AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರದಿಂದ ಕರ್ನಾಟಕ ವಿಧಾನಮಂಡಲ ಜಂಟಿ ಅಧಿವೇಶನ ಆರಂಭ, ರಾಜ್ಯಪಾಲರ ಸ್ವಾಗತಕ್ಕೆ ಸಿದ್ಧತೆ

ಅಧಿವೇಶನದಲ್ಲಿ ಎರಡು ವಿಧೇಯಕಗಳು ಮಂಡನೆಯಾಗಲಿವೆ. ಜೊತೆಗೆ ಇನ್ನೂ ಕೆಲ ವಿಧೇಯಕಗಳ ಮಂಡನೆಗೆ ಸರ್ಕಾರದ ವತಿಯಿಂದ ಸಿದ್ಧತೆ ನಡೆದಿದೆ. ಸುಮಾರು 2,000 ಕ್ಕೂ ಹೆಚ್ಚು ಪ್ರಶ್ನೆಗಳು ಸರ್ಕಾರದಿಂದ ಉತ್ತರ ಬಯಸಿ ಬಂದಿವೆ. ಅಧಿವೇಶನ ವೀಕ್ಷಿಸಲು ಈ ಬಾರಿ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಲಾಗಿದೆ.

ಸೋಮವಾರದಿಂದ ಕರ್ನಾಟಕ ವಿಧಾನಮಂಡಲ ಜಂಟಿ ಅಧಿವೇಶನ ಆರಂಭ, ರಾಜ್ಯಪಾಲರ ಸ್ವಾಗತಕ್ಕೆ ಸಿದ್ಧತೆ
ಸೋಮವಾರದಿಂದ ಕರ್ನಾಟಕ ವಿಧಾನಮಂಡಲ ಜಂಟಿ ಅಧಿವೇಶನ ಆರಂಭ, ರಾಜ್ಯಪಾಲರ ಸ್ವಾಗತಕ್ಕೆ ಸಿದ್ಧತೆ
TV9 Web
| Edited By: |

Updated on:Feb 12, 2022 | 1:39 PM

Share

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ (karnataka legislature joint session) ಸೋಮವಾರದಿಂದ ಫೆಬ್ರವರಿ 14ರಿಂದ ಆರಂಭವಾಗಲಿದೆ. ರಾಜ್ಯಪಾಲರ ಸ್ವಾಗತಕ್ಕೆ ಪೊಲೀಸ್ ಬ್ಯಾಂಡ್, ಅಶ್ವ ದಳದಿಂದ ತಾಲೀಮು ಸಹ ನಡೆದಿದೆ. ಕರ್ನಾಟಕದ 19ನೇ ರಾಜ್ಯಪಾಲದರಾದ ಥಾವರ್ ಚಂದ್ ಗೆಹ್ಲೋಟ್ (Thaawar Chand Gehlot) ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರುಗಳು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವಂತೆ ಆಹ್ವಾನಿಸಿದರು.

ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಈವರೆಗೆ 2 ವಿಧೇಯಕಗಳು ನನ್ನ ಕಚೇರಿಗೆ ಬಂದಿವೆ. ಕರ್ನಾಟಕ ಕ್ರಿಮಿನಲ್ ತಿದ್ದುಪಡಿ ವಿಧೇಯಕ ಮತ್ತು ಕರ್ನಾಟಕ ಸ್ಟ್ಯಾಂಪ್ ವಿಧೇಯಕ ನನ್ನ ಕಚೇರಿಗೆ ಬಂದಿದೆ. ಇಲ್ಲಿಯವರೆಗೆ 2 ಸಾವಿರಕ್ಕೂ ಹೆಚ್ಚು ಪ್ರಶ್ನೆಗಳು ಬಂದಿವೆ. ಕೊವಿಡ್ ನಿಯಮದಂತೆ ಜಂಟಿ ಅಧಿವೇಶನ ನಡೆಯಲಿದೆ ಎಂದು ವಿಧಾನಸೌಧದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

15ನೇ ಅಸೆಂಬ್ಲಿ ಚಾಲ್ತಿಯಲ್ಲಿದ್ದು, 12ನೇ ಅಧಿವೇಶನ ಇದಾಗಿದೆ. ಸೋಮವಾರದಿಂದ 10 ದಿನಗಳ ಕಾಲ (ಫೆಬ್ರವರಿ 25ವರೆಗೂ) ನಡೆಯಲಿರುವ ಜಂಟಿ ಅಧಿವೇಶನದ ಅಂಗವಾಗಿ ವಿಧಾನಸೌಧದಲ್ಲಿ ಸಿದ್ಧತಾ ಕಾರ್ಯ ನಡೆದಿದೆ. ವಿಧಾನಸೌಧದ ಮೊಗಸಾಲೆಯನ್ನು ಸಿಬ್ಬಂದಿ ಸ್ವಚ್ಛಗೊಳಿಸುತ್ತಿದ್ದಾರೆ. ಕೊವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಆದ್ಯತೆ ನೀಡಲಾಗಿದೆ.

ಅಧಿವೇಶನದಲ್ಲಿ ಎರಡು ವಿಧೇಯಕಗಳು ಮಂಡನೆಯಾಗಲಿವೆ. ಜೊತೆಗೆ ಇನ್ನೂ ಕೆಲ ವಿಧೇಯಕಗಳ ಮಂಡನೆಗೆ ಸರ್ಕಾರದ ವತಿಯಿಂದ ಸಿದ್ಧತೆ ನಡೆದಿದೆ. ಸುಮಾರು 2,000 ಕ್ಕೂ ಹೆಚ್ಚು ಪ್ರಶ್ನೆಗಳು ಸರ್ಕಾರದಿಂದ ಉತ್ತರ ಬಯಸಿ ಬಂದಿವೆ. ಅಧಿವೇಶನ ವೀಕ್ಷಿಸಲು ಈ ಬಾರಿ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಲಾಗಿದೆ.

12ನೇ ಅಧಿವೇಶನ ಮುಗಿದ ಬಳಿಕ ಬಜೆಟ್​ ಅಧಿವೇಶನ ಮಾರ್ಚ್ ಮೊದಲ ವಾರದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್​ ಅನ್ನು ಮಾರ್ಚ್​ ಮೊದಲ ವಾರದಲ್ಲಿ ಮಂಡಿಸಲಿದ್ದಾರೆ. 2023 ಸಾರ್ವತ್ರಿಕ ಚುನಾವಣೆಗೂ ಮುನ್ನ ಆಡಳಿತಾರೂಢ ಬಿಜೆಪಿ ಸರಕಾರದ ಕೊನೆಯ ಬಜೆಟ್​ ಇದಾಗಲಿದೆ. Also Read: ಸಿಡಿ ಪ್ರಕರಣ ಕೈಜಾರುವ ಆತಂಕ -ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಾಧಿತ ಯುವತಿ, ಶಾಸಕ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ Also Read: Hijab row: ಬೆಂಗಳೂರು ನಗರಕ್ಕೂ ಲಗ್ಗೆಯಿಟ್ಟ ಹಿಜಾಬ್​ ಫೈಟ್? ವಿದ್ಯಾಸಾಗರ್ ಶಾಲೆಯಲ್ಲಿ ಸಂಘರ್ಷ, ಶಿಕ್ಷಕಿ ಕೆಲಸದಿಂದ ವಜಾ

Published On - 1:28 pm, Sat, 12 February 22

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ