AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ನದಿ ಹಳೆ ಸೇತುವೆ ಕುಸಿತ; ಹೊಸ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರ ನಿಷೇಧ

ರಾಷ್ಟ್ರೀಯ ಹೆದ್ದಾರಿ 66ರ ಕಾರವಾರ ಹಾಗೂ ಗೋವಾಗೆ ಸಂಪರ್ಕ ಕಲ್ಪಿಸುವಂತೆ ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಹಳೆ ಸೇತುವೆ ಕುಸಿದುಬಿದ್ದಿದೆ. ಈ ಹಿನ್ನೆಲೆ ಹೊಸ ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಅಂಕೋಲಾದ ಹಟ್ಟಿಕೇರಿ ಟೋಲ್‌ಗೇಟ್ ಬಳಿ ಸರಕು ವಾಹನಗಳಿಗೆ ತಡೆ ಹಿಡಿಯಲಾಗುತ್ತಿದೆ.

ಕಾಳಿ ನದಿ ಹಳೆ ಸೇತುವೆ ಕುಸಿತ; ಹೊಸ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರ ನಿಷೇಧ
ಕಾಳಿ ನದಿ ಹಳೆ ಸೇತುವೆ ಕುಸಿತ; ಹೊಸ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರನಿಷೇಧ
ಸೂರಜ್​, ಮಹಾವೀರ್​ ಉತ್ತುರೆ
| Edited By: ಆಯೇಷಾ ಬಾನು|

Updated on:Aug 07, 2024 | 2:13 PM

Share

ಕಾರವಾರ, ಆಗಸ್ಟ್.07: ಕಾರವಾರದ ಕೋಡಿಭಾಗ್​ ಬಳಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆ ಸೇತುವೆ ಕುಸಿದು (Bridge Collapse) ಬಿದ್ದಿದೆ. ಈ ಹಿನ್ನೆಲೆ ಹೊಸ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಕಾರವಾರ ಹಾಗೂ ಗೋವಾಗೆ ಸಂಪರ್ಕ ಕಲ್ಪಿಸುವಂತೆ ಕಾಳಿ ನದಿಗೆ 41 ವರ್ಷದ ಹಿಂದೆ ಸೇತುವೆ ಕಟ್ಟಲಾಗಿತ್ತು. ಈ ಸೇತುವೆ ಹಳೆಯದಾದ ಹಿನ್ನೆಲೆ ಪಕ್ಕದಲ್ಲೇ ಮತ್ತೊಂದು ಹೊಸ ಸೇತುವೆ ಕಟ್ಟಲಾಗಿದೆ. ಇದೀಗ ಹಳೆ ಸೇತುವೆ ಕುಸಿದಿದ್ದು ಹೊಸ ಸೇತುವೆ ಮೇಲೂ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಪೊಲೀಸ್ ಇಲಾಖೆ ಹೊಸ ಸೇತುವೆ ಮೇಲೆ ಲಘು ವಾಹನಗಳ ಓಡಾಟಕ್ಕೆ ಮಾತ್ರ ಅವಕಾಶ ಕೊಡ್ತಿದ್ದಾರೆ. ಭಾರೀ ವಾಹನಗಳ ಸಂಚಾರ ನಿಷೇಧ ಹಿನ್ನಲೆ ಅಂಕೋಲಾದ ಹಟ್ಟಿಕೇರಿ ಟೋಲ್‌ಗೇಟ್ ಬಳಿ ಸರಕು ವಾಹನಗಳಿಗೆ ತಡೆ ಹಿಡಿಯಲಾಗುತ್ತಿದೆ. ವಾಹನ ದಟ್ಟಣೆ ಉಂಟಾಗದಂತೆ ಸರಕು ವಾಹನಗಳನ್ನ ತಡೆದು ನಿಲ್ಲಿಸಲಾಗುತ್ತಿದೆ. ಗೋವಾ ಮಾರ್ಗಕ್ಕೆ ತೆರಳುವ ಭಾರೀ ವಾಹನಗಳಿಗೆ ಟೋಲ್‌‌ನಲ್ಲೇ ತಡೆದು ಪೊಲೀಸರು ನಿಲ್ಲಿಸುತ್ತಿದ್ದಾರೆ. ಭಾರೀ ವಾಹನ ಸಂಚಾರ ಆರಂಭವಾಗುವವರೆಗೆ ಸರಕು ವಾಹನಗಳಿಗೆ ತಡೆ ಹಿಡಿಯಲಾಗಿದೆ.

ಇದನ್ನೂ ಓದಿ: ಕಾರವಾರ ಸೇತುವೆ ಕುಸಿತ: ಕಾಳಿ ನದಿಗೆ ಬಿದ್ದು ಬದುಕಿ ಬಂದ ರೋಚಕ ಅನುಭವ ವಿವರಿಸಿದ ಲಾರಿ ಚಾಲಕ ಬಾಲ ಮುರುಗನ್

41 ವರ್ಷದ ಹಳೆಯ ಸೇತುವೆ ನಿನ್ನೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕುಸಿದುಬಿದ್ದಿದೆ. NHAI ಹಾಗೂ IRB ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ದೊಡ್ಡ ದುರಂತವೇ ನಡೆದು ಹೋಗಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿರ್ಮಾಣದ ವೇಳೆ ಒಂದೇ ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಆದ್ರೆ ಇನ್ನೊಂದು ಮಾರ್ಗಕ್ಕೆ ಹೊಸ ಸೇತುವೆ ನಿರ್ಮಾಣ ಮಾಡದೇ, ಇರುವ ಹಳೆ ಸೇತುವೆಯನ್ನೆ ಬಳಸಲಾಗ್ತಿತ್ತು. ಹೀಗಾಗಿ ಇಂತಹದೊಂದು ಅನಾಹುತ ನಡೆದು ಹೋಗಿದೆ.

ಸೇತುವೆ ಕುಸಿತದಲ್ಲಿ ತಮಿಳುನಾಡು ಮೂಲಕ ಲಾರಿ ಚಾಲಕ ಬಚಾವ್​ ಆಗಿದ್ದೇ ಪವಾಡ. ಗೋವಾದಿಂದ ಹುಬ್ಬಳ್ಳಿ ಕಡೆಗೆ ಬಾಲಮುರುಗನ್​ ಪೋಸಾಮಿ ಬರುತ್ತಿದ್ದರು. ಲಾರಿ ಸೇತುವೆ ಮೇಲೆ ಯಾವಾಗ ಬಂತೋ ಒಮ್ಮೆಲೇ ಕುಸಿದು ಬಿದ್ದಿದೆ. ಆಗ ಚಾಲಕ ಲಾರಿ ಸಮೇತ ಕಾಳಿ ನದಿಗೆ ಬಿದ್ದಿದ್ದಾರೆ. ಹೇಗೋ ಮುಂಭಾಗದ ಗಾಜು ಒಡೆದು, ಕ್ಯಾಬಿನ್​ ಮೇಲೆ ನಿಂತುಕೊಂಡು ಕೂಗಿಕೊಂಡಿದ್ದಾರೆ. ಕೂಡಲೇ ಅಲ್ಲಿದ್ದ ಬೀಟ್​ ಪೊಲೀಸರು ಹಾಗೂ ಮೀನುಗಾರರು ಆತನನ್ನ ರಕ್ಷಣೆ ಮಾಡಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:11 pm, Wed, 7 August 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ