AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಮತ್ತು 4ನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಕ್ಕಿಲ್ಲ ಸ್ಕಾಲರ್ಶಿಪ್; ಭಾರಿ ಪ್ರತಿಭಟನೆ

ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಬರಿದಾಗಿದೆಯಾ? ಇಂಥದೊಂದು ಅನುಮಾನ ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರತಿಭಟನೆಯಿಂದಾಗಿ ಮೂಡಿಬಂದಿದೆ. ಸ್ಕಾಲರ್ಶಿಪ್ ಕೊಡಿ ಎಂದು ಎಂಬಿಬಿಎಸ್ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. 2692 ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆ ಭರ್ತಿ ಮಾಡುವಂತೆಯೂ ಆಗ್ರಹಿಸಲಾಗಿದೆ.

3 ಮತ್ತು 4ನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಕ್ಕಿಲ್ಲ ಸ್ಕಾಲರ್ಶಿಪ್; ಭಾರಿ ಪ್ರತಿಭಟನೆ
ಎಂಬಿಬಿಎಸ್ ವಿದ್ಯಾರ್ಥಿಗಳಿಂದ ಪ್ರತಿಭಟನೆ
Vinay Kashappanavar
| Edited By: |

Updated on: Aug 09, 2024 | 8:06 AM

Share

ಬೆಂಗಳೂರು, ಆಗಸ್ಟ್ 9: ಗ್ಯಾರಂಟಿ ಭಾಗ್ಯಗಳ ಬೆನ್ನಲ್ಲೇ ಸರ್ಕಾರದ ಬೊಕ್ಕಸ ಖಾಲಿ ಆಗಿದೆಯಾ ಎಂಬ ಚರ್ಚೆ ಎಲ್ಲ ಕಡೆಯೂ ನಡೆಯುತ್ತಿದೆ. ಇದಕ್ಕೆ ಪುಷ್ಠಿ ಕೊಡುವಂತೆ ಅನುದಾನದ ಕಡಿತಗಳು ವರದಿಯಾಗುತ್ತಿವೆ. ಕೆಲವು ದಿನಗಳ ಹಿಂದಷ್ಟೇ ಯುವಿಸಿಇ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಇದೀಗ ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಕೊಡಿ ಎಂದು ಬೀದಿಗಿಳಿದಿದ್ದಾರೆ.

ವರ್ಷದಿಂದ ಬಿಡುಗಡೆಯಾಗಿಲ್ಲ ಸ್ಕಾಲರ್​ಶಿಪ್

ರಾಜ್ಯದೆಲ್ಲೆಡೆ ಮೂರು ಮತ್ತು ನಾಲ್ಕನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಕ್ಕಿಲ್ಲ. ತಾಂತ್ರಿಕ ದೋಷದ ನೆಪಹೇಳಿ ಸರ್ಕಾರ ಕಳೆದೊಂದು ವರ್ಷದಿಂದ ನಯಾಪೈಸೆ ಬಿಡುಗಡೆ ಮಾಡಿಲ್ಲ. ಬೆಂಗಳೂರಿನ ಬಿಎಂಸುಆರ್​ಐ, ಅಟಲ್ ಬಿಹಾರಿ ವಾಜಪೇಯಿ ಕಾಲೇಜು, ಡಾ.ಬಿ.ಆರ್.ಅಂಬೇಡ್ಕರ್ ವೈದ್ಯಕೀಯ ಕಾಲೇಜು ಸೇರಿ ಹಲವು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಯಾಗಿಲ್ಲ.

ವಿದ್ಯಾರ್ಥಿ ವೇತನ ಬಿಡುಗಡೆ ಮಾಡದ ಸರ್ಕಾರ ಅತ್ತ ಖಾಲಿ ಹುದ್ದೆಗಳ ನೇಮಕಾತಿ ಕೂಡ ನಡೆಸುತ್ತಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಿನೇ ದಿನೇ ಕಳಪೆ ಆಹಾರಗಳ ಸೇವನೆ ಜನರ ಜೀವ ಹಿಂಡುತ್ತಿದೆ. ಇಂತಹ ಹೊತ್ತಿನಲ್ಲಿ ಪ್ರಮುಖ ಪಾತ್ರ ವಹಿಸುವ ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳು ಕೂಡ ಭರ್ತಿ ಆಗಿಲ್ಲ. ಸುಮಾರು 2692 ಹುದ್ದೆಗಳು ಖಾಲಿ ಇವೆ. ಈ ಹಿನ್ನೆಲೆಯಲ್ಲಿ ಹುದ್ದೆ ಭರ್ತಿ ಮಾಡುವಂತೆ ಒತ್ತಾಯಿಸಿ ಉದ್ಯೋಗಾಂಕ್ಷಿಗಳು ಫ್ರೀಡಂ ಪಾರ್ಕ್​​ನಲ್ಲಿ ಗುರುವಾರ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ಗಳಿಗೆ ಡಿಜಿಟಲ್ ಟಚ್; ಹೋಟೆಲ್, ರೆಸ್ಟೋರೆಂಟ್ ರೀತಿ ಆರ್ಡರ್ ಮಾಡುವ ವ್ಯವಸ್ಥೆ

ಅನುದಾನ ಬಿಡುಗಡೆ ಮಾಡಲು ಸರ್ಕಾರದ ಬಳಿ ಹಣವೇ ಇಲ್ಲ. ಹೀಗಾಗಿ ಪೋರ್ಟಲ್ ಓಪನ್ ಮಾಡದೇ ತಾಂತ್ರಿಕ ದೋಷ ಎಂದು ನಾಟಕ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ