AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Session: ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನವನ್ನು ಒಂದು ದಿನ ವಿಸ್ತರಣೆ ಮಾಡಲಾಗಿದೆ. ಸಭಾಪತಿ ಯು.ಟಿ. ಖಾದರ್ ನೇತೃತ್ವದಲ್ಲಿ ಇಂದು (ಫೆ.23) ವಿಧಾನಸಭೆ ಕಾರ್ಯ ಕಲಾಪ ಸಲಹಾ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

Karnataka Assembly Session: ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ
ಅಧಿವೇಶನ
Follow us
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ

Updated on:Feb 23, 2024 | 11:11 AM

ಬೆಂಗಳೂರು, ಫೆಬ್ರವರಿ 23: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅನಾರೋಗ್ಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನವನ್ನು (Karnataka Assembly Session) ಒಂದು ದಿನ ವಿಸ್ತರಣೆ ಮಾಡಲಾಗಿದೆ. ಸಭಾಪತಿ ಯು.ಟಿ. ಖಾದರ್ (UT Khadar) ನೇತೃತ್ವದಲ್ಲಿ ಇಂದು (ಫೆ.23) ವಿಧಾನಸಭೆ ಕಾರ್ಯ ಕಲಾಪ ಸಲಹಾ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಸೋಮವಾರ (ಫೆ.26) ಒಂದು ದಿನಕ್ಕೆ ವಿಧಾನಸಭೆ ಕಲಾಪ ನಡೆಸುವ ಮತ್ತು ಮಂಗಳವಾರ (ಫೆ.27) ರಾಜ್ಯಸಭಾ ಚುನಾವಣೆ ನಡೆಸುವ ನಿರ್ಣಯ ಕೈಗೊಳ್ಳಲಾಗಿದೆ. ಹೀಗಾಗಿ ಅಂದು ಕಲಾಪ ನಡೆಯುವುದಿಲ್ಲ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.26 ರಂದು ಬೆಳಗ್ಗೆ 9:30ಕ್ಕೆ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ಸಭೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ‌ ಸಿಎಂ ಬಸವರಾಜ ಬೊಮ್ಮಾಯಿ, ಸಂಸದೀಯ ವ್ಯವಹಾರಗಳ ಸಚಿವ ಹೆಚ್​.ಕೆ. ಪಾಟೀಲ್ ಸೇರಿದಂತೆ ಇತರೆ ಬಿಎಸಿ ಸದಸ್ಯರು ಭಾಗಿಯಾಗಿದ್ದರು.

ಫೆಬ್ರವರಿ 16ರ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದರು. ಬಳಿಕ ಎರಡು ದಿನ ನಿರಂತರ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಫೆ. 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಬೃಹತ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿ ಮಂಗಳೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಬಳಿಕ ಫೆ.18ರ ಭಾನುವಾರ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆ ಪ್ರವಾಸ ಕೈಗೊಂಡಿದ್ದರು. ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಭಾಷಣ ಮಾಡಿದ್ದರು.

ಕರ್ನಾಟಕ ಬಜೆಟ್ ಮಂಡನೆ ಬಳಿಕ ನಿರಂತರವಾಗಿ ಜಿಲ್ಲಾ ಪ್ರವಾಸಗಳನ್ನು ಕೈಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆ.19 ರಂದು ಅನಾರೋಗ್ಯಕ್ಕೆ ತುತ್ತಾಗಿದ್ದರು. ಅಂದು ವಿಶ್ರಾಂತಿಗಾಗಿ ಸಿಎಂ ಸಿದ್ದರಾಮಯ್ಯ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದರು. ಅಂದು ವಿಶ್ರಾಂತಿ ಪಡೆದು, ಮರುದಿನ ಮತ್ತೆ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು. ಆದರೆ ಇಂದು ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

ಇದನ್ನೂ ಓದಿ: ದೇವಸ್ಥಾನಗಳ ಹುಂಡಿ ಹಣ ಹಿಂದೂ ಧಾರ್ಮಿಕ ಆಚರಣೆಗೆ ಮಾತ್ರ ಬಳಕೆ: ಸಿದ್ದರಾಮಯ್ಯ ಸ್ಪಷ್ಟನೆ

3 ಗಂಟೆ 15 ನಿಮಿಷ ಸುದೀರ್ಘ ಬಜೆಟ್ ಭಾಷಣ ಮತ್ತು ಎರಡು ದಿನ ನಿರಂತರ ಜಿಲ್ಲಾ ಪ್ರವಾಸಗಳಲ್ಲಿ ಭಾಷಣ ಮಾಡಿರುವ ಹಿನ್ನೆಲೆ ಸಿದ್ದರಾಮಯ್ಯನವರಿಗೆ ಗಂಟಲು ನೋವುನ ಸಮಸ್ಯೆ ಎದುರಾಗಿದೆ. ಹೀಗಾಗಿ ವಿಶ್ರಾಂತಿಯ ಅವಶ್ಯಕತೆ ಇದೆ.

ವಿಪಕ್ಷ ನಾಯಕರು ಬಾವಿಗಳಿದು ಪ್ರತಿಭಟನೆ

ಶುಕ್ರವಾರ ಅಧಿವೇಶನ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕರು ಬಾವಿಗಿಳಿದು ಪ್ರತಿಭಟನೆ ಮಾಡಿದರು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಮಂಡನೆ ಮಾಡಲಿರುವ ಹಿನ್ನೆಲೆಯಲ್ಲಿ ಇಂದು (ಫೆ.23) ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸದನ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಹೀಗಾಗಿ ಸಭಾಪತಿಗಳು ಅಧಿವೇಶನವನ್ನು 10 ನಿಮಿಷ ಮುಂದೂಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Fri, 23 February 24

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ