ಕಾಳಿ ನದಿ ಹಳೆ ಸೇತುವೆ ಕುಸಿತ; ಹೊಸ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರ ನಿಷೇಧ

ರಾಷ್ಟ್ರೀಯ ಹೆದ್ದಾರಿ 66ರ ಕಾರವಾರ ಹಾಗೂ ಗೋವಾಗೆ ಸಂಪರ್ಕ ಕಲ್ಪಿಸುವಂತೆ ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಹಳೆ ಸೇತುವೆ ಕುಸಿದುಬಿದ್ದಿದೆ. ಈ ಹಿನ್ನೆಲೆ ಹೊಸ ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಅಂಕೋಲಾದ ಹಟ್ಟಿಕೇರಿ ಟೋಲ್‌ಗೇಟ್ ಬಳಿ ಸರಕು ವಾಹನಗಳಿಗೆ ತಡೆ ಹಿಡಿಯಲಾಗುತ್ತಿದೆ.

ಕಾಳಿ ನದಿ ಹಳೆ ಸೇತುವೆ ಕುಸಿತ; ಹೊಸ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರ ನಿಷೇಧ
ಕಾಳಿ ನದಿ ಹಳೆ ಸೇತುವೆ ಕುಸಿತ; ಹೊಸ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರನಿಷೇಧ
Follow us
| Updated By: ಆಯೇಷಾ ಬಾನು

Updated on:Aug 07, 2024 | 2:13 PM

ಕಾರವಾರ, ಆಗಸ್ಟ್.07: ಕಾರವಾರದ ಕೋಡಿಭಾಗ್​ ಬಳಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆ ಸೇತುವೆ ಕುಸಿದು (Bridge Collapse) ಬಿದ್ದಿದೆ. ಈ ಹಿನ್ನೆಲೆ ಹೊಸ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಕಾರವಾರ ಹಾಗೂ ಗೋವಾಗೆ ಸಂಪರ್ಕ ಕಲ್ಪಿಸುವಂತೆ ಕಾಳಿ ನದಿಗೆ 41 ವರ್ಷದ ಹಿಂದೆ ಸೇತುವೆ ಕಟ್ಟಲಾಗಿತ್ತು. ಈ ಸೇತುವೆ ಹಳೆಯದಾದ ಹಿನ್ನೆಲೆ ಪಕ್ಕದಲ್ಲೇ ಮತ್ತೊಂದು ಹೊಸ ಸೇತುವೆ ಕಟ್ಟಲಾಗಿದೆ. ಇದೀಗ ಹಳೆ ಸೇತುವೆ ಕುಸಿದಿದ್ದು ಹೊಸ ಸೇತುವೆ ಮೇಲೂ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಪೊಲೀಸ್ ಇಲಾಖೆ ಹೊಸ ಸೇತುವೆ ಮೇಲೆ ಲಘು ವಾಹನಗಳ ಓಡಾಟಕ್ಕೆ ಮಾತ್ರ ಅವಕಾಶ ಕೊಡ್ತಿದ್ದಾರೆ. ಭಾರೀ ವಾಹನಗಳ ಸಂಚಾರ ನಿಷೇಧ ಹಿನ್ನಲೆ ಅಂಕೋಲಾದ ಹಟ್ಟಿಕೇರಿ ಟೋಲ್‌ಗೇಟ್ ಬಳಿ ಸರಕು ವಾಹನಗಳಿಗೆ ತಡೆ ಹಿಡಿಯಲಾಗುತ್ತಿದೆ. ವಾಹನ ದಟ್ಟಣೆ ಉಂಟಾಗದಂತೆ ಸರಕು ವಾಹನಗಳನ್ನ ತಡೆದು ನಿಲ್ಲಿಸಲಾಗುತ್ತಿದೆ. ಗೋವಾ ಮಾರ್ಗಕ್ಕೆ ತೆರಳುವ ಭಾರೀ ವಾಹನಗಳಿಗೆ ಟೋಲ್‌‌ನಲ್ಲೇ ತಡೆದು ಪೊಲೀಸರು ನಿಲ್ಲಿಸುತ್ತಿದ್ದಾರೆ. ಭಾರೀ ವಾಹನ ಸಂಚಾರ ಆರಂಭವಾಗುವವರೆಗೆ ಸರಕು ವಾಹನಗಳಿಗೆ ತಡೆ ಹಿಡಿಯಲಾಗಿದೆ.

ಇದನ್ನೂ ಓದಿ: ಕಾರವಾರ ಸೇತುವೆ ಕುಸಿತ: ಕಾಳಿ ನದಿಗೆ ಬಿದ್ದು ಬದುಕಿ ಬಂದ ರೋಚಕ ಅನುಭವ ವಿವರಿಸಿದ ಲಾರಿ ಚಾಲಕ ಬಾಲ ಮುರುಗನ್

41 ವರ್ಷದ ಹಳೆಯ ಸೇತುವೆ ನಿನ್ನೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕುಸಿದುಬಿದ್ದಿದೆ. NHAI ಹಾಗೂ IRB ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ದೊಡ್ಡ ದುರಂತವೇ ನಡೆದು ಹೋಗಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿರ್ಮಾಣದ ವೇಳೆ ಒಂದೇ ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಆದ್ರೆ ಇನ್ನೊಂದು ಮಾರ್ಗಕ್ಕೆ ಹೊಸ ಸೇತುವೆ ನಿರ್ಮಾಣ ಮಾಡದೇ, ಇರುವ ಹಳೆ ಸೇತುವೆಯನ್ನೆ ಬಳಸಲಾಗ್ತಿತ್ತು. ಹೀಗಾಗಿ ಇಂತಹದೊಂದು ಅನಾಹುತ ನಡೆದು ಹೋಗಿದೆ.

ಸೇತುವೆ ಕುಸಿತದಲ್ಲಿ ತಮಿಳುನಾಡು ಮೂಲಕ ಲಾರಿ ಚಾಲಕ ಬಚಾವ್​ ಆಗಿದ್ದೇ ಪವಾಡ. ಗೋವಾದಿಂದ ಹುಬ್ಬಳ್ಳಿ ಕಡೆಗೆ ಬಾಲಮುರುಗನ್​ ಪೋಸಾಮಿ ಬರುತ್ತಿದ್ದರು. ಲಾರಿ ಸೇತುವೆ ಮೇಲೆ ಯಾವಾಗ ಬಂತೋ ಒಮ್ಮೆಲೇ ಕುಸಿದು ಬಿದ್ದಿದೆ. ಆಗ ಚಾಲಕ ಲಾರಿ ಸಮೇತ ಕಾಳಿ ನದಿಗೆ ಬಿದ್ದಿದ್ದಾರೆ. ಹೇಗೋ ಮುಂಭಾಗದ ಗಾಜು ಒಡೆದು, ಕ್ಯಾಬಿನ್​ ಮೇಲೆ ನಿಂತುಕೊಂಡು ಕೂಗಿಕೊಂಡಿದ್ದಾರೆ. ಕೂಡಲೇ ಅಲ್ಲಿದ್ದ ಬೀಟ್​ ಪೊಲೀಸರು ಹಾಗೂ ಮೀನುಗಾರರು ಆತನನ್ನ ರಕ್ಷಣೆ ಮಾಡಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:11 pm, Wed, 7 August 24

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ