Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ 14948 ಅಂಗನವಾಡಿಗಳಲ್ಲಿ ವಿದ್ಯುತ್, 13690ರಲ್ಲಿ ಶೌಚಾಲಯ ಇಲ್ಲ: ಸೌಕರ್ಯ ಕಲ್ಪಿಸಲು ಹೈಕೋರ್ಟ್​ ಗಡುವು

2021ರ ಡಿಸೆಂಬರ್ 31ರ ಒಳಗಾಗಿ ಅಂಗನವಾಡಿಗಳಲ್ಲಿ ವಿದ್ಯುತ್, ಫ್ಯಾನ್ ಒದಗಿಸಲು ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಜತೆಗೆ ರಾಜ್ಯದ ಎಲ್ಲ ಅಂಗನವಾಡಿಗಳಲ್ಲಿ ಜೂನ್ 30, 2022ರೊಳಗೆ ಶೌಚಾಲಯ ಕಲ್ಪಿಸುವಂತೆಯೂ ಕೋರ್ಟ್ ಗಂಭೀರ ಸೂಚನೆ ನೀಡಿದೆ.

ಕರ್ನಾಟಕದ 14948 ಅಂಗನವಾಡಿಗಳಲ್ಲಿ ವಿದ್ಯುತ್, 13690ರಲ್ಲಿ ಶೌಚಾಲಯ ಇಲ್ಲ: ಸೌಕರ್ಯ ಕಲ್ಪಿಸಲು ಹೈಕೋರ್ಟ್​ ಗಡುವು
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on:Jul 05, 2021 | 5:47 PM

ಬೆಂಗಳೂರು: ರಾಜ್ಯದ ಅಂಗನವಾಡಿಗಳಿಗೆ ಮೂಲಸೌಕರ್ಯ ಕಲ್ಪಿಸಲು ಸರ್ಕಾರ ಕೈಗೊಂಡಿರುವ ಕ್ರಮ ಸಮಾಧಾನಕರವಾಗಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯದ 65,911 ಅಂಗನವಾಡಿಗಳ ಪೈಕಿ 14,948 ಕೇಂದ್ರಗಳಲ್ಲಿ ವಿದ್ಯುತ್ ಇಲ್ಲ. 18,974 ಅಂಗನವಾಡಿಗಳಲ್ಲಿ ಫ್ಯಾನ್ ಇಲ್ಲ. 13,690 ಅಂಗನವಾಡಿಗಳಲ್ಲಿ ಶೌಚಾಲಯವಿಲ್ಲ ಎಂಬ ಮಾಹಿತಿಯನ್ನು ಹೈಕೋರ್ಟ್ ವಿಚಾರಣೆ​ ವೇಳೆ ಬಹಿರಂಗಗೊಂಡಿದೆ. ಶೌಚಾಲಯ, ವಿದ್ಯುತ್, ಫ್ಯಾನ್​ಗಳಂತಹ ಮೂಲಭೂತ ಅವಶ್ಯಕತೆ ಮತ್ತು ಮೂಲಸೌಕರ್ಯ ಇಲ್ಲದಿದ್ದರೆ ಕಾರ್ಯನಿರ್ವಹಣೆ ಅಸಾಧ್ಯ ಎಂದು ಹೈಕೋರ್ಟ್​ ವಿಭಾಗೀಯ ಪೀಠ ಗಂಭೀರ ಅಭಿಪ್ರಾಯ ವ್ಯಕ್ತಪಡಿಸಿದೆ.

2021ರ ಡಿಸೆಂಬರ್ 31ರ ಒಳಗಾಗಿ ಅಂಗನವಾಡಿಗಳಲ್ಲಿ ವಿದ್ಯುತ್, ಫ್ಯಾನ್ ಒದಗಿಸಲು ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಜತೆಗೆ ರಾಜ್ಯದ ಎಲ್ಲ ಅಂಗನವಾಡಿಗಳಲ್ಲಿ ಜೂನ್ 30, 2022ರೊಳಗೆ ಶೌಚಾಲಯ ಕಲ್ಪಿಸುವಂತೆಯೂ ಕೋರ್ಟ್ ಗಂಭೀರ ಸೂಚನೆ ನೀಡಿದೆ. ಅಲ್ಲದೇ ಸರ್ಕಾರಿ ಜಾಗದಲ್ಲಿರುವ 3,524 ಅಂಗನವಾಡಿಗಳಿಗೆ ಡಿಸೆಂಬರ್ 31ರೊಳಗೆ ಶೌಚಾಲಯ ಸೌಲಭ್ಯವನ್ನು ಕಲ್ಪಿಸುವಂತೆಯೂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

2nd PU Repeaters Exam 2021: ದ್ವಿತೀಯ ಪಿಯುಸಿ ರಿಪೀಟರ್ಸ್ ಪರೀಕ್ಷೆ ಇಲ್ಲದೇ ಪಾಸ್; ಹೈಕೋರ್ಟ್​ಗೆ ತಿಳಿಸಿದ ಸರ್ಕಾರ ದ್ವಿತೀಯ ಪಿಯುಸಿ ರಿಪೀಟರ್ಸ್​ಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಎಲ್ಲಾ ರಿಪೀಟರ್ಸ್ ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಾಗುವುದು ಎಂದು ಹೈಕೋರ್ಟ್‌ಗೆ ತಿಳಿಸಿದೆ. ಶೇ.35ರಷ್ಟು ಅಂಕ ನೀಡಿ ಎಲ್ಲ ರಿಪೀಟರ್ಸ್ ವಿದ್ಯಾರ್ಥಿಗಳನ್ನೂ ತೇರ್ಗಡೆ ಎಂದು ಘೋಷಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶೇ.35 ರ ಜೊತೆ ಶೇ.5 ರಷ್ಟು ಗ್ರೇಸ್ ಮಾರ್ಕ್ಸ್ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ.

ಆದರೆ ದ್ವಿತೀಯ ಪಿಯುಸಿ ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ. ಅಗಸ್ಟ್ 31ರೊಳಗೆ ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ, ಸೆಪ್ಟೆಂಬರ್ 20ರೊಳಗೆ ಫಲಿತಾಂಶ ಪ್ರಕಟಿಸಲು ಹೈಕೋರ್ಟ್ ಸೂಚನೆ ನೀಡಿದೆ. ಕೊವಿಡ್ ಮಾರ್ಗಸೂಚಿ ಅನುಸರಿಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದ್ದು, ಹಿಂದಿನ ವರ್ಷದ ಅಂಕವನ್ನು ತಿರಸ್ಕರಿಸಿದವರಿಗೆ ಆಯ್ಕೆ ನೀಡಲು ತಿಳಿಸಿದೆ. ಖಾಸಗಿ ಪರೀಕ್ಷಾರ್ಥಿಗಳು ಹಿಂದಿನ ಬಾರಿಯ ಅಂಕವನ್ನೇ ಪಡೆಯಬಹುದು. ಅಥವಾ ಪರೀಕ್ಷೆ ನಡೆಸಿದಾಗ ಬರೆಯಬಹುದು ಎಂದು ನಿರ್ದೇಶನ ನೀಡುವ ಕೋರ್ಟ್, ಅಂಕ ಉತ್ತಮಪಡಿಸಿಕೊಳ್ಳ ಬಯಸಿದ ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಿದೆ.

ಇದನ್ನೂ ಓದಿ: ಏಷ್ಯಾದಲ್ಲಿ ಕೊವಿಡ್-19: ಮೂರನೇ ಅಲೆಯ ಆತಂಕದಲ್ಲಿ ಭಾರತ; ಇತರ ರಾಷ್ಟ್ರಗಳು ಏನೇನು ಸಿದ್ಧತೆ ಮಾಡಿಕೊಂಡಿವೆ?

Co-Winನ್ನು ಇತರ ದೇಶಗಳೊಂದಿಗೆ ಹಂಚಲು ಭಾರತ ಸಿದ್ಧ: ಈ ಪೋರ್ಟಲ್‌ನಲ್ಲಿ ನೀವು ಏನೇನು ಮಾಡಬಹುದು?

(Karnataka 14948 Anganwadis in the state have no electricity 13,690 Anganwadis have no toilet High court gave the deadline to arrange)

Published On - 5:21 pm, Mon, 5 July 21

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು