AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಲ್​ ಬೂತ್​ನಲ್ಲಿ ಶಾಸಕರಿಗೆ ಅವಮಾನ; ಸದನದಲ್ಲಿ ಜನರ ಕಷ್ಟಗಳಿಗೆ ಪರಿಹಾರ ಹುಡುಕೋಣ, ನಮ್ಮ ಸಮಸ್ಯೆಗಲ್ಲ ಎಂದ ಸ್ಪೀಕರ್ ಕಾಗೇರಿ

ಜನಪ್ರತಿನಿಧಿಗಳಿಗೆ ಪ್ರತ್ಯೇಕ ಮಾರ್ಗ ಮಾಡಿ, ಇದು ನಮ್ಮ ಗೌರವದ ಪ್ರಶ್ನೆ ಆಗುತ್ತದೆ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಆಗ್ರಹಿಸಿದರು.

ಟೋಲ್​ ಬೂತ್​ನಲ್ಲಿ ಶಾಸಕರಿಗೆ ಅವಮಾನ; ಸದನದಲ್ಲಿ ಜನರ ಕಷ್ಟಗಳಿಗೆ ಪರಿಹಾರ ಹುಡುಕೋಣ, ನಮ್ಮ ಸಮಸ್ಯೆಗಲ್ಲ ಎಂದ ಸ್ಪೀಕರ್ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ
TV9 Web
| Edited By: |

Updated on:Sep 15, 2021 | 6:32 PM

Share

ವಿಧಾನಸೌಧ: ಎಂಎಲ್ಎ ಆದರೂ ಸಹ ಟೋಲ್ ಬೂತ್​ಗಳಲ್ಲಿ ನಮಗೆ ಅವಮಾನ ಆಗುತ್ತಿದೆ. ಪಾಸ್ ಇದ್ದರೂ ಐಡಿ ಕಾರ್ಡ್ ಕೇಳುತ್ತಾರೆ ಎಂದು ಜೆಡಿಎಸ್ ಶಾಸಕ ಅನ್ನದಾನಿ ವಿಧಾನಸಭಾ ಕಲಾಪದಲ್ಲಿ‌ ಸರ್ಕಾರದ ಗಮನ ಸೆಳೆದರು. ಐಟಿ ಕಾರ್ಡನ್ನು ಟೋಲ್ಗಳಲ್ಲಿ ತೋರಿಸಿದರೆ ಸ್ಕ್ಯಾನ್ ಮಾಡಬೇಕು ಅಂತಾರೆ. ತುರ್ತು ಸಂದರ್ಭದಲ್ಲಿ ನಮಗೆ ಕೂಡಾ ಪ್ರಯಾಣಿಸಲಾಗುತ್ತಿಲ್ಲ. ನಮ್ಮ ಪಾಸ್ಅನ್ನು ಅನುಮಾನವಾಗಿ ನೋಡುತ್ತಾರೆ. ವಿಪಿಐ ಲೈನ್​ನಲ್ಲಿಯೂ ಅವಕಾಶ‌ ನೀಡುತ್ತಿಲ್ಲ ಎಂದು ಶಾಸಕ ಅನ್ನದಾನಿ ಆಕ್ಷೇಪ ವ್ಯಕ್ತಪಡಿಸಿದರು.

ಶಾಸಕ ಅನ್ನದಾನಿ ಅವರ ಆಕ್ಷೇಪಕ್ಕೆ ಉತ್ತರಿಸಿದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್, ದ್ವಿಪಥ‌ ರಸ್ತೆಯಲ್ಲಿ ವಿಐಪಿ ಲೈನ್ ಸಾಧ್ಯವಿಲ್ಲ, ಟೋಲ್​ನಲ್ಲಿ ವಿಐಪಿ ಲೈನ್ ಸಮಸ್ಯೆ ಇದೆ. ಪಾಸ್ ದುರುಪಯೋಗ ಕಾರಣಕ್ಕಾಗಿ ಟೋಲ್ ಬೂತ್​ನಲ್ಲಿ ಐಡಿ ಕಾರ್ಡ್ ಕೇಳುತ್ತಿದ್ದಾರೆ. ಈ ಬಗ್ಗೆ ಸೂಚನೆ ಕೊಡುತ್ತೇನೆ ಎಂದು ತಿಳಿಸಿದರು.

ಈ ವೇಳೆ ಮಧ್ಯಪ್ರವೇಶ ಮಾಡಿದ ಜೆಡಿಎಸ್ ಶಾಸಕ ಶಿವಲಿಂಗೇಗೌಡ, ಶಾಸಕರಿಗೆ ಕೊಟ್ಟಿರುವ ಪಾಸ್ ವಾಪಸ್ ತಗೊಳ್ಳಿ, ನಾವೇನು ಭಿಕ್ಷುಕರಾ? ನಮಗೆ ಮರ್ಯಾದೆ ಪ್ರಶ್ನೆ, ನಾವು ದುಡ್ಡು ಕೊಟ್ಟು ಹೋಗುತ್ತೇವೆ. ವಿಶೇಷ ರಿಯಾಯಿತಿ ಎಂದು ಪಾಸ್ ನೀಡಿದರೂ ನಮಗೆ ತೊಂದರೆ ಕೊಡುತ್ತಾರೆ. ಜನಪ್ರತಿನಿಧಿಗಳಿಗೆ ಪ್ರತ್ಯೇಕ ಮಾರ್ಗ ಮಾಡಿ, ಇದು ನಮ್ಮ ಗೌರವದ ಪ್ರಶ್ನೆ ಆಗುತ್ತದೆ ಎಂದು ಆಗ್ರಹಿಸಿದರು.

ಈ ಎಲ್ಲ ಚರ್ಚೆ-ಉತ್ತರ-ಆಕ್ಷೇಗಳ ನಂತರ ಮಾತನಾಡಿದ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಸದನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸೋಣ, ಜನರ ಕಷ್ಟಗಳಿಗೆ ಪರಿಹಾರ ಹುಡುಕೋಣ. ಜನಪ್ರತಿನಿಧಿಗಳ ಸಮಸ್ಯೆಗಳನ್ನು ನಾವೇ ಬೇರೊಂದು ಸಭೆ ಕರೆದು ಕುಳಿತು ಮಾತನಾಡಿ ಪರಿಹರಿಸಿಕೊಳ್ಳೋಣ’ ಎಂದು ಶಾಸಕರನ್ನು ಸಮಾಧಾನಗೊಳಿಸಿದರು.

ಇದನ್ನೂ ಓದಿ: 

ಸಿದ್ದರಾಮಯ್ಯ ಮೊಬೈಲ್ ಬಳಸುತ್ತಾರಾ? ಲೋಕಸಭೆಗೆ ಸ್ಪರ್ಧಿಸುತ್ತಾರಾ? ಸಿದ್ದರಾಮಯ್ಯ ವಾಚಿಸಿದ ಭಾಮಿನಿ ಷಟ್ಪದಿ ಯಾವುದು?

ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಸ್ತಾಪಿಸಿದ ಸಿದ್ದರಾಮಯ್ಯ; ಕಲಾಪದಲ್ಲಿ ಕಲಹ ಕೋಲಾಹಲ

(Karnataka Assembly Session 2021 Speaker Vishweshwar Hegde Kageri says will discuss People’s representatives problems in other time)

Published On - 6:31 pm, Wed, 15 September 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್