AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಲಡ್ಡು ಪ್ರಸಾದ ಬಳಸದಿರಲು ನಿರ್ಧರಿಸಿದ ಕರ್ನಾಟಕದ ಅರ್ಚಕರು!

Tirupati Laddu Controversy: ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪದಿಂದ ತಿರಪುತಿಯ ಶ್ರೀವಾರಿ ಲಡ್ಡು ಪ್ರಸಾದ ತಯಾರಿಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ದೇಶ್ಯಾದ್ಯಂತ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಿರುಪತಿ ಲಡ್ಡು ಪ್ರಸಾದ ಬಳಸದೆ ಇರಲು ಕರ್ನಾಟಕದ ಅರ್ಚಕರು ನಿರ್ಧರಿಸಿದ್ದಾರೆ.

ತಿರುಪತಿ ಲಡ್ಡು ಪ್ರಸಾದ ಬಳಸದಿರಲು ನಿರ್ಧರಿಸಿದ ಕರ್ನಾಟಕದ ಅರ್ಚಕರು!
ಸಾಂದರ್ಭಿಕ ಚಿತ್ರ
Poornima Agali Nagaraj
| Edited By: |

Updated on:Sep 22, 2024 | 1:57 PM

Share

ಬೆಂಗಳೂರು, ಸೆಪ್ಟೆಂಬರ್​ 22: ತಿರುಪತಿ ಲಡ್ಡು ಪ್ರಸಾದ (Tirupati Laddu Prasad) ಬಳಸದಂತೆ ಕರ್ನಾಟಕ ಅರ್ಚಕರು ನಿರ್ಧರಿಸಿದ್ದಾರೆ. ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಇಲ್ಲ ಎಂಬ ಸ್ಪಷ್ಟತೆ ಸಿಗಬೇಕು. ಅಲ್ಲಿಯವರೆಗೂ ಲಾಡು ಪ್ರಸಾದ ಬಳಸದೆ ಇರಲು ಅಖಿಲ ಕರ್ನಾಟಕ ಅರ್ಚಕರ ಸಂಘ ತೀರ್ಮಾನಿಸಿದೆ.

ರಾಜ್ಯದ ಎ ಹಾಗೂ ಬಿ ದೇಗುಲಗಳಲ್ಲಿ ನಡೆಯುವ ಕಲ್ಯಾಣೋತ್ಸವಗಳಲ್ಲಿ, ಮದುವೆ, ಗೃಹಪ್ರವೇಶ ಮತ್ತು ಉಪನಯನ ಕಾರ್ಯಕ್ರಮಗಳಲ್ಲಿ ತಿರುಪತಿ ಲಡ್ಡು ಪ್ರಸಾದ ಬಳಕೆ ಮಾಡಲಾಗುತ್ತಿತ್ತು. ಆದರೆ, ಇದೀಗ ಲಾಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಲಡ್ಡು ಪ್ರಸಾದವನ್ನು ಸಂಪೂರ್ಣವಾಗಿ ಬಳಸದಂತೆ ಅಖಿಲ ಕರ್ನಾಟಕ ಅರ್ಚಕರ ಸಂಘ ನಿರ್ಧರಿಸಿದೆ.

ತುಪ್ಪ ತಪಾಸಣೆಗೆ ಗುಂಡೂರಾವ್​ ಆದೇಶ

ರಾಜ್ಯದಲ್ಲಿ ಉತ್ಪಾದನೆ ಮತ್ತು ಮಾರಾಟ ಆಗುತ್ತಿರುವ ತುಪ್ಪವನ್ನು ತಪಾಸಣೆ ಮಾಡುವಂತೆ ನಮ್ಮ ಆಹಾರ ಸುರಕ್ಷತಾ ಆಯುಕ್ತರಿಗೆ ಹೇಳಿದ್ದೇನೆ. ಈಗಾಗಲೇ ತುಪ್ಪದ ಮಾದರಿ ಸಂಗ್ರಹ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ತುಪ್ಪ ಆಮದು ಆಗುತ್ತದೆ. ಪ್ರಸಾದದ ಪರಿಶೀಲನೆ ನಾವು ಮಾಡುತ್ತಿಲ್ಲ. ಬೇರೆ ಪದಾರ್ಥಗಳಲ್ಲಿ ಕಲಬೆರಕೆ ಆಗುವ ಸಾಧ್ಯತೆ ಕಡಿಮೆ ಇದೆ. ಆದರೆ ಆಂಧ್ರ ಮುಖ್ಯಮಂತ್ರಿ ತುಪ್ಪದಲ್ಲಿ ಬೇರೆ ಬೇರೆ ಕೊಬ್ಬಿನಂಶ ಇತ್ತು ಅಂತ ಹೇಳಿರುವುದು ಆತಂಕಕಾರಿಯಾದ ವಿಚಾರ. ಒಬ್ಬ ಸಿಎಂ ಹೇಳಿದ ಮೇಲೆ ನಾವು ಅದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ: ಪ್ರಾಯಶ್ಚಿತ್ತ ದೀಕ್ಷೆ ಕೈಗೊಂಡ ಪವನ್ ಕಲ್ಯಾಣ್

ದೇವರ ಬಗ್ಗೆ ಶ್ರದ್ಧೆ ಇರುವವರಿಗೆ ಈ ವಿಚಾರ ಬಹಳ ಆಘಾತಕಾರಿಯಾಗಿದೆ. ಹೀಗಾಗಿ ಪರಿಶೀಲನೆ ಮಾಡಿ ಅಂತ ಹೇಳಿದ್ದೇವೆ. ವರದಿಯಲ್ಲಿ ಏನು ಬರುತ್ತೆ ಎಂದು ತಿಳಿದುಕೊಳ್ಳೋಣ. ಯಾಕೆಂದರೆ ಜನರಿಗೆ ಈ ವಿಚಾರದಲ್ಲಿ ಬಹಳ ಗೊಂದಲ ಶುರುವಾಗಿದೆ. ತಿರುಪತಿ ಲಡ್ಡು ಪ್ರಸಾದದಲ್ಲಿ ಈ ರೀತಿ ಇದೆ ಅಂತ ಆದಾಗ ಯಾರನ್ನು ನಂಬಬೇಕು ಎಂಬ ಪ್ರಶ್ನೆ ಎದುರಾಗಿದೆ. ಮುಂದಿನ ದಿನಗಳಲ್ಲಿ ಪ್ರಸಾದವನ್ನು ಸ್ವೀಕರಿಸದೆ ಇರುವಂತ ಪರಿಸ್ಥಿತಿ ಬರಬಾರದೆಂದು ಪರಿಶೀಲನೆ ಮಾಡಿಸುತ್ತಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:45 pm, Sun, 22 September 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ