ಐಪಿಎಸ್ ಶ್ರೇಣಿಯ ಏಳ ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಐಪಿಎಸ್ ಶಾಂತನು ಸಿನ್ಹಾ, ಲಕ್ಷ್ಮಣ್ ನಿಂಬರಗಿ ಮತ್ತು ಚನ್ನಬಸವಣ್ಣ ಲಂಗೋಟಿ ಸೇರಿಂದಂತೆ ಏಳು ಮಂದಿ ಅಧಿಕಾರಿಗಳು ವರ್ಗಾವಣೆಗೊಂಡಿದ್ದಾರೆ.
ಐಪಿಎಸ್
ವಿವೇಕ ಬಿರಾದಾರ
Updated on:
Nov 15, 2024 | 1:27 PM
ಬೆಂಗಳೂರು, ನವೆಂಬರ್ 15: ಕರ್ನಾಟಕ ಸರ್ಕಾರ (Karnataka Government) ಆಡಳಿತ ವಿಭಾಗಕ್ಕೆ ಮೇಜರ್ ಸರ್ಜರಿ ಮಾಡಿದೆ. ಐಪಿಎಸ್ (IPS) ಏಳು ಮಂದಿ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು ಸಿಐದಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್ಪಿ ಹುದ್ದೆಗೆ ಜಿ.ಸಂಗೀತ ಅವರನ್ನು ವರ್ಗಾವಣೆ ಮಾಡಲಾಗಿದೆ.
ಚನ್ನಬಸವಣ್ಣ ಲಂಗೋಟಿ, ನಿರ್ದೇಶಕ ಕರ್ನಾಟಕ ಪೊಲೀಸ್ ಅಕಾಡೆಮಿ (ಹೆಚ್ಚುವರಿ ಹೊಣೆ)
ಪೃಥ್ವಿಕ್ ಶಂಕರ್, ಎಸ್ ಪಿ, ಯಾದಗಿರಿ
ಶಿವಾಂಶು ರಾಜಪೂತ್, ಎಸ್ ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Vivek Biradar
ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.