AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯಲು ಕರವೇ ಮನವಿ, ಒಂದೇ ಬಾರಿ ರಾಜ್ಯ ಬಂದ್​ಗೆ ಪ್ಲಾನ್

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ಸೆ.26 ರಂದು ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಇನ್ನೊಂದೆಡೆ, ಕರ್ನಾಟಕ ಬಂದ್​ ನಡೆಸಲು ಯೋಜಿಸಲಾಗುತ್ತಿದೆ. ನಾಳೆ ವಾಟಾಳ್ ನಾಗರಾಜ್ ಅವರು ಇದರ ದಿನಾಂಕ ಘೋಷಣೆ ಮಾಡಲಿದ್ದಾರೆ.

ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯಲು ಕರವೇ ಮನವಿ, ಒಂದೇ ಬಾರಿ ರಾಜ್ಯ ಬಂದ್​ಗೆ ಪ್ಲಾನ್
ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ (ಎಡಚಿತ್ರ)
TV9 Web
| Edited By: |

Updated on: Sep 24, 2023 | 3:52 PM

Share

ಬೆಂಗಳೂರು, ಸೆ.24: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ಸೆ.26 ರಂದು ಬೆಂಗಳೂರು ಬಂದ್​ಗೆ(Bangalore Bandh) ಕರೆ ನೀಡಲಾಗಿದೆ. ಆದರೆ ಎಲ್ಲರೂ ಒಟ್ಟು ಸೇರಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಎಲ್ಲಾ ಸಂಘಟನೆಗಳು ಸೇರಿಕೊಂಡು ಕರ್ನಾಟಕ ಬಂದ್ (Karnataka Bandh) ನಡೆಸಲು ಕರ್ನಾಟಕ ರಕ್ಷಣಾ ವೇದಿಕೆ ತೀರ್ಮಾನಿಸಿದೆ. ಹೀಗಾಗಿ ಬೆಂಗಳೂರು ಬಂದ್ ಹಿಂಪಡೆಯಲು ಮನವಿ ಮಾಡಿದೆ.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟು, ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯುವಂತೆ ಮನವಿ ಮಾಡಿದ್ದೇವೆ. ಬೆಂಗಳೂರು ಬಂದ್​, ಕರ್ನಾಟಕ ಬಂದ್​ ಪ್ರತ್ಯೇಕವಾಗಿ ಬೇಡ ಅಂತ ಮನವಿ ಮಾಡಲಾಗಿದೆ. ಎರಡು ಬಾರಿ ಬಂದ್ ಮಾಡುವ ಬದಲು ಒಂದೇ ಬಾರಿ ರಾಜ್ಯ ಬಂದ್ ಮಾಡೋಣ. ಈ ಬಗ್ಗೆ ವಾಟಾಳ್ ನಾಗರಾಜ್ ಸೇರಿ ಎಲ್ಲ ಸಂಘಟನೆಗಳ ಜತೆ ಚರ್ಚಿಸುತ್ತೇವೆ ಎಂದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ರೈತರು, ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಸೆ.26 ರಂದು ಬೆಂಗಳೂರು ಬಂದ್ ನಿಶ್ಚಿತವಾಗಿದೆ. ಬಹುತೇಕ ಸಂಘಟನೆಗಳು ಬೆಂಬಲ ಸೂಚಿಸಿವೆ.

ಇದನ್ನೂ ಓದಿ: ಸೆ.26 ರಂದು ಬೆಂಗಳೂರು ಬಂದ್​: ನಿರ್ಮಾಪಕರ ಸಂಘ ಸೇರಿದಂತೆ ಹಲವು ಸಂಘಗಳಿಂದ ಬೆಂಬಲ

ಇನ್ನೊಂದೆಡೆ, ಅಖಂಡ ಕರ್ನಾಟಕ ಬಂದ್ ನಡೆಸಲು ಒಂದಷ್ಟು ಕನ್ನಡ ಪರ ಸಂಘಟನೆಗಳು ಮುಂದಾಗಿವೆ. ವಾಟಾಳ್ ನಾಗರಾಜ್, ಸೋಮವಾರದಂದು ಬಂದ್ ದಿನಾಂಕ ಘೋಷಣೆ ಮಾಡಲಿದ್ದಾರೆ. ಸೆ. 28 ಅಥವಾ 29 ಅಥವಾ 30 ರಂದು ಅಖಂಡ ಕರ್ನಾಟಕ ಬಂದ್ ನಡೆಸುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿದ ವಾಟಾಳ್, 26 ರಂದು ಬಂದ್​ಗೆ ಕರೆ ನೀಡಿರುವುದಕ್ಕೆ ನನ್ನ ವಿರೋಧ ವಿಲ್ಲ. ಅವರ ಜೊತೆಗೆ ಮಾತಾಡುತ್ತೇವೆ, ಎಲ್ಲರೂ ಒಟ್ಟಿಗೆ ಸೇರಿ ಅಖಂಡ ಕರ್ನಾಟಕ ಬಂದ್ ಮಾಡೋಣ ಅಂತ ಮನವಿ ಮಾಡುವುದಾಗಿ ಹೇಳಿದ್ದರು.

ವಾಟಾಳ್​ ನಾಗರಾಜ್ ಪೊಲೀಸರ ವಶಕ್ಕೆ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್​ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮೈಸೂರು ಬ್ಯಾಂಕ್​ ಸರ್ಕಲ್​​ ಬಳಿ ಕನ್ನಡ ಒಕ್ಕೂಟದಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ನಾಳೆ ಮಹತ್ವದ ಸಭೆ

ಕರ್ನಾಟಕ ಬಂದ್​​ಗೆ ಕರೆ ನೀಡುವ ಸಂಬಂಧ ಬೆಂಗಳೂರಿನ ಖಾಸಗಿ ಹೊಟೇಲ್​ನಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದೆ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಎಲ್ಲಾ ಸಂಘಟನೆಗಳ ಜೊತೆ ಚರ್ಚಿಸಿ ಕರ್ನಾಟಕ ಬಂದ್​ ದಿನಾಂಕ ನಿಗದಿ ಮಾಡಲಾಗುತ್ತಿದೆ.

ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕರವೇ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನಾನಿರತ ವಾಟಾಳ್​ ನಾಗರಾಜ್, ಸಾ.ರಾ.ಗೋವಿಂದು ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳ ಮುಖಂಡರನ್ನು ಪೊಲೀಸ್ ವಶಕ್ಕೆ ಪಡೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್