AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಕಲಾಪ: ಎರಡನೇ ದಿನವೂ ವಾಲ್ಮೀಕಿ ಹಗರಣದ್ದೇ ಸದ್ದು, ಬಿಜೆಪಿ – ಕಾಂಗ್ರೆಸ್ ವಾಕ್ಸಮರ

ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನದ ಎರಡನೇ ದಿನವೂ ವಿಧಾನಸಭೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ್ದೇ ಸದ್ದು ಜೋರಾಯಿತು. ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದರು. ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ್ ಮಧ್ಯೆ ತೀವ್ರ ವಾಕ್ಸಮರ ನಡೆಯಿತು.

ವಿಧಾನಸಭೆ ಕಲಾಪ: ಎರಡನೇ ದಿನವೂ ವಾಲ್ಮೀಕಿ ಹಗರಣದ್ದೇ ಸದ್ದು, ಬಿಜೆಪಿ - ಕಾಂಗ್ರೆಸ್ ವಾಕ್ಸಮರ
ಡಿಕೆ ಶಿವಕುಮಾರ್, ಅಶ್ವತ್ಥ್ ನಾರಾಯಣ್
ಪ್ರಸನ್ನ ಗಾಂವ್ಕರ್​
| Edited By: |

Updated on: Jul 16, 2024 | 2:17 PM

Share

ಬೆಂಗಳೂರು, ಜುಲೈ 16: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದೂ ಸಹ ವಿಧಾನಸಭೆ ಕಲಾಪದಲ್ಲಿ ವಾಲ್ಮೀಕಿ ನಿಗಮದ ಹಗರಣ ತೀವ್ರವಾಗಿ ಸದ್ದು ಮಾಡಿತು. ಮೊದಲೇ ಸಿದ್ಧವಾಗಿ ಬಂದಿದ್ದ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಮುಗಿ ಬೀಳಲು ಮುಂದಾದರು. ಆದರೆ ಮುಖ್ಯಮಂತ್ರಿಗಳು ಕಲಾಪದಲ್ಲಿ ಇರಲಿಲ್ಲ. ಈ ಕಾರಣಕ್ಕೆ ಬಿಜೆಪಿ ನಾಯಕರು ಮತ್ತಷ್ಟು ಸಿಡಿದೆದ್ದರು. ಮುಖ್ಯಮಂತ್ರಿಗಳ ವಿರುದ್ಧವೇ ಆರೋಪ ಕೇಳಿ ಬಂದಿದೆ. ಆರ್ಥಿಕ ಇಲಾಖೆ ಮೇಲೆ ನೇರ ಆರೋಪ ಇದೆ. ಮುಖ್ಯಮಂತ್ರಿಗಳನ್ನು ಕರೆಸಿ ಎಂದು ಬಿಜೆಪಿ ನಾಯಕರು ಪಟ್ಟು ಹಿಡಿದರು. ಇಲ್ಲದಿದ್ದರೆ ಕಲಾಪವನ್ನ ಮುಂದೂಡಿ ಎಂದು ಶಾಸಕ ಅಶ್ವತ್ಥ್ ನಾರಾಯಣ್ ಏರು ಧ್ವನಿಯಲ್ಲೇ ಆಗ್ರಹಿಸಿದರು.

ಅಶ್ವತ್ಥ್ ನಾರಾಯಣ್ VS ಡಿಕೆ ಶಿವಕುಮಾರ್ ಜಟಾಪಟಿ

ಅಶ್ವತ್ಥ್ ನಾರಾಯಣ್ ಆಗ್ರಹದಿಂದ ಕೆರಳಿದ ಡಿಸಿಎಂ ಡಿಕೆ ಶಿವಕುಮಾರ್, ‘ನೀನು ಮಾಡಬಾರದ್ದನ್ನು ಮಾಡಿರುವುದಕ್ಕೇ ನಾವು ಈಗ ಇಲ್ಲಿ ಕುಳಿತಿರುವುದು’ ಎಂದು ಗುಡುಗಿದರು. ಲೂಟಿ ಮಾಡುವುದರಲ್ಲಿ ಅಶ್ವತ್ಥ್ ನಾರಾಯಣ್ ಪಿತಾಮಹ ಅಂತ ಡಿಕೆ ಹೇಳಿದರು. ಈ ವೇಳೆ ಸದನದಲ್ಲಿ ಗದ್ದಲ ಉಂಟಾಯಿತು.

ಇಷ್ಟಕ್ಕೆ ಸುಮ್ಮನಾಗದ ಅಶ್ವತ್ಥ್ ನಾರಾಯಣ್, ನನ್ನ ಹೆಸರು ಹೇಳಿ ಆರೋಪ ಮಾಡಿದ್ದಾರೆ. ನಾನೇನು ಮಾಡಬಾರದ್ದನ್ನು ಮಾಡಿದ್ದೇನೆ ಹೇಳಿ ಎಂದು ಪಟ್ಟು ಹಿಡಿದರು. ಈ ವೇಳೆ ಡಿಕೆ ಶಿವಕುಮಾರ್ ಮತ್ತು ಅಶ್ವತ್ಥ್ ನಾರಾಯಣ್ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಇದಾದ ಬಳಿಕ ಅಶ್ವತ್ಥ್ ನಾರಾಯಣ್ ಡಿಸಿಎಂ ಕ್ಷಮೆ ಕೇಳಬೇಕು ಎಂದಿದ್ದಕ್ಕೆ ಮತ್ತೆ ಡಿಕೆ ಕೆರಳಿದರು. ಲೂಟಿಕೋರನ ಪಿತಾಮಹ ಅಂತ ಮತ್ತೊಮ್ಮೆ ಏರು ಧ್ವನಿಯಲ್ಲೇ ಹೇಳಿದರು. ಆಗ ಬಿಜೆಪಿ ಸದಸ್ಯರು ಅಶ್ವತ್ಥ್ ಬೆಂಬಲಕ್ಕೆ ಬಂದರು. ಡಿಕೆ ಶಿವಕುಮಾರ್ ಪಿತಾಮಹನ ಅಪ್ಪ ಎಂದರು.

ದಲಿತರ ಹಣ ಗ್ಯಾರಂಟಿಗೆ ಬಳಕೆ: ಸುನೀಲ್ ಕುಮಾರ್ ಆಕ್ರೋಶ

ದಲಿತರ ಹಣವನ್ನು ಲೂಟಿ ಮಾಡಿ ಸಮರ್ಥನೆ ನಿಂತಿದ್ದಾರೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸದನದಲ್ಲಿ ಕೋಲಾಹಲವೇ ಉಂಟಾಯಿತು.

ವಾಲ್ಮೀಕಿ ನಿಗಮ ಹಗರಣ: ಸ್ಫೋಟಕ ಮಾಹಿತಿ ಬಹಿರಂಗ

ಇತ್ತ ವಾಲ್ಮೀಕಿ ನಿಗಮ ಹಗರಣ ಕೇಸ್​ನ ವಿಚಾರಣೆಯಲ್ಲಿ ಮತ್ತಷ್ಟು ಸ್ಫೋಟಕ ಸತ್ಯಗಳು ಹೊಬೀಳುತ್ತಿವೆ. ನಾಗೇಂದ್ರ ಆಪ್ತ ಸಹಾಯಕ ನೆಕ್ಕಂಟಿ ನಾಗರಾಜ್ ಮೂಲಕ ರಾಯಚೂರಿನ ಕೋನಮ್ ವೆಂಕಟರೆಡ್ಡಿ ಹಾಗೂ ಮೂವರು ಕುಟುಂಬಸ್ಥರಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್​ನ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ವೆಂಕಟರೆಡ್ಡಿ ಖಾತೆಗೆ 12 ಲಕ್ಷ ರೂಪಾಯಿ, ಲಕ್ಷ್ಮೀದೇವಿ ಖಾತೆಗೆ 25 ಲಕ್ಷ, ರತ್ನಕುಮಾರಿ ಖಾತೆಗೆ 25 ಲಕ್ಷ, ಸಂದೀಪ್ ಅನ್ನೋನ ಖಾತೆಗೆ 25 ಲಕ್ಷ ಜಮೆ ಮಾಡಲಾಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಸದನದಲ್ಲಿ ಅಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಯಾರು ಹೆಚ್ಚು ಲೂಟಿಕೋರರು ಅಂತ ಕಾದಾಟ!

ಈ ಹಿನ್ನೆಲೆ ಸಿಬಿಐ ಸೂಚನೆ ನೀಡಿರುವ ಬೆನ್ನಲ್ಲೇ ಇಮೇಲ್ ಮತ್ತು ಬ್ಯಾಂಕ್​ಗೆ ನೋಟಿಸ್ ನೀಡಿ ನಾಲ್ವರ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲುಹಾಕಿಕೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ