AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಲ್​ ಬೂತ್​ನಲ್ಲಿ ಶಾಸಕರಿಗೆ ಅವಮಾನ; ಸದನದಲ್ಲಿ ಜನರ ಕಷ್ಟಗಳಿಗೆ ಪರಿಹಾರ ಹುಡುಕೋಣ, ನಮ್ಮ ಸಮಸ್ಯೆಗಲ್ಲ ಎಂದ ಸ್ಪೀಕರ್ ಕಾಗೇರಿ

ಜನಪ್ರತಿನಿಧಿಗಳಿಗೆ ಪ್ರತ್ಯೇಕ ಮಾರ್ಗ ಮಾಡಿ, ಇದು ನಮ್ಮ ಗೌರವದ ಪ್ರಶ್ನೆ ಆಗುತ್ತದೆ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಆಗ್ರಹಿಸಿದರು.

ಟೋಲ್​ ಬೂತ್​ನಲ್ಲಿ ಶಾಸಕರಿಗೆ ಅವಮಾನ; ಸದನದಲ್ಲಿ ಜನರ ಕಷ್ಟಗಳಿಗೆ ಪರಿಹಾರ ಹುಡುಕೋಣ, ನಮ್ಮ ಸಮಸ್ಯೆಗಲ್ಲ ಎಂದ ಸ್ಪೀಕರ್ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ
TV9 Web
| Edited By: |

Updated on:Sep 15, 2021 | 6:32 PM

Share

ವಿಧಾನಸೌಧ: ಎಂಎಲ್ಎ ಆದರೂ ಸಹ ಟೋಲ್ ಬೂತ್​ಗಳಲ್ಲಿ ನಮಗೆ ಅವಮಾನ ಆಗುತ್ತಿದೆ. ಪಾಸ್ ಇದ್ದರೂ ಐಡಿ ಕಾರ್ಡ್ ಕೇಳುತ್ತಾರೆ ಎಂದು ಜೆಡಿಎಸ್ ಶಾಸಕ ಅನ್ನದಾನಿ ವಿಧಾನಸಭಾ ಕಲಾಪದಲ್ಲಿ‌ ಸರ್ಕಾರದ ಗಮನ ಸೆಳೆದರು. ಐಟಿ ಕಾರ್ಡನ್ನು ಟೋಲ್ಗಳಲ್ಲಿ ತೋರಿಸಿದರೆ ಸ್ಕ್ಯಾನ್ ಮಾಡಬೇಕು ಅಂತಾರೆ. ತುರ್ತು ಸಂದರ್ಭದಲ್ಲಿ ನಮಗೆ ಕೂಡಾ ಪ್ರಯಾಣಿಸಲಾಗುತ್ತಿಲ್ಲ. ನಮ್ಮ ಪಾಸ್ಅನ್ನು ಅನುಮಾನವಾಗಿ ನೋಡುತ್ತಾರೆ. ವಿಪಿಐ ಲೈನ್​ನಲ್ಲಿಯೂ ಅವಕಾಶ‌ ನೀಡುತ್ತಿಲ್ಲ ಎಂದು ಶಾಸಕ ಅನ್ನದಾನಿ ಆಕ್ಷೇಪ ವ್ಯಕ್ತಪಡಿಸಿದರು.

ಶಾಸಕ ಅನ್ನದಾನಿ ಅವರ ಆಕ್ಷೇಪಕ್ಕೆ ಉತ್ತರಿಸಿದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್, ದ್ವಿಪಥ‌ ರಸ್ತೆಯಲ್ಲಿ ವಿಐಪಿ ಲೈನ್ ಸಾಧ್ಯವಿಲ್ಲ, ಟೋಲ್​ನಲ್ಲಿ ವಿಐಪಿ ಲೈನ್ ಸಮಸ್ಯೆ ಇದೆ. ಪಾಸ್ ದುರುಪಯೋಗ ಕಾರಣಕ್ಕಾಗಿ ಟೋಲ್ ಬೂತ್​ನಲ್ಲಿ ಐಡಿ ಕಾರ್ಡ್ ಕೇಳುತ್ತಿದ್ದಾರೆ. ಈ ಬಗ್ಗೆ ಸೂಚನೆ ಕೊಡುತ್ತೇನೆ ಎಂದು ತಿಳಿಸಿದರು.

ಈ ವೇಳೆ ಮಧ್ಯಪ್ರವೇಶ ಮಾಡಿದ ಜೆಡಿಎಸ್ ಶಾಸಕ ಶಿವಲಿಂಗೇಗೌಡ, ಶಾಸಕರಿಗೆ ಕೊಟ್ಟಿರುವ ಪಾಸ್ ವಾಪಸ್ ತಗೊಳ್ಳಿ, ನಾವೇನು ಭಿಕ್ಷುಕರಾ? ನಮಗೆ ಮರ್ಯಾದೆ ಪ್ರಶ್ನೆ, ನಾವು ದುಡ್ಡು ಕೊಟ್ಟು ಹೋಗುತ್ತೇವೆ. ವಿಶೇಷ ರಿಯಾಯಿತಿ ಎಂದು ಪಾಸ್ ನೀಡಿದರೂ ನಮಗೆ ತೊಂದರೆ ಕೊಡುತ್ತಾರೆ. ಜನಪ್ರತಿನಿಧಿಗಳಿಗೆ ಪ್ರತ್ಯೇಕ ಮಾರ್ಗ ಮಾಡಿ, ಇದು ನಮ್ಮ ಗೌರವದ ಪ್ರಶ್ನೆ ಆಗುತ್ತದೆ ಎಂದು ಆಗ್ರಹಿಸಿದರು.

ಈ ಎಲ್ಲ ಚರ್ಚೆ-ಉತ್ತರ-ಆಕ್ಷೇಗಳ ನಂತರ ಮಾತನಾಡಿದ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಸದನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸೋಣ, ಜನರ ಕಷ್ಟಗಳಿಗೆ ಪರಿಹಾರ ಹುಡುಕೋಣ. ಜನಪ್ರತಿನಿಧಿಗಳ ಸಮಸ್ಯೆಗಳನ್ನು ನಾವೇ ಬೇರೊಂದು ಸಭೆ ಕರೆದು ಕುಳಿತು ಮಾತನಾಡಿ ಪರಿಹರಿಸಿಕೊಳ್ಳೋಣ’ ಎಂದು ಶಾಸಕರನ್ನು ಸಮಾಧಾನಗೊಳಿಸಿದರು.

ಇದನ್ನೂ ಓದಿ: 

ಸಿದ್ದರಾಮಯ್ಯ ಮೊಬೈಲ್ ಬಳಸುತ್ತಾರಾ? ಲೋಕಸಭೆಗೆ ಸ್ಪರ್ಧಿಸುತ್ತಾರಾ? ಸಿದ್ದರಾಮಯ್ಯ ವಾಚಿಸಿದ ಭಾಮಿನಿ ಷಟ್ಪದಿ ಯಾವುದು?

ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಸ್ತಾಪಿಸಿದ ಸಿದ್ದರಾಮಯ್ಯ; ಕಲಾಪದಲ್ಲಿ ಕಲಹ ಕೋಲಾಹಲ

(Karnataka Assembly Session 2021 Speaker Vishweshwar Hegde Kageri says will discuss People’s representatives problems in other time)

Published On - 6:31 pm, Wed, 15 September 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?