AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನವಿಲ್ಲ, ಸಾಲ ಮಾಡಿಲ್ಲ, ಆದಾಯವೂ ಕಡಿಮೆ ಎಂದ ವಿಶ್ವನಾಥ್

ಮೈಸೂರು: ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಒಂದೇ ಒಂದು ರೂಪಾಯಿ ಸಾಲ ಇಲ್ಲ ಎಂದು ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ. ಹೆಚ್​.ವಿಶ್ವನಾಥ್ ಆಸ್ತಿ ಲೆಕ್ಕ: ಕಳೆದ ವರ್ಷಕ್ಕಿಂತ ಈ ವರ್ಷ 30,450ರೂ. ಆದಾಯ ಕಡಿಮೆಯಾಗಿದೆ ಎಂದು ನಮೂದಿಸಿದ್ದಾರೆ. ಅಲ್ಲದೆ, ಹೆಚ್.ವಿಶ್ವನಾಥ್ ಹಾಗೂ ಪತ್ನಿ ಶಾಂತಮ್ಮ ಹೆಸರಿನಲ್ಲಿ ಒಂದೇ ಒಂದು ವಾಹನ ಇಲ್ಲ. ಪತಿ ಪತ್ನಿ ಹೆಸರಿನಲ್ಲಿ ಯಾವುದೇ ಸಾಲ ಮಾಡಿಲ್ಲ ಎಂದು ಅಫಿಡೆವಿಟ್ ಸಲ್ಲಿಸಿದ್ದಾರೆ. ಹೆಚ್.ವಿಶ್ವನಾಥ್ ಅವರು ಒಟ್ಟು 7,05,854ರೂ. […]

ವಾಹನವಿಲ್ಲ, ಸಾಲ ಮಾಡಿಲ್ಲ, ಆದಾಯವೂ ಕಡಿಮೆ ಎಂದ ವಿಶ್ವನಾಥ್
ಹೆಚ್.ವಿಶ್ವನಾಥ್
ಸಾಧು ಶ್ರೀನಾಥ್​
|

Updated on:Nov 19, 2019 | 1:01 PM

Share

ಮೈಸೂರು: ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಒಂದೇ ಒಂದು ರೂಪಾಯಿ ಸಾಲ ಇಲ್ಲ ಎಂದು ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ.

ಹೆಚ್​.ವಿಶ್ವನಾಥ್ ಆಸ್ತಿ ಲೆಕ್ಕ: ಕಳೆದ ವರ್ಷಕ್ಕಿಂತ ಈ ವರ್ಷ 30,450ರೂ. ಆದಾಯ ಕಡಿಮೆಯಾಗಿದೆ ಎಂದು ನಮೂದಿಸಿದ್ದಾರೆ. ಅಲ್ಲದೆ, ಹೆಚ್.ವಿಶ್ವನಾಥ್ ಹಾಗೂ ಪತ್ನಿ ಶಾಂತಮ್ಮ ಹೆಸರಿನಲ್ಲಿ ಒಂದೇ ಒಂದು ವಾಹನ ಇಲ್ಲ. ಪತಿ ಪತ್ನಿ ಹೆಸರಿನಲ್ಲಿ ಯಾವುದೇ ಸಾಲ ಮಾಡಿಲ್ಲ ಎಂದು ಅಫಿಡೆವಿಟ್ ಸಲ್ಲಿಸಿದ್ದಾರೆ.

ಹೆಚ್.ವಿಶ್ವನಾಥ್ ಅವರು ಒಟ್ಟು 7,05,854ರೂ. ಮೌಲ್ಯದ ಚರಾಸ್ತಿ ಹೊಂದಿದ್ದು, ಪತ್ನಿ ಶಾಂತಮ್ಮ 17,67,512ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ವಿಶ್ವನಾಥ್​ಗೆ 2 ಕೋಟಿ 80 ಲಕ್ಷ ರೂ. ಮೌಲ್ಯದ ಸ್ಥಿರಾಸ್ತಿ, ಪತ್ನಿ ಶಾಂತಮ್ಮ ಹೆಸರಿನಲ್ಲಿ 42 ಲಕ್ಷ ಮೌಲ್ಯದ ಸ್ಥಿರಾಸ್ತಿ ಇದೆ.

ಮಕ್ಕಳು ಸ್ವಾವಲಂಬಿತರು: ಪತಿ-ಪತ್ನಿ ಇಬ್ಬರ ಹೆಸರಿನಲ್ಲಿ ಕಳೆದ ಚುನಾವಣೆಗೂ ಈ ಚುನಾವಣೆಗು ಚರಾಸ್ತಿ ಮೌಲ್ಯ ಕಡಿಮೆ ಇದೆ. ಅಲ್ಲದೆ ಮಕ್ಕಳು ಸ್ವಾವಲಂಬಿತರು ಎಂದು ಹೆಚ್​.ವಿಶ್ವನಾಥ್ ಘೋಷಿಸಿಕೊಂಡಿದ್ದಾರೆ.

ಹೆಚ್.ವಿಶ್ವನಾಥ್ ಸಾಲದ ವಿಚಾರ ಮಾಜಿ ಸಚಿವ ಸಾ.ರಾ.ಮಹೇಶ್‌ರಿಂದ ಸಾರ್ವಜನಿಕವಾಗಿ ಚರ್ಚೆಗೆ ಒಳಗಾಗಿತ್ತು. ಸಾಲವಿತ್ತು ಎಂದು ವಿಶ್ವನಾಥ್ ಅವರೇ ಹೇಳಿದ್ದರು ಅಂತಾ ಸಾ.ರಾ.ಮಹೇಶ್ ಹೇಳಿದ್ದರು. ಆದರೆ ಅಫಿಡೆವಿಟ್‌ನಲ್ಲಿ ಯಾವುದೇ ಸಾಲ ಇಲ್ಲ ಎಂದು ಘೋಷಿಸಿಕೊಂಡಿದ್ದಾರೆ.

Published On - 8:17 pm, Mon, 18 November 19

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ