಕ್ಕೆ ಅಳವಡಿಸಲಾಗಿದ್ದ ತಮಿಳು ಭಾಷೆಯ ಬ್ಯಾನರ್, ಫ್ಲೆಕ್ಸ್​ಗಳಿಗೆ ಬೆಂಕಿ ಹಚ್ಚಿದ ಕರವೇ ಕಾರ್ಯಕರ್ತರು
ತಮಿಳು ಭಾಷೆಯ ಬ್ಯಾನರ್, ಫ್ಲೆಕ್ಸ್​ಗಳಿಗೆ ಬೆಂಕಿ ಹಚ್ಚಿದ ಕರವೇ ಕಾರ್ಯಕರ್ತರು
KUSHAL V
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 10, 2021 | 3:10 PM

Share

ದೇವನಹಳ್ಳಿ: ಜೈಲಿನಿಂದ ಬಿಡುಗಡೆಯಾದ ವಿ.ಕೆ.ಶಶಿಕಲಾ ನಟರಾಜನ್ ತಮಿಳುನಾಡಿನ ರಾಜಕೀಯ ಕಣಕ್ಕೆ ನಾಳೆ ಗ್ರಾಂಡ್​ ಎಂಟ್ರಿಕೊಡಲಿದ್ದಾರೆ. ಈ ನಿಟ್ಟಿನಲ್ಲಿ, ಶಶಿಕಲಾ ನಾಳೆ ಚೆನ್ನೈಗೆ ತೆರಳಲಿದ್ದು ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಬಳಿಯ ರೆಸಾರ್ಟ್‌ನಲ್ಲಿ ತಂಗಿದ್ದಾರೆ.

ಇತ್ತ, ಚಿನ್ನಮ್ಮರ ಆಗಮನಕ್ಕೆ ಕಾತುರದಿಂದ ಕಾಯುತ್ತಿದ್ದ ಅವರ ಬೆಂಬಲಿಗರು ತಮ್ಮ ನೆಚ್ಚಿನ ನಾಯಕಿಗೆ ಸ್ವಾಗತ ಕೋರಲು ರೆಸಾರ್ಟ್ ಮುಂದೆ ತಮಿಳಿನಲ್ಲಿ ಬ್ಯಾನರ್ ಮತ್ತು ಫ್ಲೆಕ್ಸ್​ಗಳನ್ನು ಅಳವಡಿಸಿದ್ದರು. ಜೊತೆಗೆ, ನಾಳೆ ಹೋಗುವ ರಸ್ತೆಯುದ್ದಕ್ಕೂ ಸಹ ಬ್ಯಾನರ್‌ ಅಳವಡಿಕೆ ಮಾಡಿದ್ದರು. ಶಶಿಕಲಾ, ದಿ.ಜಯಲಲಿತಾ ಹಾಗೂ MGR ಫೋಟೋಗಳಿರುವ ಬ್ಯಾನರ್​ಗಳನ್ನು ಅಳವಡಿಸಿದ್ದರು.

ಇದನ್ನು ಕಂಡು ಸಿಟ್ಟಿಗೆದ್ದ ಪ್ರವೀಣ್ ಶೆಟ್ಟಿ ಬಣದ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜೊತೆಗೆ, ತಮಿಳು ಭಾಷೆಯಲ್ಲಿದ್ದ ಬ್ಯಾನರ್ ಮತ್ತು ಫ್ಲೆಕ್ಸ್​ಗಳನ್ನು ಹರಿದು ಹಾಕಿ ತಮ್ಮ ಆಕ್ರೋಶ ಹೊರಹಾಕಿದರು. ಇದಲ್ಲದೆ, ಕೆಲವು ಬ್ಯಾನರ್ ಹಾಗೂ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದರು.

ಅಂದ ಹಾಗೆ, ಶಶಿಕಲಾ ನಟರಾಜನ್ ನಾಳೆ ಚೆನ್ನೈಗೆ ತೆರಳಲಿದ್ದು ಈ ಹಿನ್ನೆಲೆಯಲ್ಲಿ ಅವರಿಗೆ ಅದ್ದೂರಿ ಸ್ವಾಗತ ಕೋರಲು ತಮಿಳುನಾಡಿನಿಂದ ಬೆಂಬಲಿಗರು ರೆಸಾರ್ಟ್‌ನತ್ತ ಆಗಮಿಸುತ್ತಿದ್ದಾರೆ. ಕಾರು, ಟ್ಯಾಕ್ಸಿ, ಟಿಟಿಗಳಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಗುಂಪುಗುಂಪಾಗಿ ರೆಸಾರ್ಟ್ ಬಳಿ ಕಾರ್ಯಕರ್ತರು ಜಮಾವಣೆಗೊಳ್ಳುತ್ತಿದ್ದಾರೆ. ಕಾರ್ಯಕರ್ತರು ಇಡೀ ರಾತ್ರಿ ರೆಸಾರ್ಟ್‌ ಮುಂದೆ ಇರಲಿದ್ದಾರೆ. ನಾಳೆ ಬೆಳಗ್ಗೆ ನಡೆಯಲಿರುವ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನಕ್ಕೆ ಶಶಿಕಲಾ ಸಜ್ಜಾಗುತ್ತಿದ್ದಾರೆ.

ನಾಳೆ ತಮಿಳುನಾಡಿಗೆ ಎಂಟ್ರಿ ಬೆನ್ನಲ್ಲೇ‌ ಶಶಿಕಲಾಗೆ ಬಿಗ್ ಶಾಕ್: ನಾಯಕಿ ಆಪ್ತೆ ಇಳವರಸಿ, ಸುಧಾಕರನ್ ಆಸ್ತಿ ಮುಟ್ಟುಗೋಲು

Published On - 11:01 pm, Sun, 7 February 21

ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?