AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖನಿಜ ಬ್ಲಾಕ್​ಗಳ ಹರಾಜು, ನಿರ್ವಹಣೆಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಪ್ರಶಸ್ತಿ ಸ್ವೀಕರಿಸಿದ ಸಚಿವ ಎಸ್​ಎಸ್​ ಮಲ್ಲಿಕಾರ್ಜುನ

ಎರಡನೇ ರಾಜ್ಯ ಗಣಿಗಾರಿಕೆ ಮಂತ್ರಿಗಳ ಸಮ್ಮೇಳನದ ಸಂದರ್ಭದಲ್ಲಿ ಭೋಪಾಲ್ ನಲ್ಲಿ ಗಣಿ ಮತ್ತು ಖನಿಜ ಸಚಿವಾಲಯ ಆಯೋಜಿಸಿದ್ದ "ಮೈನಿಂಗ್ ಆ್ಯಂಡ್ ಬಿಯಾಂಡ್"ನಲ್ಲಿ ಖನಿಜ ಬ್ಲಾಕ್​ಗಳ ಹರಾಜು, ನಿರ್ವಹಣೆಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ ಲಭಿಸಿದೆ. ಮಧ್ಯಪ್ರದೇಶದ ಭೂಪಾಲ್​ನಲ್ಲಿ ಆಯೋಜಿಸಿದ ಗಣಿ ಮತ್ತು ಭೂವಿಜ್ಞಾನ‌ ಇಲಾಖೆ ಸಚಿವರ ಸಮ್ಮೇಳನದಲ್ಲಿ ಘೋಷಣೆ ಮಾಡಲಾಗಿದೆ.

ಖನಿಜ ಬ್ಲಾಕ್​ಗಳ ಹರಾಜು, ನಿರ್ವಹಣೆಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಪ್ರಶಸ್ತಿ ಸ್ವೀಕರಿಸಿದ ಸಚಿವ ಎಸ್​ಎಸ್​ ಮಲ್ಲಿಕಾರ್ಜುನ
ಪ್ರಶಸ್ತಿ ಸ್ವೀಕರಿಸಿದ ಗಣಿ & ಭೂವಿಜ್ಞಾನ ಸಚಿವ S.S.ಮಲ್ಲಿಕಾರ್ಜುನ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jan 23, 2024 | 10:01 PM

Share

ದಾವಣಗೆರೆ, ಜನವರಿ 23: ಖನಿಜ ಬ್ಲಾಕ್​ಗಳ ಹರಾಜು, ನಿರ್ವಹಣೆಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ ಲಭಿಸಿದೆ. ಮಧ್ಯಪ್ರದೇಶದ ಭೂಪಾಲ್​ನಲ್ಲಿ ಆಯೋಜಿಸಿದ ಗಣಿ ಮತ್ತು ಭೂವಿಜ್ಞಾನ‌ ಇಲಾಖೆ ಸಚಿವರ ಸಮ್ಮೇಳನದಲ್ಲಿ ಘೋಷಣೆ ಮಾಡಲಾಗಿದೆ. ಕೇಂದ್ರ ಖನಿಜ ಇಲಾಖೆ ಸಚಿವ ಪ್ರಲ್ಹಾದ್ ಜೋಶಿ​ ಹಾಗೂ ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರಿಂದ ರಾಜ್ಯ ಗಣಿ ಮತ್ತು ಭೂ ವಿಜ್ಞಾನ‌ ಇಲಾಖೆ ಸಚಿವ ಎಸ್​ಎಸ್ ಮಲ್ಲಿಕಾರ್ಜುನ್ (S. S. Mallikarjun) ಅವರು ಪ್ರಶಸ್ತಿ ಸ್ವೀಕಾರ ಮಾಡಿದ್ದಾರೆ. ಮರಳು ನೀತಿ ಹಾಗೂ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ನಿರ್ವಹಿಸಿದ ನೀತಿ ದೇಶಕ್ಕೆ ಮಾದರಿ ಆಗಿದೆ.

ಪ್ರಲ್ಹಾದ್ ಜೋಶಿ​ ಟ್ವೀಟ್ ಮಾಡಿದ್ದು, ಎರಡನೇ ರಾಜ್ಯ ಗಣಿಗಾರಿಕೆ ಮಂತ್ರಿಗಳ ಸಮ್ಮೇಳನದ ಸಂದರ್ಭದಲ್ಲಿ ಭೋಪಾಲ್ ನಲ್ಲಿ ಗಣಿ ಮತ್ತು ಖನಿಜ ಸಚಿವಾಲಯ ಆಯೋಜಿಸಿದ್ದ “ಮೈನಿಂಗ್ ಆ್ಯಂಡ್ ಬಿಯಾಂಡ್” ವಸ್ತುಪ್ರದರ್ಶನವನ್ನು ಭೇಟಿ ನೀಡಿದ ಕ್ಷಣ. ಇದೇ ಸಂದರ್ಭದಲ್ಲಿ ಭೋಪಾಲ್​ನ ಭೋಜೇಶ್ವರ ಮಹಾದೇವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮಹದಾವಕಾಶ ನನ್ನದಾಯಿತು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಖನಿಜ ಬ್ಲಾಕ್​​ಗಳ ಹರಾಜು ಪ್ರಕ್ರಿಯೆಯ ಮೊದಲ ಹಂತಕ್ಕೆ ಪ್ರಲ್ಹಾದ್ ಜೋಶಿ ಚಾಲನೆ

ಸಂಯೋಜಿತ ಪರವಾನಗಿಯಾಗಿ ಹರಾಜಿಗಾಗಿ 35 ಕಡಲಾಚೆಯ ಖನಿಜ ಬ್ಲಾಕ್‌ಗಳನ್ನು ರಾಜ್ಯಗಳಿಗೆ ಹಸ್ತಾಂತರಿಸಲಾಯಿತು. ಎನ್‌ಐಟಿಗಳನ್ನು ವಿತರಿಸಲು ಮತ್ತು ಖನಿಜ ಹರಾಜುಗಳನ್ನು ತ್ವರಿತಗೊಳಿಸಲು ರಾಜ್ಯಗಳನ್ನು ಒತ್ತಾಯಿಸಲಾಗಿದೆ. ಇಂದಿನ ಕಾರ್ಯಕ್ರಮದಲ್ಲಿ, ಗಣಿಗಾರಿಕೆ ವಲಯದಲ್ಲಿ ಹೆಚ್ಚಿನ ದಕ್ಷತೆಯನ್ನು ತರಲು ಗಣಿಗಳ ಸ್ಟಾರ್ ರೇಟಿಂಗ್‌ಗಾಗಿ ಸರಾಸರಿ ಮಾರಾಟ ಬೆಲೆ ಮಾಡ್ಯೂಲ್ ಮತ್ತು ಹೊಸ ಟೆಂಪ್ಲೇಟ್ ಅನ್ನು ಪ್ರಾರಂಭಿಸಲಾಯಿತು.

ಜಿಎಸ್‌ಐನ 50 ಸಂಪನ್ಮೂಲ ವರದಿಗಳು ಮತ್ತು 37 ಜಿಯೋಲಾಜಿಕಲ್ ಮೆಮೊರಾಂಡಮ್‌ಗಳನ್ನು ರಾಜ್ಯಗಳಿಗೆ ಹಸ್ತಾಂತರಿಸಲಾಯಿತು. GSI ವರದಿಗಳು 26 ನಿರ್ಣಾಯಕ ಖನಿಜ ಬ್ಲಾಕ್‌ಗಳನ್ನು ಒಳಗೊಂಡಿವೆ ಎಂಬುದು ಸಂತಸದ ವಿಷಯ. ಇದು ನಿರ್ಣಾಯಕ ಖನಿಜಗಳ ಪೂರೈಕೆಯನ್ನು ಭದ್ರಪಡಿಸುವತ್ತ ನಮ್ಮ ಪ್ರಯತ್ನಗಳನ್ನು ಮತ್ತಷ್ಟು ಬಲ ಪಡಿಸುತ್ತದೆ.

ಅಷ್ಟೇ ಅಲ್ಲ, 4 ಹೊಸ ನೋಟಿಫೈಡ್ ಖಾಸಗಿ ಕಂಪನಿಗಳಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದೆನು. ಪ್ರಮುಖ ಖನಿಜಗಳ ಪರಿಶೋಧನೆಗಾಗಿ ಪರಿಶೋಧನಾ ಏಜೆನ್ಸಿಗಳು, ಮತ್ತು ಹೆಚ್ಚಿನ ಸಂಖ್ಯೆಯ ಹರಾಜುಗಳನ್ನು ನಡೆಸುವಲ್ಲಿ ಅತ್ಯುತ್ತಮವಾದ 3 ರಾಜ್ಯಗಳನ್ನು ಗೌರವಿಸಲಾಯಿತು. ಮಧ್ಯಪ್ರದೇಶವು 29 ಬ್ಲಾಕ್‌ಗಳನ್ನು ಹರಾಜು ಹಾಕಿದೆ. ಛತ್ತೀಸ್‌ಗಢ 20 ಬ್ಲಾಕ್‌ಗಳನ್ನು ಹರಾಜು ಮಾಡಿದೆ. ಕರ್ನಾಟಕ ಮತ್ತು ಆಂಧ್ರಪ್ರದೇಶ ತಲಾ 11 ಬ್ಲಾಕ್‌ಗಳನ್ನು ಹರಾಜು ಹಾಕಿವೆ ಎಂದು ಬರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ