Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಹಸಿರು ಹೊದ್ದು ನಿಂತ ಕರೀಘಟ್ಟ ಬೆಟ್ಟ!;

ಕರೀಘಟ್ಟ ಬೆಟ್ಟದಲ್ಲಿ ವೆಂಕಟೇಶ್ವರ ಸ್ವಾಮಿಯೂ ನೆಲೆಸಿರುವುದರಿಂದ ಚಿಕ್ಕ ತಿರುಪತಿ ಎಂಬ ಖ್ಯಾತಿಗೆ ಪಾತ್ರವಾಗಿದೆ. ಹೀಗಾಗಿ ದೇವರ ದರ್ಶನದ ಜೊತೆಗೆ ಪ್ರಕೃತಿಯ ಸೌಂದರ್ಯವನ್ನು ಸವಿಯಬಹುದಾಗಿದೆ.

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಹಸಿರು ಹೊದ್ದು ನಿಂತ ಕರೀಘಟ್ಟ ಬೆಟ್ಟ!;
ಕರೀಘಟ್ಟ ಬೆಟ್ಟ
Follow us
preethi shettigar
| Updated By: Lakshmi Hegde

Updated on:Dec 26, 2020 | 4:38 PM

ಮಂಡ್ಯರಾಜ್ಯದ ಪ್ರಮುಖ ಪ್ರವಾಸಿತಾಣಗಳಲ್ಲೊಂದಾದ ಶ್ರೀರಂಗಪಟ್ಟಣದ ಸಮೀಪದ ಕರೀಘಟ್ಟ, ಇದೀಗ ಹಸಿರು ತುಂಬಿಕೊಂಡು ಕಂಗೊಳಿಸುತ್ತಿದೆ. ತಾಣದ ಸೌಂದರ್ಯ ಇಮ್ಮಡಿಯಾಗಿದೆ. ಈಗ ಜನರ ಭೇಟಿ ಪ್ರಮಾಣವೂ ಹೆಚ್ಚುತ್ತಿದೆ. 

ಪ್ರತಿವರ್ಷ ಮಾರ್ಚ್​-ಏಪ್ರಿಲ್​ನಲ್ಲಿ, ಅಂದರೆ ಬೇಸಿಗೆ ಸಮಯದಲ್ಲಿ ಬೆಟ್ಟ ಬೆಂಕಿಯಿಂದ ಒಣಗಿರುತ್ತದೆ. ಆದರೆ ಈ ಬಾರಿ ಸುರಿದಿರುವ ಮಳೆಯಿಂದ ಇಡೀ ಬೆಟ್ಟದ ಚಿತ್ರಣ ಬದಲಾಗಿದೆ. ಎಲ್ಲಿ ನೋಡಿದರೂ ಹಸಿರು ಕಂಗೊಳಿಸುತ್ತಿದೆ.

ವೆಂಕಟರಮಣ ದೇವಾಲಯದ ದ್ವಾರ

ಸಾಕಷ್ಟು ವಿಶಾಲವಾಗಿರುವ ಹಾಗೂ ಸಾವಿರಾರು ಅಡಿ ಎತ್ತರವಾಗಿರುವ ಈ ಬೆಟ್ಟದ ಮೇಲಿನಿಂದ ನಿಂತು ನೋಡಿದರೆ ಸಂಪೂರ್ಣ ಶ್ರೀರಂಗಪಟ್ಟಣದ ಚಿತ್ರಣ ಕಾಣಿಸುತ್ತದೆ. ಬಗೆಬಗೆಯ ಹುಲ್ಲುಗಳಿಂದ ಕೂಡಿದ್ದು ಸಂಪೂರ್ಣ ಹಸಿರನ್ನೇ ಹೊದ್ದು ನಿಂತಿರುವ ಕರೀಘಟ್ಟ ಬೆಟ್ಟದಲ್ಲಿ ವೆಂಕಟೇಶ್ವರ ಸ್ವಾಮಿಯೂ ನೆಲೆಸಿರುವುದರಿಂದ ಚಿಕ್ಕ ತಿರುಪತಿ ಎಂಬ ಖ್ಯಾತಿಗೆ ಪಾತ್ರವಾಗಿದೆ. ಹೀಗಾಗಿ ದೇವರ ದರ್ಶನದ ಜೊತೆಗೆ ಪ್ರಕೃತಿಯ ಸೌಂದರ್ಯವನ್ನು ಸವಿಯಬಹುದಾಗಿದೆ.

ನದಿ ಹರಿಯುವಿಕೆ

ಮೂಢನಂಬಿಕೆ ಕಂಟಕ ಹಸಿರನ್ನೇ ಹೊದ್ದುಕೊಂಡಂತೆ ಕಂಗೊಳಿಸುತ್ತಿರುವ ಕರೀಘಟ್ಟ ಬೆಟ್ಟ ಈಗೀಗ ಹಾಳಾಗುತ್ತಿದ್ದು, ಜನರು ಮೂಢನಂಬಿಕೆಯ ಹೆಸರಿನಲ್ಲಿ ಬೆಟ್ಟಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕುವುದೇ ಇದಕ್ಕೆ ಕಾರಣ. ಆದರೆ ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದ್ದು, ದೇವರ ದರ್ಶನಕ್ಕೆಂದು ಬೆಟ್ಟಕ್ಕೆ ಬರುವ ಕೆಲವು ಜನರು ತಾವೇ ಒಂದು ಸಸಿಯನ್ನು ತಂದು ನೆಡಲಾರಂಭಿಸಿದ್ದಾರೆ. ಅಲ್ಲದೆ ಬೆಳೆದಿರುವ ಗಿಡಗಳ ರಕ್ಷಣೆಗೂ ಮುಂದಾಗುತ್ತಿದ್ದಾರೆ. ಹೀಗಾಗಿ ಸದ್ಯ ಕರೀಘಟ್ಟ ಬಗೆ ಬಗೆಯ ಗಿಡಮರಗಳ ಜೊತೆಗೆ ಹಸಿರಿನಿಂದ ಕಂಗೊಳಿಸುತ್ತಿದ್ದು, ಪ್ರವಾಸಿಗರಿಗೆ ಒಂದು ದಿನದ ಪಿಕ್​ನಿಕ್​ಗೆ ಹೇಳಿ ಮಾಡಿಸಿದಂತಹ ಸುಂದರ ತಾಣವಾಗಿದೆ.

ಹಸಿರಿನಿಂದ ಕಂಗೊಳಿಸುತ್ತಿರುವ ಪ್ರಕೃತಿ

ಒಟ್ಟಾರೆ ಕರೀಘಟ್ಟ ಬೆಟ್ಟಕ್ಕೆ ಬರುವ ಪ್ರವಾಸಿಗರು ಪ್ರಕೃತಿಯ ಸೌಂದರ್ಯ ಸವಿಯುವುದರ ಜೊತೆಗೆ ತಮ್ಮ ಇಷ್ಟ ದೇವರಾದ ಶ್ರೀನಿವಾಸನ ದರ್ಶನ ಪಡೆಯುತ್ತಿದ್ದಾರೆ. ಹೀಗಾಗಿ ಎರಡು ಉದ್ದೇಶಗಳು ಒಂದೇ ಕಡೆ ನೆರವೇರಲಿದೆ ಎಂಬ ಕಾರಣಕ್ಕೆ ದಿನದಿಂದ ದಿನಕ್ಕೆ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ.

ವೆಂಕಟರಮಣ ದೇವರ ದರ್ಶನ

ಮಂಡ್ಯ ಜಿಲ್ಲೆಯ ಕರೀಘಟ್ಟ ಬೆಟ್ಟ

ಮಂಜು ಕವಿದ ವಾತಾವರಣ

ಬಿಸಿಲು ನಾಡಿನ ಮಿಂಚೇರಿ ನೀಡ್ತಿದೆ ಮಲೆನಾಡಿನ ಅನುಭವ, ಪ್ರಕೃತಿ ಸೌಂದರ್ಯಕ್ಕೆ ಪ್ರವಾಸಿಗರು ಮಂತ್ರಮುಗ್ಧ

Published On - 4:38 pm, Sat, 26 December 20

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ