AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲಿ ಹುಕ್ಕಾ ಪಾರ್ಲರ್ ಬಂದ್: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಕ್ಕಾ ಪಾರ್ಲರ್ ಬ್ಯಾನ್ ಮಾಡಲು ನಾವು ತೀರ್ಮಾನಿಸಿದ್ದೇವೆ. ಶೀಘ್ರದಲ್ಲೇ ಅದನ್ನು ಜಾರಿ ಮಾಡಲಿದ್ದೇವೆ. ಎಷ್ಟೇ ಪ್ರಭಾವಿಗಳು ಒತ್ತಡ ಹಾಕಿದರೂ ನಾವು ಮಣಿಯಲ್ಲ. ಹುಕ್ಕಾ ಪಾರ್ಲರ್ ಬ್ಯಾನ್ ಮಾಡುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದರು.

ಶೀಘ್ರದಲ್ಲಿ ಹುಕ್ಕಾ ಪಾರ್ಲರ್ ಬಂದ್: ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 18, 2021 | 10:46 PM

ಬೆಂಗಳೂರು: ಶೀಘ್ರದಲ್ಲೇ ಹುಕ್ಕಾ ಪಾರ್ಲರ್ ಗಳನ್ನು ಬಂದ್ ಮಾಡಲಾಗುವುದು ಮತ್ತು ಆಂಟಿಡ್ರಗ್ ಪಾಲಿಸಿ ಜಾರಿಗೆ ತರಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಪರಿಷತ್​ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಮಹಾಂತೇಶ್ ಕವಟಗಿಮಠ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಮಾದಕ ವಸ್ತು ಸೇವನೆ ಸಂಪೂರ್ಣವಾಗಿ ನಿಷೇಧ ಆಗಬೇಕಾಗಿದೆ. ಸಮಾಜದಿಂದ ಇದನ್ನು ತೊಡೆದು ಹಾಕಬೇಕಿದೆ. ಸಿಂಥೆಟಿಕ್‌ ಡ್ರಗ್ ಅನ್ನು ವಿದ್ಯಾರ್ಥಿಗಳಿಗೆ ಕೊಡುವ ಕೆಲಸವಾಗುತ್ತಿದೆ, ಚಾಕೊಲೇಟ್, ಬಿಸ್ಕೀಟ್ ರೂಪದಲ್ಲೂ ಡ್ರಗ್ಸ್ ತರಲಾಗುತ್ತಿದೆ, ಇದನ್ನು ನಿಲ್ಲಿಸಲು ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯು ನಮ್ಮ ಇಲಾಖೆ ಜೊತೆ ಕೈ ಜೋಡಿಸಬೇಕಿದೆ, ಮಾಧ್ಯಮಗಳ ಸಹಕಾರವು ಅಗತ್ಯ ಎಂದರು.

ಶಾಲೆ ಆವರಣದಲ್ಲಿ ಇಂತಹ ಚಟುವಟಿಕೆ ನಡೆಯದಂತೆ ನೋಡಿಕೊಳ್ಳುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಒಂದು ವೇಳೆ ಚಟುವಟಿಕೆ ನಡೆದರೆ ಸಂಬಂಧಪಟ್ಟ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ಸ್ಲಂನಲ್ಲೂ ಮಾದಕ ವಸ್ತು ವ್ಯಾಪಾರ ನಡೆಯುತ್ತಿದೆ, ಉನ್ನತ ಮಟ್ಟದಲ್ಲಿಯೂ ಮಾದಕ ವಸ್ತು ವ್ಯಾಪಾರವಾಗಲಿದೆ. ಇದರ ತಡೆಗೆ ಮುಂದಾಗಿದ್ದೇವೆ ಎಂದರು.

ನೆರೆ ರಾಜ್ಯಗಳಿಂದ ಮಾದಕ ವಸ್ತು ಸರಬರಾಜಾಗುತ್ತಿದೆ. ಹಾಗಾಗಿ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ಇರಿಸಿದ್ದೇವೆ. ಬರುವ ದಿನದಲ್ಲಿ ಆಂಟಿ‌ ಡ್ರಗ್ ಪಾಲಿಸಿ ತರಲಾಗುತ್ತದೆ,‌ ಎನ್​ಡಿಪಿಎಸ್ ನಿಯಮಗಳಲ್ಲಿ ಬದಲಾವಣೆ ತರಲು ಚಿಂತನೆ ನಡೆಸಿದ್ದು ಕೇಂದ್ರದ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದರು. ಹುಕ್ಕಾ ಪಾರ್ಲರ್​ಗೆ ಅನುಮತಿಯನ್ನು ಬಿಬಿಎಂಪಿ ಕೊಡಲಿದೆ. ಆದರೆ ಹುಕ್ಕಾ ಪಾರ್ಲರ್ ಬ್ಯಾನ್ ಮಾಡಲು ನಾವು ತೀರ್ಮಾನಿಸಿದ್ದೇವೆ. ಶೀಘ್ರದಲ್ಲೇ ಅದನ್ನು ಜಾರಿ ಮಾಡಲಿದ್ದೇವೆ. ಎಷ್ಟೇ ಪ್ರಭಾವಿಗಳು ಒತ್ತಡ ಹಾಕಿದರೂ ನಾವು ಮಣಿಯಲ್ಲ. ಹುಕ್ಕಾ ಪಾರ್ಲರ್ ಬ್ಯಾನ್ ಮಾಡುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇಬ್ಬರು ವಿದೇಶಿ ಡ್ರಗ್ಸ್ ಪೆಡ್ಲರ್‌ಗಳ ಬಂಧನ.. 75 ಲಕ್ಷ ಮೌಲ್ಯದ ಡ್ರಗ್ ಸೀಜ್

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್