AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL cards: 21 ಸಾವಿರ ಸರ್ಕಾರಿ ನೌಕರರ ಬಳಿ ಬಿಪಿಎಲ್ ಕಾರ್ಡ್​​; 11 ಕೋಟಿ ದಂಡ ಸಂಗ್ರಹ

ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು 4.6 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಂದ 13.5 ಕೋಟಿ ರೂಪಾಯಿ ದಂಡವನ್ನು ಸಂಗ್ರಹಿಸಿದೆ.

BPL cards: 21 ಸಾವಿರ ಸರ್ಕಾರಿ ನೌಕರರ ಬಳಿ ಬಿಪಿಎಲ್ ಕಾರ್ಡ್​​; 11 ಕೋಟಿ ದಂಡ ಸಂಗ್ರಹ
ಸಾಂದರ್ಭಿಕ ಚಿತ್ರ
Ganapathi Sharma
|

Updated on: May 31, 2023 | 6:27 PM

Share

ಬೆಂಗಳೂರು: ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು (Food and Civil Supplies and Consumer Affairs Department) 4.6 ಲಕ್ಷ ನಕಲಿ ಬಿಪಿಎಲ್ ಕಾರ್ಡ್ (BPL cards) ಹೊಂದಿರುವವರಿಂದ 13.5 ಕೋಟಿ ರೂಪಾಯಿ ದಂಡವನ್ನು ಸಂಗ್ರಹಿಸಿದೆ. ವಿಪರ್ಯಾಸವೆಂದರೆ 21,232 ಸರ್ಕಾರಿ ನೌಕರರೇ (Karnataka Government Employees) ಬಿಪಿಎಲ್ ಕಾರ್ಡ್ ಪಡೆದಿದ್ದರು ಎಂಬುದು ಬೆಳಕಿಗೆ ಬಂದಿದ್ದು, ಅವರಿಂದ 11.2 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ. ನಕಲಿ ಬಿಪಿಎಲ್​ ಕಾರ್ಡ್​​​ ಹೊಂದಿರುವವರ ವಿರುದ್ಧ 2021ರ ಫೆಬ್ರವರಿ ತಿಂಗಳಿನಿಂದಲೇ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಈಗಲೂ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಆಧಾರ್ ಸಂಖ್ಯೆಗಳನ್ನು ಬಳಸಿಕೊಂಡು ವಿವಿಧ ಇಲಾಖೆಗಳಿಂದ ಅಂತಹ ಅನರ್ಹ ಫಲಾನುಭವಿಗಳ ಡೇಟಾವನ್ನು ಸಂಗ್ರಹಿಸಲಾಗುತ್ತಿದೆ ಎಂದು ಹೆಚ್ಚುವರಿ ನಿರ್ದೇಶಕ (ವಿಜಿಲೆನ್ಸ್ ಮತ್ತು ಸಾರ್ವಜನಿಕ ವಿತರಣೆ) ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಕಾರ್ಯಾಚರಣೆಗೆ ಸಾರಿಗೆ ಇಲಾಖೆಯಿಂದಲೂ ಸಹಾಯವನ್ನು ಕೋರಿದ್ದೇವೆ. 12,583 ಬಿಪಿಎಲ್ ಫಲಾನುಭವಿಗಳು ಐಷಾರಾಮಿ 4 ಚಕ್ರ ವಾಹನಗಳನ್ನು ಹೊಂದಿರುವುದು ತಿಳಿದುಬಂದಿದೆ. ಮೂರು ಹೆಕ್ಟೇರ್‌ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವ 2.9 ಲಕ್ಷ ರೈತರು ಸಹ ಬಿಪಿಎಲ್ ಕಾರ್ಡ್‌ಗಳನ್ನು ಪಡೆದಿರುವುದನ್ನು ನಾವು ಕಂಡುಕೊಂಡಿದ್ದೇವೆ. ನಮ್ಮ ಅಧಿಕಾರಿಗಳು 2,679 ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಿದ್ದಾರೆ. ವಾರ್ಷಿಕ 1.2 ಲಕ್ಷ ರೂ.ಗಿಂತ ಹೆಚ್ಚು ಆದಾಯ ಹೊಂದಿರುವ 50,000 ಜನರನ್ನು ಆದಾಯ ತೆರಿಗೆ ಇಲಾಖೆಯ ದತ್ತಾಂಶಗಳಿಂದ ನಾವು ಪತ್ತೆಹಚ್ಚಿದ್ದೇವೆ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ನೌಕರರನ್ನು ಶಿಕ್ಷಿಸಲು ಕೇವಲ ದಂಡ ವಿಧಿಸುವುದಷ್ಟೇ ಸಾಕೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಮೊದಲ ನಿದರ್ಶನವಾಗಿರುವುದರಿಂದ ಹಾಗೆ ಮಾಡಲಾಗಿದೆ. ಭಾರೀ ದಂಡ ವಿಧಿಸಿದ ನಂತರವಷ್ಟೇ ಅವರನ್ನು ಕ್ಷಮಿಸಲಾಗಿದೆ ಎಂದು ಹೇಳಿದ್ದಾರೆ. ಅಂತಹ 21,232 ನೌಕರರ ಪೈಕಿ 17,521 ಮಂದಿ ಈಗಾಗಲೇ ತಮ್ಮ ಪಡಿತರ ಚೀಟಿಯನ್ನು ಎಪಿಎಲ್ ವರ್ಗಕ್ಕೆ ಪರಿವರ್ತಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಪಿಎಲ್ ಕಾರ್ಡ್​ಗೆ ಫುಲ್​ ಡಿಮ್ಯಾಂಡ್: ಕಾಂಗ್ರೆಸ್​ನ ಗ್ಯಾರಂಟಿ ಯೋಜನೆಗಳ ಲಾಭ​ ಪಡೆಯಲು ಮುಂದಾದ ಜನ

ದಂಡವನ್ನು ವಿಧಿಸುವಾಗ, ನಾವು ಅವರ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿದ್ದೇವೆ. ಸರ್ಕಾರಿ ನೌಕರರು, ಸಿಬ್ಬಂದಿಗೆ ಭಾರೀ ಮೊತ್ತದ ದಂಡ ವಿಧಿಸಲಾಗುತ್ತದೆ ಎಂದು ಅವರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ