AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನವಿಲ್ಲ, ಸಾಲ ಮಾಡಿಲ್ಲ, ಆದಾಯವೂ ಕಡಿಮೆ ಎಂದ ವಿಶ್ವನಾಥ್

ಮೈಸೂರು: ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಒಂದೇ ಒಂದು ರೂಪಾಯಿ ಸಾಲ ಇಲ್ಲ ಎಂದು ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ. ಹೆಚ್​.ವಿಶ್ವನಾಥ್ ಆಸ್ತಿ ಲೆಕ್ಕ: ಕಳೆದ ವರ್ಷಕ್ಕಿಂತ ಈ ವರ್ಷ 30,450ರೂ. ಆದಾಯ ಕಡಿಮೆಯಾಗಿದೆ ಎಂದು ನಮೂದಿಸಿದ್ದಾರೆ. ಅಲ್ಲದೆ, ಹೆಚ್.ವಿಶ್ವನಾಥ್ ಹಾಗೂ ಪತ್ನಿ ಶಾಂತಮ್ಮ ಹೆಸರಿನಲ್ಲಿ ಒಂದೇ ಒಂದು ವಾಹನ ಇಲ್ಲ. ಪತಿ ಪತ್ನಿ ಹೆಸರಿನಲ್ಲಿ ಯಾವುದೇ ಸಾಲ ಮಾಡಿಲ್ಲ ಎಂದು ಅಫಿಡೆವಿಟ್ ಸಲ್ಲಿಸಿದ್ದಾರೆ. ಹೆಚ್.ವಿಶ್ವನಾಥ್ ಅವರು ಒಟ್ಟು 7,05,854ರೂ. […]

ವಾಹನವಿಲ್ಲ, ಸಾಲ ಮಾಡಿಲ್ಲ, ಆದಾಯವೂ ಕಡಿಮೆ ಎಂದ ವಿಶ್ವನಾಥ್
ಹೆಚ್.ವಿಶ್ವನಾಥ್
ಸಾಧು ಶ್ರೀನಾಥ್​
|

Updated on:Nov 19, 2019 | 1:01 PM

Share

ಮೈಸೂರು: ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಒಂದೇ ಒಂದು ರೂಪಾಯಿ ಸಾಲ ಇಲ್ಲ ಎಂದು ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ.

ಹೆಚ್​.ವಿಶ್ವನಾಥ್ ಆಸ್ತಿ ಲೆಕ್ಕ: ಕಳೆದ ವರ್ಷಕ್ಕಿಂತ ಈ ವರ್ಷ 30,450ರೂ. ಆದಾಯ ಕಡಿಮೆಯಾಗಿದೆ ಎಂದು ನಮೂದಿಸಿದ್ದಾರೆ. ಅಲ್ಲದೆ, ಹೆಚ್.ವಿಶ್ವನಾಥ್ ಹಾಗೂ ಪತ್ನಿ ಶಾಂತಮ್ಮ ಹೆಸರಿನಲ್ಲಿ ಒಂದೇ ಒಂದು ವಾಹನ ಇಲ್ಲ. ಪತಿ ಪತ್ನಿ ಹೆಸರಿನಲ್ಲಿ ಯಾವುದೇ ಸಾಲ ಮಾಡಿಲ್ಲ ಎಂದು ಅಫಿಡೆವಿಟ್ ಸಲ್ಲಿಸಿದ್ದಾರೆ.

ಹೆಚ್.ವಿಶ್ವನಾಥ್ ಅವರು ಒಟ್ಟು 7,05,854ರೂ. ಮೌಲ್ಯದ ಚರಾಸ್ತಿ ಹೊಂದಿದ್ದು, ಪತ್ನಿ ಶಾಂತಮ್ಮ 17,67,512ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ವಿಶ್ವನಾಥ್​ಗೆ 2 ಕೋಟಿ 80 ಲಕ್ಷ ರೂ. ಮೌಲ್ಯದ ಸ್ಥಿರಾಸ್ತಿ, ಪತ್ನಿ ಶಾಂತಮ್ಮ ಹೆಸರಿನಲ್ಲಿ 42 ಲಕ್ಷ ಮೌಲ್ಯದ ಸ್ಥಿರಾಸ್ತಿ ಇದೆ.

ಮಕ್ಕಳು ಸ್ವಾವಲಂಬಿತರು: ಪತಿ-ಪತ್ನಿ ಇಬ್ಬರ ಹೆಸರಿನಲ್ಲಿ ಕಳೆದ ಚುನಾವಣೆಗೂ ಈ ಚುನಾವಣೆಗು ಚರಾಸ್ತಿ ಮೌಲ್ಯ ಕಡಿಮೆ ಇದೆ. ಅಲ್ಲದೆ ಮಕ್ಕಳು ಸ್ವಾವಲಂಬಿತರು ಎಂದು ಹೆಚ್​.ವಿಶ್ವನಾಥ್ ಘೋಷಿಸಿಕೊಂಡಿದ್ದಾರೆ.

ಹೆಚ್.ವಿಶ್ವನಾಥ್ ಸಾಲದ ವಿಚಾರ ಮಾಜಿ ಸಚಿವ ಸಾ.ರಾ.ಮಹೇಶ್‌ರಿಂದ ಸಾರ್ವಜನಿಕವಾಗಿ ಚರ್ಚೆಗೆ ಒಳಗಾಗಿತ್ತು. ಸಾಲವಿತ್ತು ಎಂದು ವಿಶ್ವನಾಥ್ ಅವರೇ ಹೇಳಿದ್ದರು ಅಂತಾ ಸಾ.ರಾ.ಮಹೇಶ್ ಹೇಳಿದ್ದರು. ಆದರೆ ಅಫಿಡೆವಿಟ್‌ನಲ್ಲಿ ಯಾವುದೇ ಸಾಲ ಇಲ್ಲ ಎಂದು ಘೋಷಿಸಿಕೊಂಡಿದ್ದಾರೆ.

Published On - 8:17 pm, Mon, 18 November 19

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ