Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮುಂಗಾರು ಪೂರ್ವ ಮಳೆಗೆ ಈ ವರ್ಷ ರಾಜ್ಯದಲ್ಲಿ 52 ಮಂದಿ ಸಾವು; ಕಳೆದ ವರ್ಷ ಮೃತಪಟ್ಟವರೆಷ್ಟು?

ಕಳೆದ ವಾರಾಂತ್ಯದಲ್ಲಿ ಬೆಂಗಳೂರು ಮತ್ತು ರಾಜ್ಯದ ಇತರ ಕಡೆಗಳಲ್ಲಿ ಸುರಿದಿರುವ ಮುಂಗಾರು ಪೂರ್ವ ಮಳೆ, ಈ ವರ್ಷದ ಮುಂಗಾರು ಕೂಡ 2022 ಕ್ಕಿಂತ ಕಡಿಮೆ ಇರಲಾರದು ಎಂಬ ಸುಳಿವು ನೀಡಿದೆ.

Karnataka Rains: ಮುಂಗಾರು ಪೂರ್ವ ಮಳೆಗೆ ಈ ವರ್ಷ ರಾಜ್ಯದಲ್ಲಿ 52 ಮಂದಿ ಸಾವು; ಕಳೆದ ವರ್ಷ ಮೃತಪಟ್ಟವರೆಷ್ಟು?
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 23, 2023 | 8:53 PM

ಬೆಂಗಳೂರು: ಕಳೆದ ವಾರಾಂತ್ಯದಲ್ಲಿ ಬೆಂಗಳೂರು ಮತ್ತು ರಾಜ್ಯದ ಇತರ ಕಡೆಗಳಲ್ಲಿ ಸುರಿದಿರುವ ಮುಂಗಾರು ಪೂರ್ವ ಮಳೆ (Karnataka Rains), ಈ ವರ್ಷದ ಮುಂಗಾರು ಕೂಡ 2022 ಕ್ಕಿಂತ ಕಡಿಮೆ ಇರಲಾರದು ಎಂಬ ಸುಳಿವು ನೀಡಿದೆ. ಕಳೆದ ಕೆಲವು ದಿನಗಳಲ್ಲಿ ಸುರಿದಿರುವ ಅಕಾಲಿಕ ಭಾರೀ ಮಳೆಯಿಂದ (Heavy Rains) ಕೃಷಿ ಮತ್ತು ವ್ಯಾಪಕ ಹಾನಿ ಸಂಭವಿಸಿದೆ. ಆಸ್ತಿ ಮತ್ತು ದೊಡ್ಡ ಪ್ರಮಾಣದ ಜೀವ ಹಾನಿಯಾಗಿದೆ. ಸಾಮಾನ್ಯವಾಗಿ ರಾಜ್ಯದಲ್ಲಿ ಜೂನ್ ಎರಡನೇ ವಾರದಲ್ಲಿ ಮುಂಗಾರು ಮಳೆ (Monsoon Rain) ಆರಂಭವಾಗುತ್ತದೆ.

ಜೂನ್ 2 ರವರೆಗೆ ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸಾಮಾನ್ಯವಾಗಿರಲಿದೆ. ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಭಾಗಗಳಲ್ಲಿ ಸಾಧಾರಣವಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ರೈತರು, ವಿಶೇಷವಾಗಿ ತೋಟಗಾರಿಕಾ ತಜ್ಞರು, ಜೂನ್ 9 ರ ಮುಂಗಾರು ಪ್ರಾರಂಭವಾಗಬಹುದು ಎಂಬ ಆತಂಕದಲ್ಲಿದ್ದಾರೆ.

ರಾಜ್ಯದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಈಗಾಗಲೇ 52 ಮಂದಿ ಸಾವನ್ನಪ್ಪಿದ್ದು, ಕಳೆದ ವರ್ಷ 71 ಮಂದಿ ಸಾವನ್ನಪ್ಪಿದ್ದರು. ಸಿಡಿಲು ಬಡಿದು ಇದುವರೆಗೆ 34 ಮಂದಿ ಮೃತಪಟ್ಟಿದ್ದಾರೆ. 2022 ರ ಇಡೀ ಮುಂಗಾರು ಅವಧಿಯಲ್ಲಿ, 56 ಮಂದಿ ಸಿಡಿಲು ಬಡಿದು ಸಾವನ್ನಪ್ಪಿದ್ದರು. ಈ ವರ್ಷ ಮರಗಳು ಬಿದ್ದು ಈವರೆಗೆ ಮೂವರು ಮೃತಪಟ್ಟಿದ್ದಾರೆ. ಕಳೆದ ವರ್ಷ ಮರ ಬಿದ್ದು ಮೃತಪಟ್ಟವರ ಸಂಖ್ಯೆ ಆರು ಆಗಿತ್ತು. ಆದಾಗ್ಯೂ, ಕಳೆದ ವರ್ಷದ ಅಂಕಿಅಂಶಗಳಿಗಿಂತ ಈ ವರ್ಷ ಮುಂಗಾರು ಪೂರ್ವ ಅವಧಿಯಲ್ಲಿ ಮನೆ ಕುಸಿದು (7) ಮತ್ತು ಮುಳುಗುವಿಕೆಯಿಂದ (5) ಸಾವುಗಳು ಹೆಚ್ಚಾಗಿವೆ. ಹೆಚ್ಚುವರಿಯಾಗಿ, ಈ ವರ್ಷ ಮೂರು ಜನರು ವಿದ್ಯುದಾಘಾತಕ್ಕೆ ಒಳಗಾಗಿದ್ದಾರೆ. ಕಳೆದ ವರ್ಷ ವಿದ್ಯುದಾಘಾತಕ್ಕೆ ಒಳಗಾಗಿ ಯಾರೂ ಮೃತಪಟ್ಟಿರಲಿಲ್ಲ.

ಇದನ್ನೂ ಓದಿ: Mysuru News: ಮೈಸೂರಿನಲ್ಲಿ ಮಳೆ ಅವಾಂತರ, ಅಪಾರ ಹಾನಿ; ಚಿತ್ರಗಳು ಇಲ್ಲಿವೆ ನೋಡಿ

ಕಳೆದ ವರ್ಷ 171 ಸಾಕು ಪ್ರಾಣಿಗಳು ಮೃತಪಟ್ಟಿದ್ದರೆ ಈ ವರ್ಷ ಈವರೆಗೆ 155 ಪ್ರಾಣಿಗಳು ಸಾವಿಗೀಡಾಗಿವೆ. ಕಳೆದ ವರ್ಷ 669 ಸಣ್ಣ ಪ್ರಾಣಿಗಳು ಸಾವನ್ನಪ್ಪಿದ್ದರೆ, ಈ ವರ್ಷ ಈಗಾಗಲೇ 163 ಸಣ್ಣ ಪ್ರಾಣಿಗಳು ಮಳೆ ಸಂಬಂಧಿ ಅವಘಡಗಳಿಗೆ ಬಲಿಯಾಗಿವೆ. ಈ ವರ್ಷ ಇದುವರೆಗೆ 19 ಮನೆಗಳು ಸಂಪೂರ್ಣ ಕುಸಿದು ಬಿದ್ದಿದ್ದರೆ, ಕಳೆದ ವರ್ಷ 131 ಮನೆಗಳು ಕುಸಿದು ಬಿದ್ದಿದ್ದವು.

ಬೆಳೆ ಹಾನಿ ಹೆಚ್ಚು

ಮುಂಗಾರು ಪೂರ್ವ ಮಳೆಯಿಂದ ತೋಟಗಾರಿಕೆ ಬೆಳೆಗಳು ಹೆಚ್ಚು ಹಾನಿಗೀಡಾಗಿವೆ. ಮಳೆಯಿಂದಾಗಿ ಬೆಳೆದು ನಿಂತಿದ್ದ ಬೆಳೆಗಳು ಹಾಗೂ ಮಾವಿನ ತೋಟಗಳಿಗೆ ಭಾರಿ ಹಾನಿಯಾಗಿದೆ. 10,067 ಹೆಕ್ಟೇರ್‌ನಲ್ಲಿನ ತೋಟಗಾರಿಕೆ ಬೆಳೆಗಳು ನಾಶವಾಗಿದ್ದರೆ, ಕಳೆದ ವರ್ಷ ಸಂಪೂರ್ಣ ಮಳೆಗಾಲದಲ್ಲಿ 9,843 ಹೆಕ್ಟೇರ್‌ನಲ್ಲಿನ ಬೆಳೆ ಹಾನಿಯಾಗಿತ್ತು ಎಂದು ‘ನ್ಯೂಸ್9’ ವರದಿ ಮಾಡಿದೆ.

ಕೃಷಿಗೂ ಭಾರಿ ಹಾನಿಯಾಗಿದೆ. ಮುಂಗಾರು ಪೂರ್ವ ಧಾರಾಕಾರ ಮಳೆಗೆ 9,398 ಹೆಕ್ಟೇರ್‌ನಲ್ಲಿ ಬೆಳೆದು ನಿಂತ ಬೆಳೆ ನಾಶವಾಗಿದ್ದರೆ, ಕಳೆದ ವರ್ಷ ಇಡೀ ಮಳೆಗಾಲದಲ್ಲಿ 16,623 ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ