AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಏಕಕಾಲಕ್ಕೆ 8 ಹಿರಿಯ IAS ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

ಅಧಿವೇಶನ ನಡೆಯುವಾಗ ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುವುದು ಅಥವಾ ಸಭಾತ್ಯಾಗ ಮಾಡೋದು ಹೊಸದೆನಲ್ಲ. ಆದ್ರೆ ಈ ಬಾರಿ ಅಪರೂಪದಲ್ಲಿ ಅಪರೂಪ ಎಂಬಂತೆ ಕರ್ನಾಟಕ ವಿಧಾನಸಭೆಯಲ್ಲಿ ಕಂಡು ಕೇಳರಿಯದ ಘಟನೆ ನಡೆದಿದೆ. ಸ್ಪೀಕರ್ ಯು.ಟಿ.ಖಾದರ್ ಅವರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಲಾಪ ನಡೆಸದೇ ಪೀಠದಿಂದ ಎದ್ದು ಹೋಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಇದೇ ಮೊದಲ ಬಾರಿಗೆ 8 ಹಿರಿಯ ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಏಕಕಾಲಕ್ಕೆ 8 ಹಿರಿಯ IAS ಅಧಿಕಾರಿಗಳಿಗೆ ಶೋಕಾಸ್ ನೋಟಿಸ್
Vidhana Soudha
Pramod Shastri G
| Edited By: |

Updated on:Mar 16, 2026 | 10:30 PM

Share

ಬೆಂಗಳೂರು, (ಮಾರ್ಚ್ 16): ಕರ್ನಾಟಕ ವಿಧಾನಸಭೆ ಅಧಿವೇಶನ (Karnataka Assembly Session 2026) ಇಂದು (ಮಾರ್ಚ್ 16) ಅಚ್ಚರಿಯ ಘಟನೆಗೆ ಸಾಕ್ಷಿಯಾಯ್ತು. ಸದನದಲ್ಲಿ ಶಾಸಕರು ಕೇಳುವ ಪ್ರಶ್ನೆಗಳಿಗೆ ಸಚಿವರು ಸಮರ್ಪಕ ಉತ್ತರ ಕೊಡುತ್ತಿಲ್ಲ ಎಂದು ಸಿಟ್ಟಾದ ಸ್ಪೀಕರ್ ಯು.ಟಿ.ಖಾದರ್ (UT Khader) ಸಭಾತ್ಯಾಗ ಮಾಡಿ ಸರ್ಕಾರಕ್ಕೆ ಚುರುಕು ಮುಟ್ಟಿಸಿದ್ದಾರೆ. ಬಜೆಟ್ ಕಲಾಪದ (Budget Session ) 7 ನೇ ದಿನವಾದ ಇವತ್ತು ಕೂಡ ಕಲಾಪ ನಡೆಸಲು ವಿಧಾನಸಭೆಗೆ ಆಗಮಿಸಿದ್ದರು. ಆದರೆ ಸಚಿವರು, ಅಧಿಕಾರಿಗಳು ಲಿಖಿತ ಪ್ರಶ್ನೆಗಳಿಗೆ ಉತ್ತರಿಸಲು ಅನುಪಸ್ಥಿತರಿದ್ದರು. ಇದಕ್ಕೆ ಮುನಿಸಿಕೊಂಡು ಪೀಠದಿಂದ ಹೊರಹೋದರು. ಇದರ ಬೆನ್ನಲ್ಲೇ ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಅಲ್ಲದೇ  ಕರ್ನಾಟಕದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಕಾರಣ ಕೇಳಿ ಬರೋಬ್ಬರಿ ಎಂಟು ಇಲಾಖೆಯ ಹಿರಿಯ ಐಎಎಸ್​ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಯಾವೆಲ್ಲಾ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎನ್ನುವ ಮಾಹಿತಿ ಟಿವಿ9ಗೆ ಲಭ್ಯವಾಗಿದೆ.

ಯಾವ್ಯಾವ ಇಲಾಖೆಯ ಕಾರ್ಯದರ್ಶಿಗೆ ಸೋಟಿಸ್?

ಇನ್ನು ಸ್ಪೀಕರ್ ಅಸಮಧಾನಗೊಂಡು ಎದ್ದು ಹೋಗಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಸಹ ಬೇಸರಗೊಂಡಿದ್ದು, ಅಧಿವೇಶನದಲ್ಲಿ ಶಾಸಕರುಗಳ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಕೊಡದ ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್​ ಅವರು 8 ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ಸದನದಲ್ಲಿ ಶಾಸಕರ ಪ್ರಶ್ನೆಗೆ ಉತ್ತರ ನೀಡದ ಹಿನ್ನೆಲೆಯಲ್ಲಿ ಈ ಕೆಳಗಿನ ಬರೋಬ್ಬರಿ 8 ಇಲಾಖೆಯ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಲಾಗಿದೆ.

  • ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ- ಆರ್​. ವಿನೋತ್ ಪ್ರಿಯಾ
  • ವಸತಿ ಇಲಾಖೆ ಕಾರ್ಯದರ್ಶಿ- ಮೋಹನ್​ ರಾಜ್​ ಕೆ.ಪಿ
  • ಸಾರಿಗೆ ಇಲಾಖೆ ಕಾರ್ಯದರ್ಶಿ-ಎನ್​.ವಿ ಪ್ರಸಾದ್
  • ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ- ಆರ್​.ಗೀರಿಶ್​
  • ಲೋಕಪಯೋಗಿ ಇಲಾಖೆ ಕಾರ್ಯದರ್ಶಿ-ಅಮಲಾನ್ ಆದಿತ್ಯ ಬಿಸ್ವಾಸ್
  • ಕಂದಾಯ ಇಲಾಖೆ-ರಾಜೇಂದರ್​ ಕುಮಾರ್ ಕಟಾರಿಯಾ

ಇದನ್ನೂ ಓದಿ: ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೊರನಡೆದ ಖಾದರ್​​

ಸರ್ಕಾರಕ್ಕೆ ತೀವ್ರ ಮುಜುಗರ, ಶಾಸಕರ ಹಕ್ಕು, ಸದನದ ಘನತೆಗೆ ಚ್ಯುತಿಯುಂಟು ಮಾಡಿರುತ್ತದೆ. ಸದನದಲ್ಲಿ ಪಶ್ನೆಗಳಿಗೆ ಏಕೆ ಉತ್ತರ ನೀಡಿಲ್ಲ? ಉತ್ತರಿಸದ ಬಗ್ಗೆ ಲಿಖಿತ ಸಮಜಾಯಿಸಿ ನೀಡುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ಇಂದೇ ವಿಧಾನ ಸಭೆ ಕಾರ್ಯದರ್ಶಿಗೆ ಉತ್ತರ ಒದಗಿಸುವಂತೆ ಸೂಚಿಸಲಾಗಿದೆ. ಉತ್ತರ ಒದಗಿಸಿದೆ ಇದ್ದರೆ ಶಾಸಕರಿಗೆ ಸಚಿವರ ಮೂಲಕ ವಿಳಂಬಕ್ಕೆ ಕಾರಣ ನೀಡಿ ಎಂದು ನೋಟಿಸ್ ಜಾರಿ ಮಾಡಲಾಗಿದೆ.

ಸಚಿವರ ನಡೆಗೆ ಸ್ಫೀಕರ್​ ಕೆಂಡಾಮಂಡಲ

ಬಜೆಟ್ ಕಲಾಪದ 7 ನೇ ದಿನವಾದ ಇವತ್ತು ಕೂಡ ಕಲಾಪ ನಡೆಸಲು ವಿಧಾನಸಭೆಗೆ ಆಗಮಿಸಿದ್ದರು. ಆದರೆ ಸಚಿವರು, ಅಧಿಕಾರಿಗಳು ಲಿಖಿತ ಪ್ರಶ್ನೆಗಳಿಗೆ ಉತ್ತರಿಸಲು ಅನುಪಸ್ಥಿತರಿದ್ದರು. ಇದಕ್ಕೆ ಮುನಿಸಿಕೊಂಡು ಪೀಠದಿಂದ ಹೊರಹೋದರು. ಸಚಿವರ ಕಾರ್ಯವೈಖರಿಗೆ ಸದನದಲ್ಲೇ ಗರಂ ಆದ ಸ್ಪೀಕರ್, 230ರ ಪ್ರಶ್ನೆಗಳಲ್ಲಿ 84 ಪ್ರಶ್ನೆಗಳಿಗೆ ಮಾತ್ರ ಸಚಿವರು ಉತ್ತರಿಸಿದ್ದಾರೆ. ಈ ಬಗ್ಗೆ ಮೊನ್ನೆಯೇ ಮಂತ್ರಿಗಳು ಮತ್ತು ಸರ್ಕಾರಕ್ಕೆ ಸ್ಪಷ್ಟವಾಗಿ ಹೇಳಲಾಗಿತ್ತು. ಕಲಾಪ ನಡೆಸುವುದು ಮಂತ್ರಿಗಳಿಗಾಗಿ ಅಲ್ಲ, ಶಾಸಕರ ಸಮಸ್ಯೆಗಳಿಗಾಗಿ. ಎಲ್ಲಾ ಪಕ್ಷಗಳ ಶಾಸಕರೂ ಪ್ರಶ್ನೆಗಳನ್ನ ಕೇಳುತ್ತಾರೆ. ನಿಯಮಾವಳಿ ಪ್ರಕಾರ ಕೇಳಿದ ಪ್ರಶ್ನೆಗಳಿಗೆ ಸರ್ಕಾರ ಉತ್ತರ ಕೊಡಲಿಲ್ಲ ಅಂದ್ರೆ ಹೇಗೆ? ಹಾಗಾದರೆ ಶಾಸಕರು ಸದನಕ್ಕೆ ಯಾಕೆ ಬರಬೇಕು ಹೇಳಿ? ಸರಿಯಾದ ಸಮಯಕ್ಕೆ ಮಂತ್ರಿಗಳು ಬರುವುದಿಲ್ಲ. ಹಿಂದೆಯೂ ಈ ಬಗ್ಗೆ ಸೂಚನೆ ನೀಡಿದ್ದೇನೆ. ಈಗಾಗಲೇ ನಾಲ್ಕು ಭಾರಿ ಸೂಚನೆ ನೀಡಿದ್ದೇನೆ. ಇಂದು ಸೇರಿ ಐದನೇ ಬಾರಿಯೂ ಸುಧಾರಿಸದಿದ್ದರೆ ಏನು ಮಾಡುವುದು? ಸುಧಾರಣೆ ಕಾಣಲೇ ಇಲ್ಲ. ಹೀಗಾದರೆ ಸದನ ನಡೆಸುವುದು ಹೇಗೆ? ಹಾಗಾಗಿ ಸಚಿವರು ಬಂದು ಉತ್ತರ ಹೇಳುವವರೆಗೂ ಸದನ ನಡೆಸುವುದಿಲ್ಲ ಎಂದೇಳಿ ಸ್ಪೀಕರ್ ಖಾದರ್ ಪೀಠದಿಂದ ಎದ್ದು ಹೋಗಿದ್ದರು.

ಸ್ಪೀಕರ್ ಸಿಟ್ಟಿಗೆ​​ ಮೂವರು ಅಧಿಕಾರಿಗಳ ತಲೆದಂಡ

ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ ಸದನ ಮುಂದೂಡಿದ್ದಲ್ಲದೆ ಪೀಠದಿಂದಲೇ ಎದ್ದು ಹೊರ ನಡೆದ ಯು.ಟಿ. ಖಾದರ್​​ ಅವರನ್ನು ಸಿಎಂ ಸಿದ್ದರಾಮಯ್ಯ ಅಂತಿಮವಾಗಿ ಮನವೊಲಿಸಿದ್ದಾರೆ. ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ.

ಸರ್ಕಾರ, ಸಚಿವರು, ಅಧಿಕಾರಿಗಳ ಕಾರ್ಯವೈಖರಿಗೆ ಸ್ವತಃ ಸಭಾಪತಿಗಳೇ ಗರಂ ಆಗಿದ್ದಾರೆ. ಈ ಸಂಬಂಧ ಕೆಲ ಅಧಿಕಾರಿಗಳ ತಲೆದಂಡವಾಗಿದ್ದು, 8 ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೂ ಶೋಕಾಸ್ ನೋಟಿಸ್ ನೀಡಲಾಗಿದೆ. ಇನ್ನಾದರೂ ಎಲ್ಲವೂ ಬದಲಾಗುತ್ತಾ? ಸಚಿವರು, ಅಧಿಕಾರಿಗಳಿಗೆ ಬುದ್ಧಿ ಬರುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ.

Published On - 10:23 pm, Mon, 16 March 26

Follow Us
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!