AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PU Practical Exams: ಏಪ್ರಿಲ್ 28ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ

Karnataka 2nd PU Exams: ವಾರಾಂತ್ಯಗಳಲ್ಲಿ ಕರ್ಫ್ಯೂ ಇರುವ ಕಾರಣ ಶನಿವಾರ ಮತ್ತು ಭಾನುವಾರ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಂತಿಲ್ಲ. ಆರೋಗ್ಯ ಇಲಾಖೆ ನೀಡಿರುವ ಕೊರೊನಾ ತಡೆ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಪಿಯು ಬೋರ್ಡ್ ಬಿಡುಗಡೆ ಮಾಡಿರುವ ಮಾರ್ಗಸೂಚಿ ತಿಳಿಸಿದೆ.

PU Practical Exams: ಏಪ್ರಿಲ್ 28ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: Apr 23, 2021 | 9:05 PM

Share

ಬೆಂಗಳೂರು: ಏಪ್ರಿಲ್ 28ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಕಾಲೇಜುಗಳ ಹಂತದಲ್ಲೇ ನಡೆಸಲು ಪಿಯು ಬೋರ್ಡ್ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ ರಿಪೋರ್ಟ್ ಕಡ್ಡಾಯವಲ್ಲ, ದೇಹದ ಉಷ್ಣಾಂಶ ಪರಿಶೀಲಿಸಿ ಒಳಗೆ ಪ್ರವೇಶ ನೀಡಬೇಕು ಎಂದು ಮಾರ್ಗಸೂಚಿ ತಿಳಿಸಿದೆ. ಏಪ್ರಿಲ್ 28ರಿಂದ ಮೇ 18ರವರೆಗೆ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬಳಿಕ ಆಯಾ ಕಾಲೇಜುಗಳು ಆನ್​ಲೈನ್​ನಲ್ಲಿ ಅಂಕ ನಮೂದಿಸಬೇಕು. ಮಾಹಿತಿ ಕೊರತೆಯಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾದರೆ ಆಯಾ ಕಾಲೇಜಿನ ಪ್ರಾಂಶುಪಾಲರೇ ನೇರ ಹೊಣೆಯಾಗಲಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ವಾರಾಂತ್ಯಗಳಲ್ಲಿ ಕರ್ಫ್ಯೂ ಇರುವ ಕಾರಣ ಶನಿವಾರ ಮತ್ತು ಭಾನುವಾರ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಂತಿಲ್ಲ. ಆರೋಗ್ಯ ಇಲಾಖೆ ನೀಡಿರುವ ಕೊರೊನಾ ತಡೆ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಪಿಯು ಬೋರ್ಡ್ ಬಿಡುಗಡೆ ಮಾಡಿರುವ ಮಾರ್ಗಸೂಚಿ ತಿಳಿಸಿದೆ.

ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಸ್ಥಗಿತಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಸುತ್ತೋಲೆ ಹೊರಡಿಸಿದೆ. ಮೇ 4ರವರೆಗೆ ಪಿಯುಸಿ ಭೌತಿಕ ತರಗತಿಗಳು ಸ್ಥಗಿತಗೊಳ್ಳಲಿದ್ದು, ಪ್ರಥಮ, ದ್ವಿತೀಯ ಪಿಯು ತರಗತಿಗಳಿಗೆ ಆನ್‌ಲೈನ್‌ ಕ್ಲಾಸ್‌ ಮಾತ್ರ ನಡೆಯಲಿದೆ. ದ್ವಿತೀಯ ಪಿಯು ಪೂರ್ವ ಸಿದ್ಧತೆ ಪರೀಕ್ಷೆಗಳೂ ಸ್ಥಗಿತಗೊಳ್ಳಲಿದ್ದು, ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಪ್ರಶ್ನೆ ಪತ್ರಿಕೆಗಳಾಗಿ ವಿದ್ಯಾರ್ಥಿಗಳಿಗೆ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕಾಲೇಜುಗಳಿಗೆ ನಿರ್ದೇಶನ ನೀಡಿದೆ.

ಮೇ 4ರವರೆಗೆ ಪಿಯುಸಿ ತರಗತಿಗಳು ಬಂದ್ ಆಗುವ ಕಾರಣ ವರ್ಕ್ ಫ್ರಂ ಹೋಂ ನೀಡಲು ಪಿಯು ಉಪನ್ಯಾಸಕರು ಮನವಿ ಸಲ್ಲಿಸಿದ್ದಾರೆ. ಮನೆಯಿಂದಲೆ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡುವಂತೆ  ಉಪನ್ಯಾಸಕರ ಸಂಘದಿಂದ ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಮನವಿ ಸಲ್ಲಿಸಲಾಗಿದೆ.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ 26,962 ಮಂದಿಗೆ ಕೊರೊನಾ ಸೋಂಕು, 190 ಸಾವು

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ