AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರು ರಾಜೀನಾಮೆ ನೀಡಿದ್ದ 15 ಕ್ಷೇತ್ರಗಳಿಗೆ ಉಪಚುನಾವಣೆ ಫಿಕ್ಸ್

ಕಾಂಗ್ರೆಸ್​-ಜೆಡಿಎಸ್ ಪಕ್ಷದ​ ಶಾಸಕರ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯದ 15 ಕ್ಷೇತ್ರಗಳಿಗೆ ಅ. 21ರಂದು ಉಪಚುನಾವಣೆ ನಡೆಯಲಿದೆ. ಉಳಿದ 2 ಕ್ಷೇತ್ರಗಳಾದ  ಮಸ್ಕಿ, ರಾಜರಾಜೇಶ್ವರಿನಗರ ಕ್ಷೇತ್ರಗಳ ಉಪ ಚುನಾವಣೆ ನಡೆಯುವುದಿಲ್ಲ. ಉಪಚುನಾವಣೆ ನಡೆಯಲಿರುವ ವಿಧಾನಸಭಾ ಕ್ಷೇತ್ರಗಳ ವಿವರ: ಸಮ್ಮಿಶ್ರ ಸರ್ಕಾರದ ವಿರುದ್ಧ ಆಕ್ರೋಶದಿಂದ ಕಾಂಗ್ರೆಸ್, ಜೆಡಿಎಸ್​ನ 17 ಶಾಸಕರು ರಾಜೀನಾಮೆ ನೀಡಿದ್ದರು. ಹೀಗಾಗಿ ಅಂದಿನ ಸ್ಪೀಕರ್ ರಮೇಶ್ ಕುಮಾರ್​ ರಾಜೀನಾಮೆ ನೀಡಿದ ಶಾಸಕರನ್ನು ಅನರ್ಹಗೊಳಿಸಿದ್ದರು. ಅನರ್ಹಗೊಂಡ 17 ಶಾಸಕರ ಕ್ಷೇತ್ರಗಳ ಪೈಕಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. […]

ಶಾಸಕರು ರಾಜೀನಾಮೆ ನೀಡಿದ್ದ 15 ಕ್ಷೇತ್ರಗಳಿಗೆ ಉಪಚುನಾವಣೆ ಫಿಕ್ಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 21, 2019 | 1:08 PM

Share

ಕಾಂಗ್ರೆಸ್​-ಜೆಡಿಎಸ್ ಪಕ್ಷದ​ ಶಾಸಕರ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯದ 15 ಕ್ಷೇತ್ರಗಳಿಗೆ ಅ. 21ರಂದು ಉಪಚುನಾವಣೆ ನಡೆಯಲಿದೆ. ಉಳಿದ 2 ಕ್ಷೇತ್ರಗಳಾದ  ಮಸ್ಕಿ, ರಾಜರಾಜೇಶ್ವರಿನಗರ ಕ್ಷೇತ್ರಗಳ ಉಪ ಚುನಾವಣೆ ನಡೆಯುವುದಿಲ್ಲ.

ಉಪಚುನಾವಣೆ ನಡೆಯಲಿರುವ ವಿಧಾನಸಭಾ ಕ್ಷೇತ್ರಗಳ ವಿವರ: ಸಮ್ಮಿಶ್ರ ಸರ್ಕಾರದ ವಿರುದ್ಧ ಆಕ್ರೋಶದಿಂದ ಕಾಂಗ್ರೆಸ್, ಜೆಡಿಎಸ್​ನ 17 ಶಾಸಕರು ರಾಜೀನಾಮೆ ನೀಡಿದ್ದರು. ಹೀಗಾಗಿ ಅಂದಿನ ಸ್ಪೀಕರ್ ರಮೇಶ್ ಕುಮಾರ್​ ರಾಜೀನಾಮೆ ನೀಡಿದ ಶಾಸಕರನ್ನು ಅನರ್ಹಗೊಳಿಸಿದ್ದರು. ಅನರ್ಹಗೊಂಡ 17 ಶಾಸಕರ ಕ್ಷೇತ್ರಗಳ ಪೈಕಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ.

ಯಲ್ಲಾಪುರ ಕ್ಷೇತ್ರ-ಅರೆಬೈಲ್ ಶಿವರಾಮ್ ಹೆಬ್ಬಾರ್, ಯಶವಂತಪುರ ಕ್ಷೇತ್ರ-ಎಸ್.ಟಿ.ಸೋಮಶೇಖರ್, ವಿಜಯನಗರ ಕ್ಷೇತ್ರ-ಆನಂದ್ ಸಿಂಗ್, ಶಿವಾಜಿನಗರ ಕ್ಷೇತ್ರ-ಆರ್.ರೋಷನ್ ಬೇಗ್, ಹೊಸಕೋಟೆ ಕ್ಷೇತ್ರ-ಎಂಟಿಬಿ ನಾಗರಾಜ್, ಹುಣಸೂರು ಕ್ಷೇತ್ರ-ಅಡಗೂರು ಹೆಚ್.ವಿಶ್ವನಾಥ್, ಕೆ.ಆರ್.ಪೇಟೆ ಕ್ಷೇತ್ರ-ಕೆ.ಸಿ.ನಾರಾಯಣಗೌಡ, ಕೆ.ಆರ್.ಪುರಂ ಕ್ಷೇತ್ರ-ಭೈರತಿ ಬಸವರಾಜ್, ಮಹಾಲಕ್ಷ್ಮೀ ಲೇಔಟ್ ಕ್ಷೇತ್ರ-ಕೆ.ಗೋಪಾಲಯ್ಯ, ಚಿಕ್ಕಬಳ್ಳಾಪುರ ಕ್ಷೇತ್ರ-ಡಾ.ಕೆ.ಸುಧಾಕರ್, ಗೋಕಾಕ್ ಕ್ಷೇತ್ರ-ರಮೇಶ್ ಎಲ್.ಜಾರಕಿಹೊಳಿ, ಅಥಣಿ ಕ್ಷೇತ್ರ-ಮಹೇಶ್ ಕುಮಟಳ್ಳಿ, ರಾಣೆಬೆನ್ನೂರು ಕ್ಷೇತ್ರ-ಕೆಪಿಜೆಪಿಯಿಂದ ಗೆದ್ದಿದ್ದ ಆರ್.ಶಂಕರ್, ಕಾಗವಾಡ ಕ್ಷೇತ್ರ-ಶ್ರೀಮಂತ ಪಾಟೀಲ, ಹಿರೇಕೆರೂರು ಕ್ಷೇತ್ರ-ಬಿ.ಸಿ.ಪಾಟೀಲ್ ರಾಜೀನಾಮೆ ನೀಡಿ ಅನರ್ಹಗೊಂಡಿದ್ದರು. ಈಗ ಈ 15 ಕ್ಷೇತ್ರಗಳಲ್ಲೂ ಉಪಚುನಾವಣೆ ನಡೆಯಲಿದೆ.

ಉಪಚುನಾವಣೆ ನಡೆಯದ ಕ್ಷೇತ್ರಗಳು: ಉಳಿದ ಎರಡು ಕ್ಷೇತ್ರಗಳಾದ ರಾಯಚೂರಿನ ಮಸ್ಕಿ-ಪ್ರತಾಪ್ ಗೌಡ ಪಾಟೀಲ್ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ-ಮುನಿರತ್ನ ಸಹ ಅನರ್ಹಗೊಂಡಿದ್ದಾರೆ. ಆದ್ರೆ ನ್ಯಾಯಾಲಯದಲ್ಲಿ ತಡೆಯಾಜ್ಞೆಯಿರುವ ಕಾರಣ ಈ ಎರಡೂ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುವುದಿಲ್ಲ.

ಯಾವುದೇ ಅನರ್ಹ ಶಾಸಕರೂ ಉಪ ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಇದು ಕಾನೂನುರೀತ್ಯವೇ ಇದೆ. ಸರಿಯಾಗಿ ಒಂದು ತಿಂಗಳಿಗೆ ಅಂದ್ರೆ ಅಕ್ಟೋಬರ್​ 21ರಂದು ಸೋಮವಾರ ಕರ್ನಾಟಕದಲ್ಲಿ 15 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸುನೀಲ್ ಅರೋರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

Published On - 12:47 pm, Sat, 21 September 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ