AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಪಾದಕರಿಗೆ 9 ತಿಂಗಳಿನಿಂದ ಬಿಡುಗಡೆಯಾಗಿಲ್ಲ ಪ್ರೋತ್ಸಾಹ ಧನ: ಖುದ್ದು ಸಚಿವರೇ ನೀಡಿದ್ರು ಮಾಹಿತಿ

ಕರ್ನಾಟಕ ಸರ್ಕಾರವು ಹೈನುಗಾರರಿಗೆ ಒಂಬತ್ತು ತಿಂಗಳಿಂದ ಪ್ರೋತ್ಸಾಹಧನ ನೀಡಿಲ್ಲ. ಕ್ಷೀರಧಾರೆ ಯೋಜನೆಯಡಿ 5 ರೂಪಾಯಿ ಪ್ರತಿ ಲೀಟರ್ ಹಾಲಿಗೆ ನೀಡಬೇಕಾದ ಪ್ರೋತ್ಸಾಹಧನ 606.69 ಕೋಟಿ ರೂಪಾಯಿಗಳಷ್ಟು ಬಾಕಿ ಉಳಿದಿದೆ. ಇದಕ್ಕೆ ಹಣಕಾಸಿನ ಕೊರತೆ ಕಾರಣವೆಂದು ಪಶುಸಂಗೋಪನಾ ಸಚಿವರು ವಿಧಾನಸಭೆ ಕಲಾಪದಲ್ಲಿ ತಿಳಿಸಿದ್ದಾರೆ.

ಹಾಲು ಉತ್ಪಾದಕರಿಗೆ 9 ತಿಂಗಳಿನಿಂದ ಬಿಡುಗಡೆಯಾಗಿಲ್ಲ ಪ್ರೋತ್ಸಾಹ ಧನ: ಖುದ್ದು ಸಚಿವರೇ ನೀಡಿದ್ರು ಮಾಹಿತಿ
ಹಾಲು ಉತ್ಪಾದಕರಿಗೆ 9 ತಿಂಗಳಿನಿಂದ ಬಿಡುಗಡೆಯಾಗಿಲ್ಲ ಪ್ರೋತ್ಸಾಹ ಧನ (ಸಾಂದರ್ಭಿಕ ಚಿತ್ರ)
Ganapathi Sharma
|

Updated on:Dec 17, 2024 | 8:58 AM

Share

ಬೆಂಗಳೂರು, ಡಿಸೆಂಬರ್ 17: ಒಂಬತ್ತು ತಿಂಗಳುಗಳಿಂದ ಹೈನುಗಾರರಿಗೆ ಕರ್ನಾಟ ಸರ್ಕಾರ ಪ್ರೋತ್ಸಾಹಧನ ನೀಡಿಲ್ಲ. ಇದಕ್ಕೆ ‘ಹಣವಿಲ್ಲ’ ಎಂಬ ಕಾರಣ ನೀಡಲಾಗಿದೆ ಎಂದು ವರದಿಯಾಗಿದೆ. ಕ್ಷೀರಧಾರೆ ಯೋಜನೆಯಡಿ ರೈತರು ಪೂರೈಸುವ ಪ್ರತಿ ಲೀಟರ್ ಹಾಲಿಗೆ ಸರ್ಕಾರ 5 ರೂ. ಪ್ರೋತ್ಸಾಹಧನ ನೀಡಬೇಕಿದೆ.

ಈ ಬಗ್ಗೆ ಪ್ರಸ್ತಾವನೆ ಹಣಕಾಸು ಇಲಾಖೆ ಮುಂದೆ ಬಾಕಿಯಿರುವುದರಿಂದ ರೈತರಿಗೆ ಪ್ರೋತ್ಸಾಹಧನ ಪಾವತಿಯಾಗಿಲ್ಲ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಒಪ್ಪಿಕೊಂಡಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ರಾಜ್ಯದಲ್ಲಿ 16 ಹಾಲು ಒಕ್ಕೂಟಗಳಿವೆ. ಸರಾಸರಿಯಾಗಿ, ಅವರು ಪ್ರತಿದಿನ ಒಂದು ಕೋಟಿ ಲೀಟರ್ ಹಾಲನ್ನು ಸಂಗ್ರಹಿಸುತ್ತಾರೆ. ಹೈನುಗಾರಿಕೆಯಲ್ಲಿ ಕರ್ನಾಟಕವನ್ನು ಅಗ್ರ ರಾಜ್ಯವನ್ನಾಗಿ ಮಾಡುತ್ತಾರೆ. ಪ್ರತಿ ಲೀಟರ್‌ಗೆ 2 ರೂ.ನಂತೆ ಹೈನುಗಾರರಿಗೆ ಪ್ರೋತ್ಸಾಹಧನ ನೀಡುವ ಯೋಜನೆ 2008ರಲ್ಲಿ ಆರಂಭಿಸಲಾಗಿತ್ತು. 2013ರಲ್ಲಿ ಲೀಟರ್‌ಗೆ 4 ರೂ.ಗೆ ಏರಿಕೆಯಾಗಿದ್ದು, 2016ರಲ್ಲಿ 5 ರೂ.ಗೆ ಹೆಚ್ಚಿಸಲಾಗಿತ್ತು.

ಸಿದ್ದರಾಮಯ್ಯ ಭರವಸೆಯೂ ಈಡೇರಲಿಲ್ಲ

ಹಾಲಿನ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಹೆಚ್ಚಿಸಲು ಕಾಂಗ್ರೆಸ್‌ ಒಲವು ಹೊಂದಿದ್ದರೂ ಜಾರಿಗೆ ಬರಲಿಲ್ಲ. 2023ರ ವಿಧಾನಸಭೆ ಚುನಾವಣೆಗೂ ಮುನ್ನ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಾಲಿನ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್‌ಗೆ 6 ರೂ.ಗೆ ಹೆಚ್ಚಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದರು.

ಪ್ರೋತ್ಸಾಹ ಧನ ಬಾಕಿ ವಿವರ

2024ರ ಜೂನ್‌ನಿಂದ 2024ರ ಅಕ್ಟೋಬರ್‌ವರೆಗೆ ಪ್ರೋತ್ಸಾಹ ಧನ ಪಾವತಿ ಮಾಡಿಲ್ಲ. ರೈತರಿಗೆ ಪಾವತಿಸಬೇಕಾದ ಮೊತ್ತ 606.69 ಕೋಟಿ ರೂ. ಬಾಕಿ ಇದೆ ಎಂದು ವೆಂಕಟೇಶ್ ಅವರು ವಿಧಾನಸಭೆಗೆ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಸಮುದಾಯದ ಹೈನುಗಾರರಿಗೆ ಅಕ್ಟೋಬರ್‌ ತಿಂಗಳಿಗೆ 6.85 ಕೋಟಿ ರೂ. ಪಾವತಿಸಬೇಕಿದ್ದರೆ, ಎಸ್‌ಟಿ ರೈತರಿಗೆ 2024ರ ಅಕ್ಟೋಬರ್‌ ಮತ್ತು ನವೆಂಬರ್‌ ತಿಂಗಳಿಗೆ ಇನ್ನೂ 9 ಕೋಟಿ ರೂ. ಪಾವತಿಯಾಗಬೇಕಿದೆ. ಬಾಕಿ ಹಣವನ್ನು ಕಂತುಗಳಲ್ಲಿ ಪಾವತಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಸುದೀರ್ಘ 15 ಗಂಟೆ ವಿಧಾನಸಭೆ ಕಲಾಪ, ರಾತ್ರಿ 1 ಗಂಟೆವರೆಗೂ ನಡೆದ ಅಧಿವೇಶನ: ದಶಕದ ಬಳಿಕ ದಾಖಲೆ

ರೈತರಿಗೆ ಪ್ರೋತ್ಸಾಹಧನ ನೀಡದಿರುವುದರಿಂದ ಸದ್ಯ ಪ್ರತಿ ಲೀಟರ್ ಹಾಲಿಗೆ ಒಂದು ರೂಪಾಯಿ ಕಡಿಮೆ ನೀಡಲಾಗುತ್ತದೆ. ರಾಜ್ಯದಲ್ಲಿ ಸುಮಾರು 38 ಲಕ್ಷ ಹೈನುಗಾರರಿದ್ದು, ಅವರಲ್ಲಿ ಶೇ 90ಕ್ಕೂ ಹೆಚ್ಚು ಮಹಿಳೆಯರು ಇದ್ದಾರೆ. ರಾಜ್ಯ ಸರ್ಕಾರ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತದೆ, ಆದರೆ ಅವರಿಗೆ ಪ್ರೋತ್ಸಾಹಧನ ನೀಡುವಲ್ಲಿ ಮೌನವಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಟೀಕಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 am, Tue, 17 December 24

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ