AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಣಕ್ಯ ವಿವಿ ವಿಧೇಯಕಕ್ಕೆ ಅಂಗೀಕಾರ: ಇಂಥ ಇನ್ನೂ 10 ವಿವಿಗಳು ಬಂದ್ರೂ ಸೌಲಭ್ಯ ಕೊಡ್ತೇವೆ ಎಂದ ಸಿಎಂ

ಇಂಥ ಶಿಕ್ಷಣ ಸಂಸ್ಥೆಗಳಿಗೆ ಸಾಧ್ಯವಾದಷ್ಟೂ ಅನುಕೂಲ ಮಾಡಿಕೊಡಿ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸರ್ಕಾರಕ್ಕೆ ಸಲಹೆ ಮಾಡಿದರು.

ಚಾಣಕ್ಯ ವಿವಿ ವಿಧೇಯಕಕ್ಕೆ ಅಂಗೀಕಾರ: ಇಂಥ ಇನ್ನೂ 10 ವಿವಿಗಳು ಬಂದ್ರೂ ಸೌಲಭ್ಯ ಕೊಡ್ತೇವೆ ಎಂದ ಸಿಎಂ
ಅಶ್ವತ್ಥ್ ನಾರಾಯಣ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Sep 21, 2021 | 10:49 PM

Share

ಬೆಂಗಳೂರು: ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಭೂಮಿ ನೀಡುವ ವಿಧೇಯಕ್ಕೆ ಕರ್ನಾಟಕ ವಿಧಾನಸಭೆ ಮಂಗಳವಾರ ಅನುಮೋದನೆ ನೀಡಿತು. ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಚಾಣಕ್ಯ ವಿವಿಗೆ ಭೂಮಿ ನೀಡಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಹೇಳಿದರು.

ಪ್ರತಿಪಕ್ಷ ಕಾಂಗ್ರೆಸ್​ನ ಸಿದ್ದರಾಮಯ್ಯ ಮತ್ತು ರಮೇಶ್​ ಕುಮಾರ್ ವಿಧೇಯಕಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ರೈತರಿಂದ ಕೈಗಾರಿಕೆಗೆಂದು ವಶಪಡಿಸಿಕೊಂಡ ಭೂಮಿಯನ್ನು ಹೀಗೆ ಕಡಿಮೆ ದರದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗೆ ನೀಡುವುದು ಕಾನೂನು ಬಾಹಿರ ಎಂದು ರಮೇಶ್​ ಕುಮಾರ್ ವಿಶ್ಲೇಷಿಸಿದರು.

ಚರ್ಚೆಯ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಟೊಯೊಟಾ ಕಾರ್ಖಾನೆಗೆ ಜಾಗ ಒದಗಿಸಿದಾಗ ನಾವು ವಿರೋಧಿಸಿದ್ದೆವು. ಅದರೆ ರಾಜ್ಯದ ಅಭಿವೃದ್ಧಿಗೆ ಅನಿವಾರ್ಯ ಎಂದು ನೀವು ಸಮಜಾಯಿಷಿ ಕೊಟ್ಟಿದ್ದಿರಿ. ಮಕ್ಕಳಿಗೆ ವಿದ್ಯೆ ಕೊಡುವ ಉದ್ದೇಶದಿಂದ ಬರುತ್ತಿರುವ ವಿಶ್ವವಿದ್ಯಾಲಯಕ್ಕೆ ಸರ್ಕಾರ ಭೂಮಿ ಒದಗಿಸಲಿದೆ. ಇಂಥ ಇನ್ನೂ 10 ವಿಶ್ವವಿದ್ಯಾಲಯಗಳು ಬಂದರೂ ಅಗತ್ಯ ಸೌಕರ್ಯ ಒದಗಿಸುತ್ತೇವೆ. ಇದು ನಮ್ಮ ಸರ್ಕಾರದ ನಿಲುವು ಎಂದು ಸ್ಪಷ್ಟಪಡಿಸಿದರು.

ವಿಧೇಯಕದ ಬಗ್ಗೆ ಮಾತನಾಡಿದ ಸಚಿವ ಅಶ್ವತ್ಥ ನಾರಾಯಣ, ಈ ಹಿಂದೆಯೂ ಶಿಕ್ಷಣ ಸಂಸ್ಥೆಗಳಿಗೆ, ಹಲವು ವಿಶ್ವವಿದ್ಯಾಲಯಗಳಿಗೆ ಸರ್ಕಾರದಿಂದಲೇ ಜಾಗ ಕೊಡಲಾಗಿದೆ. ಚಾಣಕ್ಯ ವಿವಿ ಬಗ್ಗೆ ಯಾಕೆ ಬೊಟ್ಟುಮಾಡಿ ತೋರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಅನುಕೂಲ ಮಾಡಿಕೊಡಬೇಕು. ವಿಧಾನಸಭೆಯಲ್ಲಿ ಚಾಣಕ್ಯ ವಿವಿ ಬಿಲ್ ಪಾಸ್ ಮಾಡಲಾಗಿದೆ. ವಿಧಾನ ಪರಿಷತ್​ನಲ್ಲಿ ಚಾಣಕ್ಯ ವಿವಿ ಬಿಲ್ ಮಂಡಿಸಲಾಗಿದೆ. ಬಿಲ್​ ಅಂಗೀಕಾರವಾದ ನಂತರ ವಿವಿ ಆರಂಭಿಸಲಾಗುವುದು ಎಂದು ಹೇಳಿದರು.

ವಿಧೇಯಕ ವಿರೋಧಿಸಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು. ಕಾಂಗ್ರೆಸ್ ಸಭಾತ್ಯಾಗ ನಡುವೆ ವಿಧೇಯಕ ಅಂಗೀಕಾರವಾಯಿತು. ಇಂಥ ಶಿಕ್ಷಣ ಸಂಸ್ಥೆಗಳಿಗೆ ಸಾಧ್ಯವಾದಷ್ಟೂ ಅನುಕೂಲ ಮಾಡಿಕೊಡಿ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸರ್ಕಾರಕ್ಕೆ ಸಲಹೆ ಮಾಡಿದರು.

(Karnataka Assembly Gives nod to Chanakya University Bill)

ಇದನ್ನೂ ಓದಿ: ಆನ್​ಲೈನ್ ಜೂಜಿಗೆ ಕಡಿವಾಣ ಹಾಕುವ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

ಇದನ್ನೂ ಓದಿ: ರಿಯಲ್ ಎಸ್ಟೇಟ್​ಗೆ ತುಸು ಅನುಕೂಲ: ಮುದ್ರಾಂಕ ಶುಲ್ಕ ಕಡಿತ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ