AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಪರಿಷತ್ ಕಲಾಪ: ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆಗೆ ಯತ್ನ, ಬೆಂಗಳೂರಿನಲ್ಲಿ 123 ಕೆರೆಗಳು ಮಾಯ

ವಿಧಾನ ಪರಿಷತ್​ ಕಲಾಪದಲ್ಲಿ ಪ್ರಸ್ತಾಪವಾದ ಅತ್ಯಂತ ಮುಖ್ಯವಾದ ಸಂಗತಿಗಳು ಇಲ್ಲಿವೆ.

ವಿಧಾನಪರಿಷತ್ ಕಲಾಪ: ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆಗೆ ಯತ್ನ, ಬೆಂಗಳೂರಿನಲ್ಲಿ 123 ಕೆರೆಗಳು ಮಾಯ
ಆರ್ ಅಶೋಕ್ ಮತ್ತು ಸುನೀಲ್ ಕುಮಾರ್
TV9 Web
| Updated By: guruganesh bhat|

Updated on: Sep 22, 2021 | 4:41 PM

Share

ಬೆಂಗಳೂರು: ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ ದೊರಕಬೇಕು. ಈ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ ಎಂದು ವಿಧಾನಪರಿಷತ್‌ನಲ್ಲಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ತುಳು ಭಾಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಅಧಿಕಾರಿಗಳ ಭೇಟಿ ಮಾಡುವುದಾಗಿಯೂ ಅವರು ತಿಳಿಸಿದ್ದಾರೆ.

ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ತುಳು ಮತ್ತು ಕೊಡವ ಭಾಷೆಗೆ ಸಾಂವಿಧಾನಿಕ ಮಾನ್ಯತೆ ದೊರಕಬೇಕಿದೆ. ತುಳು ಮತ್ತು ಕೊಡವ ಭಾಷೆಗಳು ಅಳಿವು ಉಳಿವು ಮಾಡಬೇಕಾಗಿರುವ ಕೇಂದ್ರ ಸರ್ಕಾರ ಸುಮ್ಮನೆ ಕುಳಿತಿದೆ. ತುಳು ಕೊಡವ ಭಾಷೆಯನ್ನು ಭಾರತದ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಈಮುನ್ನ ವಿಧಾನಪರಿಷತ್​ನಲ್ಲಿ ಆಗ್ರಹಿಸಿದ್ದರು.

ಬೆಂಗಳೂರಿನಲ್ಲಿ ಎಷ್ಟು ಕೆರೆಗಳು ಮಾಯವಾಗಿವೆ ಎಂದರೆ.. ಬೆಂಗಳೂರು ನಗರದಲ್ಲಿ 123 ಕೆರೆಗಳು ಮಂಗಮಾಯ ಆಗಿವೆ ಎಂದು ವಿಧಾನ ಪರಿಷತ್‌ನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ. 25 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ 837 ಕೆರೆಗಳಿದ್ದವು. ಈ ಪೈಕಿ 734 ಕೆರೆಗಳು ಮಾತ್ರ ಜೀವಂತವಾಗಿವೆ. ಅವುಗಳಲ್ಲಿ ಶೇಕಡಾ 90ರಷ್ಟು ಕೆರೆಗಳು ಒತ್ತುವರಿಯಾಗಿವೆ. ಬಿಡಿಎಯಿಂದಲೇ ಕೆರೆಗಳ ಒತ್ತುವರಿಯಾಗಿದೆ. ಕೆರೆಗಳ ಒತ್ತುವರಿ ತೆರವಿಗೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದೇವೆ. ಈಗ ಇರುವ ಕೆರೆಗಳನ್ನಾದರೂ ಉಳಿಸಬೇಕಿದೆ. ಪ್ರತಿ ಶನಿವಾರ ಕೆರೆಗಳ ಒತ್ತುವರಿ ತೆರವು ಮಾಡಿ ಎಂದು ಸೂಚನೆ ಕೊಟ್ಟಿದ್ದೇವೆ.

ನಾವೂ ನೀವು ಒಂದು ನಿರ್ಧಾರಕ್ಕೆ ಬಂದು ಕೆರೆಗಳನ್ನು ಉಳಿಸಬೇಕಿದೆ. ಅವೆಲ್ಲವೂ ರಾಜರು ಮಹಾರಾಜರು ಕಟ್ಟಿದ ಕೆರೆಗಳಾಗಿವೆ. ನಾವಂತೂ ಕೆರೆ ನಿರ್ಮಾಣ ಮಾಡಲಾಗಿಲ್ಲ. ನೀವು ನಾವೆಲ್ಲ ಒಂದು ತೀರ್ಮಾನ ತೆಗೆದುಕೊಂಡರೆ ಒತ್ತುವರಿ ತೆರವು ಮಾಡಬಹುದು ಎಂದು ಅವರು ವಿನಂತಿ ಮಾಡಿದರು.

ಇದನ್ನೂ ಓದಿ: 

ಶಾಲಾ ಕಾಲೇಜು ಪ್ರಾರಂಭ ಆದರೂ ಬಸ್ಗಳನ್ನು ಬಿಟ್ಟಿಲ್ಲ ವಿಧಾನಸಭೆಯಲ್ಲಿ ಬೇಲೂರು ಶಾಸಕ ಪ್ರಸ್ತಾಪ, ಇದಕ್ಕೆ ಸಾರಿಗೆ ಸಚಿವರು ನೀಡಿದ ಉತ್ತರ ಏನು?

ಆನ್​ಲೈನ್ ಜೂಜಿಗೆ ಕಡಿವಾಣ ಹಾಕುವ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

(Karnataka Assembly Session 2021 Minister R Ashok says 123 lakes disappeared in Bengaluru Minister Sunil Kumar says Tulu language have constitutionally recognized)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ