ಐಪಿಎಸ್ ಶ್ರೇಣಿಯ ಏಳ ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಐಪಿಎಸ್ ಶಾಂತನು ಸಿನ್ಹಾ, ಲಕ್ಷ್ಮಣ್ ನಿಂಬರಗಿ ಮತ್ತು ಚನ್ನಬಸವಣ್ಣ ಲಂಗೋಟಿ ಸೇರಿಂದಂತೆ ಏಳು ಮಂದಿ ಅಧಿಕಾರಿಗಳು ವರ್ಗಾವಣೆಗೊಂಡಿದ್ದಾರೆ.
ಐಪಿಎಸ್
ವಿವೇಕ ಬಿರಾದಾರ
Updated on:
Nov 15, 2024 | 1:27 PM
ಬೆಂಗಳೂರು, ನವೆಂಬರ್ 15: ಕರ್ನಾಟಕ ಸರ್ಕಾರ (Karnataka Government) ಆಡಳಿತ ವಿಭಾಗಕ್ಕೆ ಮೇಜರ್ ಸರ್ಜರಿ ಮಾಡಿದೆ. ಐಪಿಎಸ್ (IPS) ಏಳು ಮಂದಿ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು ಸಿಐದಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್ಪಿ ಹುದ್ದೆಗೆ ಜಿ.ಸಂಗೀತ ಅವರನ್ನು ವರ್ಗಾವಣೆ ಮಾಡಲಾಗಿದೆ.